ಮೈತ್ರಿ ಅಳಿವು-ಉಳಿವಿನ ಚರ್ಚೆಯಲ್ಲಿ ಸಿದ್ದು ಕೇಂದ್ರ ಸ್ಥಾನ
Team Udayavani, May 14, 2019, 3:10 AM IST
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ 2 ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶದ ಮೇಲೆ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಭವಿಷ್ಯ ನಿಂತಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ. ಮುಂದಾಗಬಹುದಾದ ಬೆಳವಣಿಗೆಯಲ್ಲಿ ಮಾತ್ರ ಮಾಜಿ ಸಿಎಂ ಸಿದ್ದರಾಮಯ್ಯ ಹೆಸರು ಪ್ರತಿಬಾರಿ ತಳಕು ಹಾಕಿಕೊಳ್ಳುತ್ತಿರುವುದು ಇತ್ತೀಚೆಗೆ ಕಂಡುಬಂದಿದೆ.
ಲೋಕಸಭೆ ಚುನಾವಣೆ ಪ್ರಕ್ರಿಯೆಗೂ ಮುಂಚೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತ ಕಾಂಗ್ರೆಸ್ನ ಹಲವು ಮಾಜಿ ಸಚಿವರು ಹಾಗೂ ಶಾಸಕರು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿ, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಬಳಿ ಟಿಕೆಟ್ಗೆ ಮನವಿ ಮಾಡಿದ್ದರು. ಆ ಸಂದರ್ಭದಲ್ಲಿ ಲೋಕಸಭೆ ಚುನಾವಣೆ ಬಿಟ್ಟು ವಿಧಾನಸಭೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲು ಸಿದ್ದರಾಮಯ್ಯ ತಮ್ಮ ಆಪ್ತರಿಗೆ ಹೇಳಿದ್ದರು ಎನ್ನಲಾಗಿದೆ.
ಆ ಸಂದರ್ಭದಲ್ಲಿ ಡಿಸೆಂಬರ್ನಲ್ಲಿ ವಿಧಾನಸಭೆ ಚುನಾವಣೆಗೆ ಸಿದ್ಧರಾಗುವಂತೆಯೂ ಪರೋಕ್ಷ ಸೂಚನೆ ನೀಡಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ. ಲೋಕಸಭೆ ಟಿಕೆಟ್ ಪಡೆಯಲು ಒತ್ತಡ ಹೇರಿದವರಿಗೆ ಸಮಾಧಾನಪಡಿಸಲು ಸಿದ್ದರಾಮಯ್ಯ ಆ ರೀತಿ ಹೇಳಿರುವ ಸಾಧ್ಯತೆ ಇದೆಯೇ ಅಥವಾ ನಿಜವಾಗಿಯೂ ಲೋಕಸಭೆ ಚುನಾವಣೆ ಬಳಿಕ ಮೈತ್ರಿ ಸರ್ಕಾರ ಪತನವಾಗಲಿದೆಯೇ ಎಂಬ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ನಡೆಸಿದೆ.
ಇದರ ಜತೆಗೆ ರಾಜ್ಯದ ಮೈತ್ರಿ ಸರ್ಕಾರದ ಭವಿಷ್ಯ ಡೋಲಾಯಮಾನವಾಗಿದೆ ಎಂಬ ಸಂದೇಶವನ್ನು ಸಿದ್ದರಾಮಯ್ಯ ನೀಡಿದ್ದಾರೆ ಎನ್ನಲಾಗುತ್ತಿದೆ. ರಾಜ್ಯದಲ್ಲಿ ಜೆಡಿಎಸ್ ಜತೆಗೆ ಮೈತ್ರಿ ಸರ್ಕಾರ ಮಾಡುವುದಕ್ಕೆ ಆರಂಭದಿಂದಲೂ ವಿರೋಧ ವ್ಯಕ್ತಪಡಿಸುತ್ತಿದ್ದ ಸಿದ್ದರಾಮಯ್ಯ ಅವರನ್ನೇ ಮುಂದಿಟ್ಟುಕೊಂಡು ಪಕ್ಷದ ಹೈಕಮಾಂಡ್ ರಾಷ್ಟ್ರ ಮಟ್ಟದ ರಾಜಕೀಯ ಹಿತದೃಷ್ಠಿಯಿಂದ ಕರ್ನಾಟಕದಲ್ಲಿ ಮೈತ್ರಿ ಅನಿವಾರ್ಯ ಎಂದು ಜೆಡಿಎಸ್ ಜತೆ ಕೈ ಜೋಡಿಸುವಂತೆ ಸೂಚಿಸಿತ್ತು.
