ಅಂಕಲೇಶ್ವರದ ಶ್ರೀ ಗುಮನ್‌ದೇವ್‌ ಮಂದಿರದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ


Team Udayavani, May 14, 2019, 12:26 PM IST

1205MUM02

ಭರೂಚ್‌ (ಗುಜರಾತ್‌): ಸುಮಾರು ಐನೂರು ವರ್ಷಗಳ ಇತಿಹಾಸವನ್ನು ಹೊಂದಿರುವ ಗುಜರಾತ್‌ನ ಭರೂಚ್‌ ಜಿಲ್ಲೆಯ ಅಂಕಲೇಶ್ವರದ ನವೀಕರಣಗೊಂಡ ಗುಮನ್‌ ದೇವ್‌ ಮಂದಿರದಲ್ಲಿ ಉದ್ಯಮಿ ರವಿನಾಥ್‌ ವಿಶ್ವನಾಥ್‌ ಶೆಟ್ಟಿ ಮತ್ತು ಭಾರತಿ ರವಿನಾಥ್‌ ಶೆಟ್ಟಿ ದಂಪತಿಯ ಯಜಮಾನಿಕೆಯಲ್ಲಿ ತಿರುಪತಿ ಶ್ರೀನಿವಾಸ ಕಲ್ಯಾಣೋತ್ಸವವು ಮೇ 10ರಿಂದ ಮೇ 12ರ ತನಕ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ವಿಜೃಂಭಣೆಯಿಂದ ಜರಗಿತು.

ಮೇ 10ರಂದು ಬೆಳಗ್ಗೆ ದೇವತಾ ಪ್ರಾರ್ಥನೆ, ಗಣಪತಿ ಹೋಮ, ಸಂಜೆ ಶ್ರೀರಾಮಚಂದ್ರ, ಲಕ್ಷ್ಮಣ, ಸೀತಾ ಮಾತೆಯ ಮೂರ್ತಿಯ ಭವ್ಯ ಶೋಭಾಯಾತ್ರೆ ನಡೆಯಿತು. ರಾತ್ರಿ ವಾಸ್ತು ಹೋಮ ಮತ್ತು ಗಣಹೋಮ ನಡೆಯಿತು.

ಮರುದಿನ ಮುಂಜಾನೆ ನವಗ್ರಹ ಹೋಮ, ತತ್ವÌಕಲಶಾಭಿಷೇಕ, ಮಧ್ಯಾಹ್ನ ಮಹಾಪ್ರಸಾದ, ಅನಂತರ ಮಲ್ಲಯುದ್ದ (ಕುಸ್ತಿ) ಸಂಜೆ 4 ಗಂಟೆಗೆ ಮದ್ವಭಾಗ್‌ ಸೊಸೈಟಿಯಿಂದ ಜಲಧಾರ ಚೋಕಡಿ, ಜಿ.ಐ.ಡಿ.ಸಿ. ಅಂಕಲೇಶ್ವರದಿಂದ ಗುಮನ್‌ ದೇವ್‌ ಮಂದಿರಕ್ಕೆ ಭವ್ಯ ಶೋಭಾಯಾತ್ರೆ ನಡೆಯಿತು. ಸಂಜೆ ಚಕ್ರಭÌ ಮಂಡಲ ಪೂಜೆ, ರಾಮದೇವತಾ ಕಲಶಾಧಿವಾಸ, ಅಧಿವಸ ಹೋಮ ನಡೆಯಿತು.

