ಪಿತ್ರೋಡ ಜೀ, ನಿಮಗೆ ನಾಚಿಕೆಯಾಗಬೇಕು, ನೀವು ದೇಶದ ಕ್ಷಮೆಯಾಚಿಸಬೇಕು: ರಾಹುಲ್
Team Udayavani, May 13, 2019, 7:15 PM IST
ಖನ್ನಾ , ಪಂಜಾಬ್ : 1984ರ ಸಿಕ್ಖ್ ವಿರೋಧಿ ನರಮೇಧಕ್ಕೆ ಸಂಬಂಧಿಸಿ ‘ಹುವಾ ತೋ ಹುವಾ – ಆದದ್ದು ಆಗಿ ಹೋಯಿತು, ಏನೀಗ ?’ ಎಂದು ಕಾಂಗ್ರೆಸ್ ನ ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಯಾಮ್ ಪಿತ್ರೋಡ ನೀಡಿದ್ದ ವಿವಾದಾತ್ಮಕ ಹೇಳಿಕೆ ಈಗ ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ ಅವರಿಗೆ ಪಂಜಾಬ್ ನಲ್ಲಿ ತಿರುಗುಬಾಣವಾಗಿದೆ.
ಪಂಜಾಬ್ ನ ಮೊದಲ ಚುನಾವಣಾ ರಾಲಿಯಲ್ಲಿಂದು ಮಾತನಾಡಿದ ರಾಹುಲ್ ಗಾಂಧಿ, “ಹುವಾ ತೋ ಹೇಳಿಕೆ ನೀಡಿದ್ದ ಪಿತ್ರೋಡ ಗೆ ನಾಚಿಕೆಯಾಗಬೇಕು; ಅವರು ಈ ಹೇಳಿಕೆಗಾಗಿ ದೇಶದ ಕ್ಷಮೆಯಾಚಿಸಬೇಕು’ ಎಂದು ಬಹಿರಂಗವಾಗಿ ಹೇಳುವ ಮೂಲಕ ಪಕ್ಷಕ್ಕೆ ಈಗಾಗಲೇ ಆಗಿರುವ ಭಾರೀ ಹಾನಿಯನ್ನು ಕಡಿಮೆಗೊಳಿಸುವ ಪ್ರಯತ್ನ ಮಾಡಿದರು.
ರಾಹುಲ್ ಗಾಂಧಿ ಅವರು ಈ ಮೊದಲೇ ಪಿತ್ರೋಡ ಅವರ ಹುವಾ ತೋ ಹುವಾ ಹೇಳಿಕೆಗೆ ತನ್ನ ಸಹಮತ ಇಲ್ಲ ಎಂದಿದ್ದರಲ್ಲದೆ ಅವರ ಹೇಳಿಕೆಯಿಂದ ದೂರ ಸರಿದಿದ್ದರು.
‘1984ರ ಸಿಕ್ಖ್ ವಿರೋಧಿ ಹಿಂಸೆ ಬಗ್ಗೆ ಸ್ಯಾಮ್ ಪಿತ್ರೋಡ ನೀಡಿದ್ದ ಹೇಳಿಕೆ ಸಂಪೂರ್ಣವಾಗಿ ತಪ್ಪು; ಅದಕ್ಕಾಗಿ ಅವರು (ಪಿತ್ರೋಡ) ದೇಶದ ಕ್ಷಮೆಯಾಚಿಸಬೇಕು; ನಾನಿದನ್ನು ಸಾರ್ವಜನಿಕವಾಗಿ ಹೇಳುತ್ತಿದ್ದೇನೆ; ಅವರಿಗೆ ಫೋನ್ ಮೂಲಕ ಈಗಾಗಲೇ ನಾನಿದನ್ನು ಹೇಳಿದ್ದೇನೆ. ಪಿತ್ರೋಡ ಜೀ, ನೀವು ಹೇಳಿರುವುದು ಸಂಪೂರ್ಣ ತಪ್ಪು; ಆ ಬಗ್ಗೆ ನಿಮಗೆ ನಾಚಿಕೆಯಾಗಬೇಕು; ಅದಕ್ಕಾಗಿ ನೀವು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು’ ಎಂದು ರಾಹುಲ್ ಗಾಂಧಿ ಇಂದಿಲ್ಲಿ ಮಾಡಿದ ಚುನಾವಣಾ ಪ್ರಚಾರ ಭಾಷಣದ ಕೊನೆಯಲ್ಲಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!
West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ
Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ
ಕಾಶ್ಮೀರದಲ್ಲಿ ಎನ್ಕೌಂಟರ್: ಇಬ್ಬರು ಉಗ್ರರ ಹತ್ಯೆ
Manipur; ಹಸುವಿಗೆ ಗುಂಡಿಟ್ಟು ಕೊಂದ ಕ್ರೂರಿ!: ವ್ಯಾಪಕ ಆಕ್ರೋಶ
MUST WATCH
ಹೊಸ ಸೇರ್ಪಡೆ
ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!
CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!
West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ
Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ
KKR ತಂಡಕ್ಕೆ ಮರಳಲಿರುವ ಅಫ್ಘಾನ್ ಬ್ಯಾಟರ್ ರಹ್ಮಾನುಲ್ಲ ಗುರ್ಬಾಝ್