ಮೂಳೆಗಳ ಬಲಿಷ್ಠತೆಯಿಂದ ಸದೃಢ ಆರೋಗ್ಯ


Team Udayavani, May 14, 2019, 5:14 PM IST

Knee-2
ಆಧುನಿಕ ಶೈಲಿಯ ಆಹಾರ ಕ್ರಮಗಳು ಮನಷ್ಯನನ್ನು ಬಹಳ ಬೇಗನೇ ಆಸ್ಪತ್ರೆಯತ್ತ ಮುಖಮಾಡಲು ಕಾರಣವಾಗುತ್ತಿವೆ. ಬೆನ್ನು, ಸೊಂಟ, ಕೈ, ಕಾಲು ನೋವು ಹೀಗೆ ಮೂಳೆಗೆ ಸಂಬಂಧಿಸಿದ ಕಾಯಿಲೆಗಳು ವಯಸ್ಸಿನ ಪರಿಧಿಯನ್ನು ಮೀರಿ ಬಾಧಿಸುವುದಿದೆ.  ಮೂಳೆಗಳು ಸದೃಢವಾಗಿದ್ದರೆ  ಮಾತ್ರ ದೇಹ ಗಟ್ಟಿಮುಟ್ಟಾಗಿರಲು ಸಾಧ್ಯ. ದೇಹದಲ್ಲಿ ಕ್ಯಾಲ್ಸಿಯಂಗಳ ಅಂಶ ಕಡಿಮೆಯಾದರೆ  ಮೂಳೆಗಳ ಆರೋಗ್ಯ ಕುಂಠಿತವಾಗುತ್ತದೆ. ನಿಯಮಿತ ವ್ಯಾಯಾಮ ಹಾಗೂ ಕ್ಯಾಲ್ಸಿಯಂ ಮತ್ತು ವಿಟಮಿನ್‌ ಡಿ ಹೊಂದಿರುವ ಪೌಷ್ಟಿಕ ಆಹಾರ ಸೇವಿಸುವುದರಿಂದ ಈ ಸಮಸ್ಯೆಯಿಂದ ಹೊರಬರಬಹುದಾಗಿದೆ.
ಮೂಳೆ ಗಳ ರಕ್ಷಣೆ ಹೇಗೆ ?
ಕ್ಯಾಲ್ಸಿಯಂ ಸೇವನೆ  ಆಹಾರದಲ್ಲಿ ಕ್ಯಾಲ್ಸಿಯಂ ಪ್ರಮಾಣ ಹೇರಳವಾಗಿರುವಂತೆ ನೋಡಿಕೊಳ್ಳ ಬೇಕು. ರಾತ್ರಿ ಮಲಗುವ ಮುನ್ನ ಒಂದು ಲೋಟ ಬಿಸಿ ಹಾಲಿಗೆ ಒಂದು ಚಮಚ ಜೇನು ತುಪ್ಪ ಸೇರಿಸಿ ಕುಡಿದರೆ ಉತ್ತಮ.
ವಿಟಮಿನ್‌ ಡಿ
ಕ್ಯಾಲ್ಸಿಯಂನೊಂದಿಗೆ ವಿಟಮಿನ್‌ ಡಿ ಸಹ ಪೂರಕವಾಗಿ ಬೇಕು. ಹಸುರು ತರಕಾರಿಗಳಲ್ಲಿ  ಇವುಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ಮಿಟಮಿನ್‌ ಡಿ ಪಡೆಯಲು ಬೆಳಗ್ಗೆ ಸೂರ್ಯನ ಬೆಳಕಿಗೆ ಮೈಯೊಡ್ಡಬೇಕು.
ವಿಟಮಿನ್‌ ಕೆ
ವಿಟ ಮಿನ್‌ ಕೆ ಹೆಚ್ಚಿರುವ ಬ್ರೋಕೋಲಿ (ಹೂ ಕೋಸು) ಮತ್ತು ಕೇಲ್‌, ಪಾಲಕ್‌ ಮೊದಲಾದ ಹಸಿರೆಲೆಗಳನ್ನು ಸೇವಿಸಬೇಕು.