ಆಶೀರ್ವಚನ
ಅನಂತರ ಶ್ರೀ ಒಡಿಯೂರು ಗುರು ದೇವ ಸಂಸ್ಥಾನದ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಆಶೀರ್ವಚನ ನೀಡುತ್ತ, ಧಾರ್ಮಿಕ ಕ್ಷೇತ್ರಗಳಲ್ಲಿ ಇಂತಹ ಕಾರ್ಯವು ಸದಾ ನಡೆಯುತ್ತಿರಲಿ, ಧಾರ್ಮಿಕ ಕಾರ್ಯದಿಂದ ಮಾನವನ ಬದುಕು ಪಾವನಗೊಳ್ಳುವುದು ಮಾತ್ರವಲ್ಲದೆ ಮನಸ್ಸಿಗೆ ನೆಮ್ಮದಿಯನ್ನು ಉಂಟು ಮಾಡುವುದು. ಈ ಕಾರ್ಯದಲ್ಲಿ ಇಂದು ನನಗೆ ಭಾಗವಹಿಸಲು ಬಹಳ ಸಂತೋಷವಾಗುತ್ತಿದೆ ಎನ್ನುತ್ತಾ ಇಂತಹ ಕಾರ್ಯದಲ್ಲಿ ಎಲ್ಲರೂ ಭಾಗವಹಿಸಬೇಕೆಂದರು. ಶೋಭಾಯಾತ್ರೆಯಲ್ಲಿ ಪಾಲ್ಗೊಂಡ ಶ್ರೀ ಗುರುದೇವಾನಂದ ಸ್ವಾಮೀಜಿ ಯವರು ರವಿನಾಥ್‌ ವಿ. ಶೆಟ್ಟಿ ಅವರ ಸ್ವಗೃಹಕ್ಕೆ ಭೇಟಿಯಿತ್ತರು. ಅಲ್ಲಿ ಅವರ ಪಾದಪೂಜೆ ಹಾಗೂ ವಿಶೇಷ ಪೂಜೆ ನಡೆಯಿತು.

ಈ ಸಂದರ್ಭದಲ್ಲಿ ರವಿನಾಥ ವಿ. ಶೆಟ್ಟಿ ದಂಪತಿ ಮಾತ್ರವಲ್ಲದೆ ಅವರ ತಾಯಿ ತೋನ್ಸೆ ಪಡುಮನೆ ಲಕ್ಷ್ಮೀ ವಿ. ಶೆಟ್ಟಿ, ಮಕ್ಕಳಾದ ಡಾ| ಆಶ್ನಾ ಆರ್‌. ಶೆಟ್ಟಿ, ಆಸ್ಥ ಆರ್‌. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಅಂದು ರಾತ್ರಿ ಭಜನೆ ಹಾಗೂ ಗಾರ್ಭನೃತ್ಯ ಜರಗಿತು.

ಪೂಜಾವಿಧಿಗಳು ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿ ಇವರ ಪೌರೋಹಿತ್ಯದಲ್ಲಿ ವೇದ ಮೂರ್ತಿ ಡಾ| ಡಿ. ಶಂಕರನ್‌ ವಾಸುದೇವ್‌ ಭಟ್ಟಾಚಾರ್ಯ, ಆಗಮ ಪಂಡಿತ ಮತ್ತು ಶ್ರೀ ರಾಮಕರ್ಣ ಶುಕ್ಲಾ ಇವರ ಉಪಸ್ಥಿತಿ ಯಲ್ಲಿ ನಡೆಯಿತು. ಭಕ್ತಾದಿಗಳು ಸಹಸ್ರ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಪ್ರಸಾದವನ್ನು ಸ್ವೀಕರಿಸಿದರು.

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಶೆಟ್ಟಿ, ಅಖೀಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಧರ್ಮಪಾಲ ದೇವಾಡಿಗ, ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಅಧ್ಯಕ್ಷ ಚಂದ್ರಶೇಖರ ಪೂಜಾರಿ, ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಪ್ರಧಾನ ಕಾರ್ಯ ದರ್ಶಿ ಹಿರಿಯಡ್ಕ ಮೋಹನ್‌ ದಾಸ್‌, ಥಾಣೆಯ ಧೀರಜ್‌ ಹೊಟೇಲಿನ ಮಾಲಕ ಶೇಖರ ಶೆಟ್ಟಿ, ರವಿ ದೇವಾಡಿಗ, ಗುಜರಾತಿನ ಅನೇಕ ರಾಜಕೀಯ ಮುಖಂಡರುಗಳು, ಉದ್ಯಮಿಗಳು, ಸಮಾಜ ಸೇವಕರು, ತುಳು ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಚಿತ್ರ-ವರದಿ : ಈಶ್ವರ ಎಂ. ಐಲ್‌

ಟಾಪ್ ನ್ಯೂಸ್

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.