ಜೋಡು ಕಾವಲು: ಸಂಪರ್ಕ ಸೇತುವೆಯ ಬೇಡಿಕೆ

ಸೇತುವೆ ನಿರ್ಮಾಣವಾದರೆ ಹಲವು ಗ್ರಾಮದ ಜನರಿಗೆ ಅನುಕೂಲ

Team Udayavani, May 14, 2019, 5:14 AM IST

32

ಓದುಗರೂ ತಮ್ಮೂರಿನ ಗಂಭೀರ ಸಾರ್ವಜನಿಕ ಸಮಸ್ಯೆಯನ್ನು ನಮ್ಮಲ್ಲಿ ಹೇಳಿಕೊಳ್ಳಬಹುದು. ಸಮಸ್ಯೆಯ ಚಿತ್ರ – ಮಾಹಿತಿಯನ್ನು ನಮ್ಮ ವಾಟ್ಸ್‌ ಆ್ಯಪ್‌ ಸಂಖ್ಯೆ 9108051452ಗೆ ಕಳುಹಿಸಿದರೆ, ಉದಯವಾಣಿ ‘ಸುದಿನ’ ವರದಿಗಾರರು ಸ್ಥಳಕ್ಕೆ ಭೇಟಿ ನೀಡುವರು. ವಿಶೇಷ ವರದಿ ಮೂಲಕ ಸಮಸ್ಯೆಯನ್ನು ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಗಮನಕ್ಕೆ ತರಲಾಗುವುದು. ‘ನಮ್ಮೂರ ಅಭಿವೃದ್ಧಿ ನಮ್ಮ ಜವಾಬ್ದಾರಿ’ ಎನ್ನುವ ಪರಿಕಲ್ಪನೆಯ ಈ ಸರಣಿಯಲ್ಲಿ ನೀವೂ ಪಾಲ್ಗೊಳ್ಳಿ.

ಸವಣೂರು: ಸೇತುವೆಯಿದ್ದರೆ ಸುತ್ತು ಬಳಸಿ ತೆರಳುವದು ತಪ್ಪುತ್ತದೆ. ಇದಕ್ಕಾಗಿ ಸವಣೂರು-ಕುಮಾರಮಂಗಲ ಶಾಲಾ ಬಳಿಯ ರಸ್ತೆಯ ಮೂಲಕ ತಿಂಗಳಾಡಿ, ತೆಗ್ಗು ಮೊದಲಾದ ಭಾಗಗಳನ್ನು ಸಂಪರ್ಕಿಸಲು ಪುಣ್ಚಪ್ಪಾಡಿ ಗ್ರಾಮದ ಜೋಡು ಕಾವಲು ಎನ್ನುವಲ್ಲಿ ಸೇತುವೆ ನಿರ್ಮಾಣ ಮಾಡಬೇಕೆನ್ನುವ ಬೇಡಿಕೆಯನ್ನು ಈ ಭಾಗದ ಜನರು ವ್ಯಕ್ತಪಡಿಸಿದ್ದಾರೆ.

ಏಕೆ ಈ ಬೇಡಿಕೆ?
ಅತೀ ಹೆಚ್ಚು ಹಿಂದುಳಿದ ವರ್ಗದವರು ಇರುವ ಗ್ರಾಮವಾದ ಪುಣ್ಚಪ್ಪಾಡಿಯಿಂದ ತಿಂಗಳಾಡಿ, ತೆಗ್ಗು, ಕೆದಂಬಾಡಿ ಗ್ರಾಮಗಳನ್ನು ಸಂಪರ್ಕಿಸಲು ಜೋಡುಕಾವಲಿನಲ್ಲಿ ಸೇತುವೆ ನಿರ್ಮಾಣವಾದರೆ ಸುಲಭವಾಗಲಿದೆ. ಈ ಭಾಗದ ಜನರು ಈಗ ಮೇಲಿನ ಪ್ರದೇಶವನ್ನು ಸಂಪರ್ಕಿಸಬೇಕಾದರೆ ಕುಮಾರಮಂಗಲದಿಂದ ಮಾಡಾವು ಮೂಲಕ ಅಥವಾ ಕುಮಾರಮಂಗಲ-ಸವಣೂರು-ಸರ್ವೆ-ಕೂಡುರಸ್ತೆ ಮೂಲಕ ಸಾಗಿ ಹೋಗಬೇಕಾಗಿದೆ. ಇಲ್ಲಿ ಸೇತುವೆ ನಿರ್ಮಾಣವಾದರೆ ಈ ಭಾಗದ ಜನತೆಗೆ ಸುಲಭವಾಗಲಿದೆ.

