“ಆರೋಗ್ಯವಂತ ಸಮಾಜ ಸೃಷ್ಟಿಗಾಗಿ ಪ್ರತಿಯೊಬ್ಬರೂ ಸ್ವತ್ಛತೆಗೆ ಆದ್ಯತೆ ನೀಡಿ’


Team Udayavani, May 15, 2019, 6:15 AM IST

arogyavanta-samaja

ಬದಿಯಡ್ಕ : ಮಳೆಗಾಲಕ್ಕೆ ಮುನ್ನ ಶುಚೀಕರಣ ಮತ್ತು ಸಾಂಕ್ರಾಮಿಕ ರೋಗ ನಿವಾರಣೆಯ ಕುರಿತು ಕಾಳಜಿ ವಹಿಸುವ ನಿಟ್ಟಿನಲ್ಲಿ ಬದಿಯಡ್ಕ ಗ್ರಾಮ ಪಂಚಾಯತ್‌ನ ವಿವಿಧ ಕಡೆಗಳಲ್ಲಿ ಶುಚೀಕರಣ ನಡೆಸಲಾಯಿತು.

ಪಂಚಾಯತ್‌ ಮಟ್ಟದಲ್ಲಿ ನಡೆದ ಕಾರ್ಯಕ್ರಮವನ್ನು ಬಸ್‌ ನಿಲ್ದಾಣ ಪರಿಸರದಲ್ಲಿ ಪಂಚಾಯತ್‌ ಅಧ್ಯಕ್ಷರಾದ ಕೆ.ಎನ್‌.ಕೃಷ್ಣ ಭಟ್‌ ಬದಿಯಡ್ಕ ಉದ್ಘಾಟಿಸಿ ಮಾತನಾಡಿ, ಮಳೆಗಾಲದಲ್ಲಿ ಎದುರಾಗುವ ಆರೋಗ್ಯ ಸಮಸ್ಯೆಗಳನ್ನು ಹೋಗಲಾಡಿಸುವ ಸಲುವಾಗಿ ಈ ಶುಚೀಕರಣ ಕಾರ್ಯವನ್ನು ಹಮ್ಮಿಕೊಳ್ಳಲಾಗಿದ್ದು ಆರೋಗ್ಯವಂತ ಸಮಾಜದ ಸƒಷ್ಟಿಗಾಗಿ ಪ್ರತಿಯೊಬ್ಬರೂ ಈ ಕಾರ್ಯದಲ್ಲಿ ಕೈಜೋಡಿಸಬೇಕು. ಮಾತ್ರವಲ್ಲದೆ ಜನರಲ್ಲಿ ಈ ಬಗ್ಗೆ ಜಾಗƒತಿ ಮೂಡಿಸುವಂತೆ ಕೇಳಿಕೊಂಡರು. ಮನೆ ಹಾಗೂ ಪರಿಸರ, ಪೇಟೆ ಪಟ್ಟಣಗಳಲ್ಲಿ ಶುಚಿತ್ವ ಕಾರ್ಯವು ಭರದಿಂದ ಸಾಗುತ್ತಿದ್ದು ಎಲ್ಲರ ಒಗ್ಗಟ್ಟಿನ ಪ್ರಯತ್ನದಿಂದ ಮಾತ್ರ ಇದು ಸಂಪೂರ್ಣವಾಗಿ ಯಶಸ್ವಿಯಾಗಲು ಸಾಧ್ಯ ಎಂದವರು ಹೇಳಿದರು.

ಪ್ರಜ್ಞಾವಂತ ನಾಗರಿಕರಾಗೋಣ
ಸ್ವತ್ಛತೆ ಕೇವಲ ಎನ್‌.ಎಸ್‌.ಎಸ್‌, ಕುಟುಂಬಶ್ರೀ, ಎಸ್‌. ಪಿ.ಸಿ. ಮುಂತಾದ ಸಂಘಟನೆಗಳ ಸದಸ್ಯರ ಹೊಣೆ ತಿಳಿಯದೇ ಎಲ್ಲ ನಾಗರಿಕರು ಸ್ವತ್ಛ ಗ್ರಾಮಕ್ಕೆ ಮುಂದಾಗಬೇಕು.

