ರಾಜಕೀಯ ಹಿಂಸಾಚಾರ ಕೊನೆಗೊಳ್ಳಲಿ


Team Udayavani, May 14, 2019, 6:00 AM IST

Voting

ಈ ಬಾರಿ ಚುನಾವಣೆಯ ಪ್ರತಿಯೊಂದು ಹಂತದ ಮತದಾನದಲ್ಲೂ ದೇಶದ ಒಂದಲ್ಲ ಒಂದು ಭಾಗದಲ್ಲಿ ಹಿಂಸಾಚಾರ ನಡೆದಿದೆ. ಒಡಿಶಾ, ಕೇರಳ, ಬಿಹಾರ ಮತ್ತು ಮುಖ್ಯವಾಗಿ ಪಶ್ಚಿಮ ಬಂಗಾಳದಲ್ಲಂತೂ ರಾಜಕೀಯ ಹಿಂಸಾಚಾರ ಮಿತಿಮೀರಿದೆ.

ಭಾನುವಾರವಷ್ಟೇ ನಡೆದ 6ನೇ ಹಂತದ ಮತದಾನದಲ್ಲಿ ಪಶ್ಚಿಮ ಬಂಗಾಳದ ಎಂಟು ಕ್ಷೇತ್ರಗಳಲ್ಲೂ ಹೊಡೆದಾಟ-ಹಿಂಸಾಚಾರ ನಡೆದಿದೆ..ಗಮನಿಸಬೇಕಾದ ಅಂಶವೆಂದರೆ ಚುನಾವಣೆಗಾಗಿ ಹೆಚ್ಚುವರಿ ಭದ್ರತೆಯನ್ನು ಒದಗಿಸಿದರೂ ಕೂಡ ಈ ಹಿಂಸಾಚಕ್ರವನ್ನು ತಡೆಯಲು ಸಾಧ್ಯವಾಗಿಲ್ಲ ಎನ್ನುವುದು. ಮತದಾನ ನಡೆಯುವುದಕ್ಕೂ ಮುನ್ನವೇ ಕಾಂತಿ ಮತ್ತು ಝಾರ್‌ಗ್ರಾಂ ಕ್ಷೇತ್ರಗಳಲ್ಲಿ ಒಬ್ಬ ಬಿಜೆಪಿ ಮತ್ತು ಒಬ್ಬ ಟಿಎಂಸಿ ಕಾರ್ಯಕರ್ತನ ಹತ್ಯೆಯಾದ ಸುದ್ದಿ ಹರಡಿ ಪರಿಸ್ಥಿತಿ ವಿಷಮಿಸಿತು. ಆದರೆ ಟಿಎಂಸಿಯ ಕಾರ್ಯಕರ್ತ ಅಪಘಾತದಿಂದ ಸತ್ತಿದ್ದಾನೆಯೇ ಹೊರತು, ಆತನ ಕೊಲೆಯಾಗಿಲ್ಲ ಎಂದು ಟಿಎಂಸಿಯ ಹಿರಿಯ ನಾಯಕರೇ ಹೇಳಿದ್ದಾರೆ. ಇನ್ನು ಇತರೆ ಎರಡು ಕ್ಷೇತ್ರಗಳಲ್ಲೂ ಇಬ್ಬರು ಬಿಜೆಪಿ ಕಾರ್ಯಕರ್ತರ ಮೇಲೆ ಗುಂಡಿನ ದಾಳಿ ನಡೆದಿದೆ ಎನ್ನಲಾಗುತ್ತಿದೆ. ಅಲ್ಲದೇ ಬಿಜೆಪಿಯ ನಾಯಕಿಯೊಬ್ಬರನ್ನು ಮತಗಟ್ಟೆಯಿಂದ ಹೊರದಬ್ಬಿದ ಘಟನೆಯೂ ನಡೆದಿದೆ.

ಪಶ್ಚಿಮ ಬಂಗಾಳದಲ್ಲಿ ಈಗಿನಿಂದಲ್ಲ, ಆ ರಾಜ್ಯ ಅಸ್ತಿತ್ವಕ್ಕೆ ಬಂದಾಗಿನಿಂದಲೂ ರಾಜಕೀಯ ಕೊಲೆಗಳು, ಹಿಂಸಾಚಾರಗಳು ನಿರಂತರ ನಡೆಯುತ್ತಲೇ ಬಂದಿದೆ. ಕಮ್ಯುನಿಸ್ಟ್‌ ಸರ್ಕಾರದ ಅವಧಿಯಲ್ಲಂತೂ ಇಂಥ ಪ್ರಕರಣಗಳು ಮಿತಿಮೀರಿದ್ದವು. ಈಗ ಎಡರಂಗ ಅಲ್ಲಿ ಬಲ ಕಳೆದುಕೊಂಡಿದೆ. ಟಿಎಂಸಿ ಅಧಿಕಾರದಲ್ಲಿದೆ.

