250 ವರ್ಷಗಳ ಇತಿಹಾಸವುಳ್ಳ ಆಟಿಕೆ ಕಂಪನಿ “ಹ್ಯಾಮ್ಲೀಸ್”  ರಿಲಯನ್ಸ್ ತಕ್ಕೆಗೆ


Team Udayavani, May 14, 2019, 3:33 PM IST

Hamlys

ಮುಂಬೈ / ಲಂಡನ್: ರಿಲಯನ್ಸ್ ಇಂಡಸ್ಟ್ರಿಸ್ ಅಂಗ ಸಂಸ್ಥೆಯಾದ ರಿಲಯನ್ಸ್ ಬ್ರಾಂಡ್ಸ್ ಲಿಮಿಟೆಡ್,  ಹಾಂಗ್ ಕಾಂಗ್ ನಲ್ಲಿರುವ ಸಿ ಬ್ಯಾನರ್ ಇಂಟರ್ ನ್ಯಾಶನಲ್ ಹೋಲ್ಡಿಂಗ್ಸ್ ಒಡೆತನದ ಹ್ಯಾಮ್ಲೀಸ್ ಬ್ರ್ಯಾಂಡ್‌ನ ಹ್ಯಾಮ್ಲೀಸ್ ಗ್ಲೋಬಲ್ ಹೋಲ್ಡಿಂಗ್ಸ್ ಲಿಮಿಟೆಡ್‌ನ 100% ಷೇರುಗಳನ್ನು ಸ್ವಾಧೀನಪಡಿಸಿಕೊಂಡಿದೆ. ಈ ಒಪ್ಪಂದಕ್ಕೆ ರಿಲಯನ್ಸ್ ಬ್ರಾಂಡ್ ಮತ್ತು ಸಿ ಬ್ಯಾನರ್ ಇಂಟರ್ ನ್ಯಾಶನಲ್ ಸಹಿ ಹಾಕಿದೆ.

1760 ರಲ್ಲಿ ಸ್ಥಾಪಿತವಾದ ಹ್ಯಾಮ್ಲೀಸ್ ಪ್ರಪಂಚದಲ್ಲೇ ಅತಿ ಹಳೆಯ ಮತ್ತು ಅತಿದೊಡ್ಡ ಆಟಿಕೆ ಅಂಗಡಿ ಆಗಿದ್ದು, ಸುಮಾರು 250 ವರ್ಷಗಳ ಇತಿಹಾಸವನ್ನು ಹೊಂದಿದೆ. ಈ ಕಂಪನಿ ಆಟಿಕೆಗಳಿಗೆ ಜೀವ ತರುವ ಮೂಲಕ ಪ್ರಪಂಚದಾದ್ಯಂತ ಮಕ್ಕಳ ನಗುವಿಗೆ ಕಾರಣವಾಗಿದೆ. ನಾಟಕ, ಮನರಂಜನೆ ಮತ್ತು ಅದರ ಚಿಲ್ಲರೆ ಅನುಭವದೊಂದಿಗೆ ಗುಣಮಟ್ಟ ಮತ್ತು ವ್ಯಾಪಕ ಶ್ರೇಣಿಯ ಗೊಂಬೆಗಳ ಒಂದು ಅನನ್ಯ ಮಾದರಿಯನ್ನು ಹ್ಯಾಮ್ಲೀಸ್ ನಲ್ಲಿ ಕಾಣಬಹುದಾಗಿದೆ. ಜಾಗತಿಕವಾಗಿ, ಹ್ಯಾಮ್ಲೀಸ್ 18 ದೇಶಗಳಲ್ಲಿ 167 ಮಳಿಗೆಗಳನ್ನು ಹೊಂದಿದೆ. ಭಾರತದಲ್ಲಿ, ರಿಲಯನ್ಸ್ ಹ್ಯಾಮ್ಲೀಸ್ ಗೆ ಮಾಸ್ಟರ್ ಫ್ರಾಂಚೈಸ್ ಹೊಂದಿದೆ ಮತ್ತು ಪ್ರಸ್ತುತ 29 ನಗರಗಳಲ್ಲಿ 88 ಮಳಿಗೆಗಳನ್ನು ಹೊಂದಿದೆ. ಈ ಸ್ವಾಧೀನತೆಯು ಜಾಗತಿಕ ಆಟಿಕೆ ಚಿಲ್ಲರೆ ಉದ್ಯಮದಲ್ಲಿ ರಿಲಯನ್ಸ್ ಬ್ರಾಂಡ್ಸ್ ಗೆ ಹೊಸ ಗುರುತು ನೀಡಲಿದೆ.