ಸಮ್ಮಿಶ್ರ ಸರ್ಕಾರದ ಆರಂಭದಿಂದಲೂ ಮೈತ್ರಿ ಸರ್ಕಾರದ ಪ್ರತಿಪಕ್ಷದ ನಾಯಕರಂತೆ ಬಿಂಬಿತವಾಗಿರುವ ಸಿದ್ದರಾಮಯ್ಯ ಅವರ ನಡೆಯ ಬಗ್ಗೆ ಕಾಂಗ್ರೆಸ್ ಪಕ್ಷದ ಒಂದು ವಲಯದಲ್ಲಿ ಈಗಲೂ ಅನುಮಾನಗಳಿವೆ. ಅಲ್ಲದೇ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ಜತೆ ಸ್ಪರ್ಧೆ ಮಾಡುವುದಕ್ಕೂ ಕೂಡ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.
ರಾಜ್ಯದಲ್ಲಿ ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡಿರುವುದರಿಂದ ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಅಸ್ತಿತ್ವಕ್ಕೆ ಧಕ್ಕೆಯಾಗುತ್ತಿದ್ದು, ಕೆಲವು ಜಿಲ್ಲೆಗಳಲ್ಲಿ ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರ ಅಸ್ತಿತ್ವಕ್ಕೆ ಧಕ್ಕೆಯಾಗುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ಗೆ ಕ್ಷೇತ್ರಗಳನ್ನು ಬಿಟ್ಟುಕೊಡುವುದರಿಂದ ಸುಮಾರು 60ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಸ್ತಿತ್ವಕ್ಕೆ ಧಕ್ಕೆಯಾಗುತ್ತದೆ.
ಅದು ಮುಂದಿನ ವಿಧಾನಸಭೆ ಚುನಾವಣೆಗಳಲ್ಲಿ ಏಕಾಂಗಿಯಾಗಿ ಅಧಿಕಾರಕ್ಕೆ ಬರಲು ಕಷ್ಟವಾಗುತ್ತದೆ. ಹೀಗಾಗಿ ಈಗಿರುವ ಮೈತ್ರಿ ಹೊರತಾಗಿ ಇತರ ಚುನಾವಣೆಗಳಲ್ಲಿ ಮೈತ್ರಿ ಬೇಡ ಎಂಬ ಅಭಿಪ್ರಾಯವನ್ನು ಸಿದ್ದರಾಮಯ್ಯ ವ್ಯಕ್ತಪಡಿಸಿದ್ದರು ಎಂಬ ಮಾತು ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿವೆ.
ಫಲಿತಾಂಶ ಬಳಿಕ ಉತ್ತರ: ಈಗಿರುವ ರಾಜಕೀಯ ಪರಿಸ್ಥಿತಿಯಲ್ಲಿ ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಮೈತ್ರಿ ಪಕ್ಷಗಳಲ್ಲಿ ಗೊಂದಲ ಅಥವಾ ಬಿಜೆಪಿ ಆಪರೇಷನ್ ಕಮಲದ ಮೂಲಕ ಸರ್ಕಾರ ಕೆಡವಲು ಮುಂದಾದರೆ, ಸರ್ಕಾರ ಉಳಿಸಿಕೊಳ್ಳಲು ಬೇಕಾದ ಕಾರ್ಯತಂತ್ರ ರೂಪಿಸುವುದು.
ಒಂದು ವೇಳೆ, ರಮೇಶ್ ಜಾರಕಿಹೊಳಿ ಹಾಗೂ ಅವರೊಂದಿಗೆ ಗುರುತಿಸಿಕೊಂಡ ಶಾಸಕರು ರಾಜೀನಾಮೆ ನೀಡಿದರೆ, ಸರ್ಕಾರದ ಬಹುಮತಕ್ಕೆ ಧಕ್ಕೆ ಬರುವ ಸಾಧ್ಯತೆ ಇದೆ. ಆ ಸಂದರ್ಭದಲ್ಲಿ ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ನೀಡದೇ, ಮೈತ್ರಿ ಸರ್ಕಾರವನ್ನು ವಿಸರ್ಜಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಲು ಮುಖ್ಯಮಂತ್ರಿಗೆ ಒತ್ತಡ ತರುವ ಬಗ್ಗೆಯೂ ಒಂದು ವರ್ಗ ಚಿಂತಿಸಿದೆ.
ಆದರೆ, ಸರ್ಕಾರ ವಿಸರ್ಜನೆಯನ್ನು ಮುಖ್ಯಮಂತ್ರಿ ಸಂಪುಟ ಸಭೆಯಲ್ಲಿ ನಿರ್ಧರಿಸಬೇಕು ಮತ್ತು ಕುಮಾರಸ್ವಾಮಿ ತಮ್ಮ ಸರ್ಕಾರವನ್ನು ವಿಸರ್ಜಿಸುತ್ತಾರೆಯೇ ಅಥವಾ ಸರ್ಕಾರ ಉಳಿಸಲು ಯತ್ನ ಮುಂದುವರಿಸುವರೇ ಎಂಬುದಕ್ಕೆ ಲೋಕಸಭೆ ಚುನಾವಣೆ ಫಲಿತಾಂಶ ಬಳಿಕ ಉತ್ತರ ಸಿಗಲಿದೆ.
* ಶಂಕರ ಪಾಗೋಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