ಶ್ಯ್… ಅವಳು ನಿದ್ದೆ ಮಾಡಲಿ


Team Udayavani, May 15, 2019, 6:00 AM IST

11

ಮನೆಯಲ್ಲಿ ಎಲ್ಲರಿಗಿಂತ ಲೇಟಾಗಿ ಮಲಗಿ, ಎಲ್ಲರಿಗಿಂತ ಬೇಗ ಏಳುವವಳು ಅಮ್ಮ. ನಿತ್ಯವೂ ಎಂಟು ಗಂಟೆ ನಿದ್ದೆ ಮಾಡಲೇಬೇಕು ಅಂತ ಯಾರೇ ಹೇಳಿದರೂ, ಕೆಲಸದೊತ್ತಡ ಅವಳ ಸಿಹಿನಿದ್ರೆಗೆ ಬ್ರೇಕ್‌ ಹಾಕಿ ಬಿಡುತ್ತದೆ. ಎಂಟು ಗಂಟೆ ಬಿಡಿ, ಐದಾರು ಗಂಟೆ ನಿದ್ದೆ ಮಾಡಿದರೆ ಅದೇ ಹೆಚ್ಚು ಅಂತಾರೆ ಹಲವು ಅಮ್ಮಂದಿರು.

ಆದರೆ, ಅವರಿಗೆ ಗೊತ್ತಿರಲಿಕ್ಕಿಲ್ಲ; ಮನೆಯಲ್ಲಿ ಇತರರಿಗಿಂತ ಅವರಿಗೇ ನಿದ್ದೆಯ ಅವಶ್ಯಕತೆ ಜಾಸ್ತಿ ಇದೆ ಅಂತ. ನ್ಯಾಷನಲ್‌ ಸ್ಲಿಪ್‌ ಫೌಂಡೇಶನ್‌ ಹೇಳುವ ಪ್ರಕಾರ, ಪುರುಷರಿಗಿಂತ ಮಹಿಳೆಯರೇ ಕನಿಷ್ಠ ಪಕ್ಷ 20 ನಿಮಿಷ ಜಾಸ್ತಿ ನಿದ್ದೆ ಮಾಡಬೇಕಂತೆ. ಯಾಕೆ ಗೊತ್ತಾ?

ಅವರು ಜಾಸ್ತಿ ಕೆಲಸ ಮಾಡ್ತಾರೆ
ಅಡುಗೆ, ಮನೆ, ಮಕ್ಕಳು, ಗಂಡ, ಆಫೀಸು ಕೆಲಸ ಹೀಗೆ ಮಹಿಳೆಯರು ಯಾವಾಗಲೂ ಬ್ಯುಸಿ ಇರ್ತಾರೆ. ಅವರಿಗೆ ಕೆಲಸವೂ ಜಾಸ್ತಿ, ಕೆಲಸದೊತ್ತಡವೂ ಜಾಸ್ತಿ. ಹಾಗಾಗಿ, ಸಹಜವಾಗಿಯೇ ಮಹಿಳೆಯರಿಗೆ ಹೆಚ್ಚು ವಿಶ್ರಾಂತಿಯ ಅಗತ್ಯವಿರುತ್ತದೆ.

ನಿದ್ರಾಹೀನತೆಯ ಸಮಸ್ಯೆ
ನಿದ್ರಾಹೀನತೆಯ ಸಮಸ್ಯೆಯು ಪುರುಷರಿಗಿಂತ ಮಹಿಳೆಯರನ್ನೇ ಹೆಚ್ಚಾಗಿ ಕಾಡುತ್ತದಂತೆ. ದಿಂಬಿಗೆ ತಲೆಯಿಟ್ಟ ಕೂಡಲೇ ಮಹಿಳೆ­ಯರಿಗೆ ನಿದ್ದೆ ಬರುವುದಿಲ್ಲ. ನಾಳಿನ ಅಡುಗೆ, ಬಾಕಿ ಉಳಿದ ಕೆಲಸ ಅಂತೆಲ್ಲಾ ತಲೆಬಿಸಿ ಮಾಡಿಕೊಂಡು ಅವರು ನಿದ್ದೆಕೆಡಿಸಿಕೊಳ್ತಾರೆ. ಅದನ್ನು ಸರಿದೂಗಿಸಲು ಸ್ವಲ್ಪ ಜಾಸ್ತಿ ನಿದ್ದೆ ಮಾಡಬೇಕು ಅನ್ನುತ್ತದೆ ಸಂಶೋಧನೆ.