ಈ ಒಪ್ಪಂದದ ಕುರಿತು ಮಾತನಾಡಿದ ರಿಲಯನ್ಸ್ ಬ್ರಾಂಡ್ಸ್ ಅಧ್ಯಕ್ಷ ಮತ್ತು ಸಿಇಒ ದರ್ಶನ್ ಮೆಹ್ತಾ,

“ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಹ್ಯಾಮ್ಲೀಸ್ ಬ್ರ್ಯಾಂಡ್ ನಡಿಯಲ್ಲಿ ಆಟಿಕೆ ಚಿಲ್ಲರೆ ಮಾರಾಟದಲ್ಲಿ ನಾವು ಒಂದು ಗಮನಾರ್ಹವಾದ ಮತ್ತು ಲಾಭದಾಯಕ ವ್ಯಾಪಾರವನ್ನು ನಿರ್ಮಿಸಿದ್ದೇವೆ. ಈ 250 ವರ್ಷದ ಇತಿಹಾಸವಿರುವ ಲಂಡನ್ ಖ್ಯಾತಿಯ ಆಟಿಕೆ ಕಂಪನಿಯು ಚಿಲ್ಲರೆ ವ್ಯಾಪಾರದ ಪರಿಕಲ್ಪನೆಯನ್ನು ಪ್ರಾರಂಭಿಸಿ ದಶಕಗಳ ಹಿಂದಿನಿಂದಲೂ ಹೊಸ ಪರಿಕಲ್ಪನೆಯನ್ನು ಸೃಷ್ಠಿಸುತ್ತಿದೆ ಮತ್ತು ಹೊಸ ಜಾಗತಿಕ ಕಲ್ಪನೆಯನ್ನು ಹೊಂದಿದೆ. ಈ ಹಿನ್ನಲೆಯಲ್ಲಿ ಜಾಗತಿಕ ಚಿಲ್ಲರೆ ವ್ಯಾಪಾರದ ಮುಂಚೂಣಿಯಲ್ಲಿ ರಿಲಯನ್ಸ್, ಹ್ಯಾಮ್ಲೀಸ್ ಬ್ರಾಂಡ್ ಮತ್ತು ವ್ಯವಹಾರದ ವಿಶ್ವಾದ್ಯಂತ ಸ್ವಾಧೀನಪಡಿಸಿಕೊಂಡಿದೆ ಎಂದರು.

ಹ್ಯಾಮ್ಲೀಸ್ 1881 ರಲ್ಲಿ ಲಂಡನ್ ಪ್ರಮುಖ ರೆಜೆಂಟ್ ಸ್ಟ್ರೀಟ್‌ನಲ್ಲಿ ಮೊದಲ ಶಾಪ್ ಅನ್ನು ತೆರೆಯಿತು. ಈ ಅಂಗಡಿಯು 54,000 ಚದರ ಅಡಿ, ಏಳು ಮಹಡಿಗಳನ್ನು ಹೊಂದಿದ್ದು, 50,000 ಕ್ಕಿಂತಲೂ ಹೆಚ್ಚಿನ ಆಟಿಕೆಗಳು ಇಲ್ಲಿ ಮಾರಾಟಕ್ಕಿದೆ. ಇದು ಲಂಡನ್ನ ಪ್ರಮುಖ ಪ್ರವಾಸಿ ಆಕರ್ಷಣೆಗಳಲ್ಲಿ ಒಂದಾಗಿದೆ. ಪ್ರತಿವರ್ಷ 5 ದಶಲಕ್ಷ ಪ್ರವಾಸಿಗರು ಈ ಅಂಗಡಿಗೆ ಬರುತ್ತಾರೆ. ಇಲ್ಲಿ ಪ್ರಪಂಚದಾದ್ಯಂತವಿರುವ ಮಕ್ಕಳು ಮತ್ತು ಹದಿಹರೆಯದವರಿಗಾಗಿ ವರ್ಷಪೂರ್ತಿ ಈವೆಂಟ್ ಗಳು, ಮೆರವಣಿಗೆಗಳು, ಪ್ರದರ್ಶನಗಳು ಇರುತ್ತದೆ.

ಟಾಪ್ ನ್ಯೂಸ್

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.