ಕಳೆದೊಂದು ದಶಕದಲ್ಲಿ ರಾಜಕೀಯ ಹಿಂಸಾಚಾರವು ಭಿನ್ನ ರೂಪ ಪಡೆದಿದೆ. ಭಾರತೀಯ ಜನತಾಪಾರ್ಟಿಯೊಂದಿಗೆ ಗುರುತಿಸಿಕೊಂಡಿರುವ ಕಾರ್ಯಕರ್ತರ ಮೇಲಿನ ಹಲ್ಲೆಗಳು ಹೆಚ್ಚಾಗುತ್ತಿವೆ. ಇದಕ್ಕೆ ಪ್ರತಿಯಾಗಿ ತೃಣಮೂಲದ ಕಾರ್ಯಕರ್ತರೂ ಹಿಂಸಾಚಾರಕ್ಕೆ ತುತ್ತಾಗುತ್ತಿದ್ದಾರೆ. ಒಟ್ಟಲ್ಲಿ ಟಿಎಂಸಿ ವರ್ಸಸ್‌ ಬಿಜೆಪಿ ಯುದ್ಧ ತಾರಕಕ್ಕೇರಿದೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಈ ರಾಜಕೀಯ ಹಿಂಸಾಚಾರಗಳ ವಿಷಯದಲ್ಲಿ ಜಾಣ ಮೌನ ವಹಿಸಿರುವುದು ದುರಂತ. ಅವರ ಈ ಮೌನವು ‘ಸಮ್ಮತಿ’ಯಲ್ಲದೇ ಮತ್ತೇನೂ ಅಲ್ಲ ಎನ್ನುತ್ತಲೇ ಬಂದಿದೆ ಬಿಜೆಪಿ. ಆದರೆ ಮಮತಾ ಮಾತ್ರ ಈ ಆರೋಪಗಳನ್ನೆಲ್ಲ ನಿರಾಕರಿಸುತ್ತಾರೆ. ‘ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರವೇ ಇಲ್ಲ’ ಎಂದು ಅವರು ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ವಾದಿಸಿದ್ದರು. ಆದರೆ, ಈ ರಾಜಕೀಯ ಹತ್ಯೆಗಳು ಈಗ ತಹಬದಿಗೆ ಬರಲಾರದಷ್ಟು ಮಿತಿಮೀರಿಬಿಟ್ಟಿವೆ, ಕಾನೂನು ಸುವ್ಯವಸ್ಥೆಯ ಮೇಲೆ ಮಮತಾ ಸರ್ಕಾರ ಹಿಡಿತಕಳೆದುಕೊಂಡಿದೆ ಎಂದು ಮೇಲಿನ ಘಟನೆಗಳಿಂದ ಸ್ಪಷ್ಟವಾಗುತ್ತಿದೆ. ಅದರಲ್ಲೂ ಈ ರಾಜಕೀಯ ಹತ್ಯೆಗಳಂತೂ ಐಸಿಸ್‌ ಉಗ್ರ ಕೃತ್ಯಗಳಿಗೆ ಹೋಲಿಸುವಷ್ಟು ಕ್ರೂರವಾಗಿರುತ್ತವೆ. ಅಂದರೆ ಯಾವ ಮಟ್ಟಕ್ಕೆ ರಾಜಕೀಯ ಸಿದ್ಧಾಂತ, ಅಧಿಕಾರ ವ್ಯಾಮೋಹ ಜನರ ಮನಸ್ಸನ್ನು ಕಲುಷಿತಗೊಳಿಸಿಬಿಟ್ಟಿದೆ ಎನ್ನುವುದು ಇದರಿಂದ ಅರ್ಥವಾಗುತ್ತದೆ. ಬಿಜೆಪಿ ಕಾರ್ಯಕರ್ತರೇ ಇರಲಿ, ಟಿಎಂಸಿ ಕಾರ್ಯಕರ್ತರೇ ಆಗಲಿ…ಎಲ್ಲರೂ ಮನುಷ್ಯರೇ, ಯಾವ ಹತ್ಯೆಯೂ ಸಮರ್ಥನೀಯವಲ್ಲ. ಪ್ರತಿಯೊಂದು ಪಕ್ಷದ ನಾಯಕರೂ ಈ ವಿಚಾರದಲ್ಲಿ ಧ್ವನಿ ಎತ್ತಲೇಬೇಕಿದೆ. ಹಿಂಸಾಚಾರದಲ್ಲಿ ತೋಡಗಬೇಡಿ ಎಂದು ತಮ್ಮ ಕಾರ್ಯಕರ್ತರಿಗೆ, ಸ್ಥಳೀಯ ನಾಯಕರಿಗೆ ಅವು ಎಚ್ಚರಿಕೆ ನೀಡಬೇಕಿದೆ, ತಿಳಿಹೇಳಬೇಕಿದೆ. ವ್ಯಕ್ತಿಯೊಬ್ಬ ಸತ್ತಾಗ ಆತ ಯಾವ ಪಕ್ಷ ಅಥವಾ ಸಿದ್ಧಾಂತಕ್ಕೆ ಸೇರಿದವನು ಎಂದು ನೋಡುವಂಥ ಹೃದಯಹೀನ ಸ್ಥಿತಿಗೆ ಯಾವುದೇ ಪಕ್ಷ ಅಥವಾ ನಾಯಕರು ಎಂದಿಗೂ ಬರಬಾರದು. ಒಬ್ಬರ ಮೇಲೊಬ್ಬರು ಆರೋಪ ಮಾಡುತ್ತಾ ಕೂಡುವುದರಿಂದ ಪರಿಸ್ಥಿತಿಯಂತೂ ಸುಧಾರಿಸದು. ಶಾಂತಿ-ಸಹಬಾಳ್ವೆ, ಮಾನವೀಯತೆಯ ಮಾತನಾಡುವ ಮಮತಾ ಬ್ಯಾನರ್ಜಿಯವರ ಸರ್ಕಾರ ನುಡಿದಂತೆ ನಡೆದು ತೋರಿಸಬೇಕು. ಅದಕ್ಕಿಂತಲೂ ಮೊದಲು ರಾಜಕೀಯ ಹತ್ಯೆಗಳು ಆಗುತ್ತಿವೆ ಎನ್ನುವ ಸತ್ಯವನ್ನು ಅವರು ಒಪ್ಪಿಕೊಳ್ಳಬೇಕು. ನಿರಾಕರಣೆಯಿಂದ ಬದಲಾವಣೆಯೇನೂ ಆಗದು.

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.