ಹಾರ್ಮೋನು ಬದಲಾವಣೆ
ತಿಂಗಳ ಮುಟ್ಟು, ಗರ್ಭಾವಸ್ಥೆ, ಮೆನೋಪಾಸ್‌… ಹೀಗೆ ಸ್ತ್ರೀಯರ ಹಾರ್ಮೋನುಗಳಲ್ಲಿ ಬದಲಾವಣೆ ಆಗುತ್ತಲೇ ಇರುತ್ತದೆ. ಆ ಬದಲಾವಣೆ ಅವರ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಿ, ನಿದ್ರಾಹೀನತೆಯ ಸಮಸ್ಯೆಯನ್ನು ತಂದೊಡ್ಡಬಹುದು. ಹಾಗಾಗಿ ಅವರು ಸ್ವಲ್ಪ ಜಾಸ್ತಿ ವಿಶ್ರಾಂತಿ ಪಡೆಯಬೇಕು.

ತೂಕ ಹೆಚ್ಚಳ
ಪುರುಷರಷ್ಟು ಸುಲಭವಾಗಿ ಮಹಿಳೆಯರು ಮೈ ತೂಕ ಇಳಿಸಿಕೊಳ್ಳಲಾರರು. ಇದಕ್ಕೆ ನಿದ್ರಾಹೀನತೆಯೂ ಒಂದು ಕಾರಣ. ಸರಿಯಾಗಿ ನಿದ್ರೆ ಮಾಡದಿದ್ದರೆ, ದೇಹದಲ್ಲಿ “ಕಾರ್ಟಿಸೋಲ್‌’ ಎಂಬ ಸ್ಟ್ರೆಸ್‌ ಹಾರ್ಮೋನ್‌ ಬಿಡುಗಡೆಯಾಗುತ್ತದೆ. ಅದು ಹಸಿವೆಯನ್ನು ಹೆಚ್ಚಿಸಿ, ದೇಹದ ತೂಕ ಹೆಚ್ಚುವಂತೆ ಮಾಡುತ್ತದೆ.

  • ಗುಡ್‌ನೈಟ್‌ ಟಿಪ್ಸ್‌
    ನಿದ್ದೆಯ ಟೈಮ್‌ ಟೇಬಲ್‌ ಹಾಕಿಕೊಳ್ಳಿ. 10-6 ಅಂದರೆ, ಪ್ರತಿದಿನವೂ ಹತ್ತಕ್ಕೆ ಮಲಗಿ, ಆರಕ್ಕೆ ಏಳಿ. ಒಂದೊಂದು ದಿನ ಒಂದೊಂದು ಸಮಯ ಬೇಡ.
    ಮಲಗುವ ಮುನ್ನ ಐದು ನಿಮಿಷ ಧ್ಯಾನ ಮಾಡಿ. ಎಲ್ಲ ಚಿಂತೆಗಳಿಂದ ಮನಸ್ಸನ್ನು ಮುಕ್ತಗೊಳಿಸಿ.
    ಮಲಗುವುದಕ್ಕಿಂತ ಒಂದು ಗಂಟೆ ಮುಂಚೆಯೇ ಮೊಬೈಲ್‌, ಲ್ಯಾಪ್‌ಟಾಪ್‌, ಟಿ.ವಿ. ಆಫ್ ಮಾಡಿಬಿಡಿ. ಅವುಗಳು ಹೊರಸೂಸುವ ನೀಲಿ ಬೆಳಕು ನಿದ್ರೆಗೆ ಮಾರಕ.
    ಹಾಸಿಗೆ, ಬೆಡ್‌ಶೀಟ್‌ ಸ್ವಚ್ಛವಾಗಿಟ್ಟುಕೊಳ್ಳಿ.
    ಊಟದ ನಂತರ ಕಾಫಿ, ಟೀ ಸೇವಿಸಬೇಡಿ.

ಯಾರು, ಎಷ್ಟು ನಿದ್ದೆ ಮಾಡ್ಬೇಕು?
ವಯಸ್ಸು          ಗಂಟೆ
0-19            9-10
20-64          7-9
64 ಮೇಲ್ಪಟ್ಟು    7-8

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.