ಜತೆಗೆ ತಿಂಗಳಾಡಿ, ತೆಗ್ಗು, ಕೆದಂಬಾಡಿ ಗ್ರಾಮದವರಿಗೆ ಪುಣ್ಯಕ್ಷೇತ್ರಗಳಾದ ಧರ್ಮಸ್ಥಳ, ಸೌತಡ್ಕ ಮೊದಲಾದೆಡೆ ಹೋಗಬೇಕಾದರೆ ಪುತ್ತೂರಿಗೆ ತೆರಳಿ ಹೋಗಬೇಕಿದೆ. ಇಲ್ಲಿ ಸೇತುವೆ ನಿರ್ಮಾಣವಾದರೆ ಕುಮಾರಮಂಗಲ – ಸವಣೂರು ಮಾರ್ಗವಾಗಿ ಶಾಂತಿಮೊಗರು ಸೇತುವೆ ಮೂಲಕ ತೆರಳಿದರೆ ಸಮಯ ಹಾಗೂ ವೆಚ್ಚವೂ ಕಡಿಮೆಯಾಗಲಿದೆ.

ರಸ್ತೆ ಅಭಿವೃದ್ದಿಯಾಗಬೇಕು
ಜೋಡುಕಾವಲಿಗೆ ಸಂಪರ್ಕಿಸುವ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ತಿಂಗಳಾಡಿ-ತೆಗ್ಗು ರಸ್ತೆ ಅಭಿವೃದ್ಧಿಯಾಗಿದೆ. ಸುಳ್ಯ ಕ್ಷೇತ್ರ ವ್ಯಾಪ್ತಿಯ ಸವಣೂರು-ಕುಮಾರಮಂಗಲ-ಜೋಡುಕಾವಲು ರಸ್ತೆ ಅಭಿವೃದ್ದಿಯಾಗಬೇಕಿದೆ.

ಸೇತುವೆ ಶೀಘ್ರ ಆಗಲಿ
ಪುಣ್ಚಪ್ಪಾಡಿ ಗ್ರಾಮ ಹಾಗೂ ಕೆಯ್ಯೂರು, ತಿಂಗಳಾಡಿ ಭಾಗವನ್ನು ಒಂದು ಮಾಡುವ ಸಲುವಾಗಿ ಜೋಡುಕಾವಲಿನಲ್ಲಿ ಸೇತುವೆ ನಿರ್ಮಾಣವಾದರೆ ಈ ಭಾಗದ ಜನತೆಗೆ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಪ್ರಯತ್ನಿಸಬೇಕು ಎಂದು ಸ್ಥಳೀಯ ನಿವಾಸಿ ಪ್ರಮೋದ್‌ ರೈ ಹೇಳಿದ್ದಾರೆ.

ಮನವಿ ಸಲ್ಲಿಸಲಾಗಿದೆ
ಪುಣ್ಚಪ್ಪಾಡಿ ಗ್ರಾಮದ ಜೋಡುಕಾವಲು ಸಂಪರ್ಕ ರಸ್ತೆ ಅಭಿವೃದ್ಧಿ ಹಾಗೂ ಸೇತುವೆ ನಿರ್ಮಾಣದ ಕುರಿತು ಹಲವು ವರ್ಷಗಳಿಂದ ಮನವಿ ಮಾಡುತ್ತಿದ್ದೇವೆ. ಗ್ರಾ.ಪಂ.ನಲ್ಲೂ ನಿರ್ಣಯ ಕೈಗೊಂಡು ಸಂಬಂಧಿಸಿದವರಿಗೆ ಬರೆಯಲಾಗಿದೆ. ಇಲ್ಲಿ ಸೇತುವೆ ನಿರ್ಮಾಣವಾದರೆ ಎಲ್ಲರಿಗೂ ಅನುಕೂಲವಾಗಲಿದೆ.
– ಗಿರಿಶಂಕರ ಸುಲಾಯ, ಹಿರಿಯ ಸದಸ್ಯರು, ಗ್ರಾ.ಪಂ. ಸವಣೂರು

ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.