ಪೊಟಾಶಿಯಂ ಪೊಟಾಶಿಯಂ ಮೂಳೆಗಳ ದೃಢತೆಯಲ್ಲಿ ಭಾರೀ ಪಾತ್ರ ವಹಿಸದಿ ದ್ದರೂ ಕ್ಯಾಲ್ಸಿಯಂ ಮೂಳೆಗಳಲ್ಲಿ ಸಂಚಲನಗೊಳ್ಳಲು ನೆರವಾಗುತ್ತದೆ. ಸಿಹಿಗೆಣಸು ಮತ್ತು ಬಾಳೆಹಣ್ಣುಗಳಲ್ಲಿ ಪೊಟ್ಯಾಶಿಯಂ ಹೇರಳವಾಗಿರುತ್ತದೆ.
ವ್ಯಾಯಾಮ ನಿತ್ಯದ ಚಟುವಟಿಕೆಗಳಲ್ಲಿ ಸಾಕಷ್ಟು ವ್ಯಾಯಾಮ ಇರಬೇಕಾದದ್ದು ಅಗತ್ಯ. ಚಟುವಟಿಕೆ ಕಡಿಮೆ ಇರುವವರ ಮೂಳೆಯಲ್ಲಿ ಗಾಳಿಗುಳ್ಳೆ ತುಂಬುವ ಸಾಧ್ಯತೆ ಹೆಚ್ಚು.
ಹಾಲು ಹೈನು ಉತ್ಪನ್ನಗಳಾಗಿರುವ ಹಾಲು, ಮೊಸರು, ಗಿಣ್ಣು ಇತ್ಯಾದಿಗಳಲ್ಲಿ ಕ್ಯಾಲ್ಸಿಯಂ ಅಂಶವು ಅಧಿಕ ಮಟ್ಟದಲ್ಲಿದೆ. ಇದು ನೈಸರ್ಗಿಕವಾಗಿ ಸಮಸ್ಯೆಯುಳ್ಳ ಮೂಳೆಗಳನ್ನು ಸರಿಪಡಿಸುತ್ತದೆ.
ತೂಕ ಕಡಿಮೆ ಮಾಡಿ
ದೇಹದ ತೂಕ ಹೆಚ್ಚಾದರೆ ಮಂಡಿ ನೋವು ಕಾಣಿಸಿಕೊಳ್ಳುತ್ತದೆ. ಇದನ್ನು ತಪ್ಪಿಸಲು ವ್ಯಾಯಾಮ ಮಾಡಿ ಸಮತೂಕದಲ್ಲಿದ್ದರೆ ಕಾಯಿಲೆಗಳಿಂದ ಬೇಗನೇ ಹೊರಬರಬಹುದಾಗಿದೆ.
ಅಪಾಯ ಏನು ?
ಸೂಕ್ತವಾದ ಆರೈಕೆಯಿಲ್ಲದಿದ್ದರೆ  ಮೂಳೆಯ ಟೊಳ್ಳು ದೊಡ್ಡದಾಗುವ, ಗಾಳಿಗುಳ್ಳೆಗಳು ತುಂಬುವ ಅಪಾಯವಿದೆ. ಈ ಮೂಳೆಗಳು ಸುಲಭವಾಗಿ ತಂಡಾಗಬಹುದಾಗಿದೆ. ಕ್ಯಾಲ್ಸಿಯಂ ಮೂಳೆಗಳ ಅಣು ಅಣುಗಳ ರಚನೆಯನ್ನು ದೃಢಗೊಳಿಸಲು ಸಿಮೆಂಟಿನ ರೀತಿಯಲ್ಲಿ ಕೆಲಸ ಮಾಡುತ್ತದೆ.
ಆನುವಂಶೀಯ
ನಿಮ್ಮ ಹಿರಿಯರಲ್ಲಿ ಮೂಲೆ ಸಂಬಂಧಿ ಸಮಸ್ಯೆಗಳಿದ್ದರೆ ಅವುಗಳು ಬರುವ ಸಾಧ್ಯತೆ ಇದೆ. ಈ ಪರಿಸ್ಥಿತಿಯಿಂದ ಹೊರ ಬರಲು ಚಿಕ್ಕ ವಯಸ್ಸಿನಲ್ಲೇ ಮೂಳೆಗಳ ಕಾಳಜಿ ವಹಿಸುವುದು ಅತ್ಯಗತ್ಯ.
  ಕಾರ್ತಿಕ್‌ ಅಮೈ

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.