ತ್ಯಾಜ್ಯ ವಿಲೇವಾರಿ
ಮದುವೆ ಮೊದಲಾದ ಸಮಾರಂಭಗಳ ಸಂದರ್ಭದಲ್ಲಿ ತ್ಯಾಜ್ಯ ಒಂದು ಸಮಸ್ಯೆಯೆ ಸರಿ. ಹೆಚ್ಚಾಗಿ ಈ ತ್ಯಾಜ್ಯಗಳನ್ನು ನಿರ್ಜನ ಪ್ರದೇಶದಲ್ಲಿ ಎಸೆಯುತ್ತಾರೆ. ಇಲ್ಲವೇ ಹಳ್ಳ ತೋಡಿಗೆ ಹಾಕಿ ಸುಮ್ಮನಾಗುತ್ತಾರೆ. ಆದರೆ ಆಹಾರ ತ್ಯಾಜ್ಯಗಳನ್ನು ವಿಲೇವಾರಿ ಮಾಡಲು ಇರುವ ಸಾಧ್ಯತೆಗಳ ಕಡೆ ಗಮನ ಹರಿಸುವವರಿಲ್ಲ. ಪ್ರತಿಯೊಂದು ಪಂಚಾಯತ್‌ಗಳು, ಮುನಿಸಿ ಪಾಲಿಟಿಗಳು ಈ ಬಗ್ಗೆ ಜಾಗರೂಕತೆ ವಹಿಸಬೇಕು.

ಸ್ವತ್ಛತಾ ಕಾರ್ಯದಲ್ಲಿ ಗ್ರಾ. ಪಂ. ಉಪಾಧ್ಯಕ್ಷೆ ಸೈಬುನ್ನೀಸಾ, ಸ್ಥಾಯೀ ಸಮಿತಿ ಅಧ್ಯಕ್ಷರಾದ ಅನ್ವರ್‌ ಓಝೋನ್‌ ಹಾಗೂ ಶ್ಯಾಮ ಪ್ರಸಾದ್‌ ಮಾನ್ಯ, ಸದಸ್ಯರಾದ ಬಾಲಕೃಷ್ಣ ಶೆಟ್ಟಿ ಕಡಾರು, ವಿಶ್ವನಾಥ ಪ್ರಭು ಕರಿಂಬಿಲ, ಆರೋಗ್ಯ ಇಲಾಖೆಯ ಅಧಿಕಾರಿಗಳು, ಕುಟುಂಬಶ್ರೀ ಸದಸ್ಯೆಯರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರು. ಪಂಚಾಯತ್‌ ಕಾರ್ಯದರ್ಶಿ ಶೆ„ಲೇಂದ್ರನ್‌ ಪ್ರಾಸ್ತಾವಿಕವಾಗಿ ಮಾತನಾಡಿದರು.

ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ದಿನನಿತ್ಯ ಬದಿಯಡ್ಕ ಬಸ್ಸು ತಂಗುದಾಣವನ್ನು ಗುಡಿಸಿ ಶುಚಿಗೊಳಿಸುತ್ತಿರುವ ಪತ್ರಿಕಾ ವಿತರಕ ಬಾಲಕೃಷ್ಣ ಅವರು ಈ ಸಂದರ್ಭದಲ್ಲಿಯೂ ಜನಪ್ರತಿನಿಧಿಗಳೊಂದಿಗೆ ಪಾಲ್ಗೊಂಡು ಶುಚೀಕರಣದಲ್ಲಿ ಸಹಕರಿಸಿದರು.

ಮಳೆ ಮೊದಲೇ ಸ್ವತ್ಛತೆ ಆರಂಭವಾಗಲಿ
ಮಳೆ ಪ್ರಾರಂಭವಾಗುತ್ತಿದ್ದಂತೆ ಮಳೆನೀರಲ್ಲಿ ಕೊಚ್ಚಿಕೊಂಡು ಬರುವ ಬಟ್ಟೆಬರೆ, ಪ್ಲಾಸ್ಟಿಕ್‌, ಆಹಾರ ತ್ಯಾಜ್ಯಗಳು ಎಲ್ಲೆಲ್ಲೂ ದುರ್ಗಂಧ ಬೀರುವುದಲ್ಲದೆ ಹಲವಾರು ರೋಗಗಳಿಗೆ ಕಾರಣವಾಗಲಿವೆೆ. ಹಾಗೆಯೇ ಭೂಮಿಗೆ ಇಂಗುವ ನೀರಿನ ಮಟ್ಟದಲ್ಲಿ ಉಂಟಾಗಬಹುದಾದ ಕುಸಿತ ಅಂತರ್ಜಲಮಟ್ಟ ಕುಸಿಯಲು ಕಾರಣವಾಗುತ್ತದೆ. ಇನ್ನೊಂದೆಡೆ ಚರಂಡಿಗಳಲ್ಲಿ ಈಗಾಗಲೇ ತುಂಬಿರುವ ಬೇಡದ ವಸ್ತುಗಳೊಂದಿಗೆ ಮಳೆನೀರಲ್ಲಿ ಹರಿದು ಬಂದ ವಸ್ತುಗಳೂ ಸೇರಿ ಉಂಟಾಗುವ ಸಮಸ್ಯೆಯಿಂದ ಚರಂಡಿ ನೀರು ರಸ್ತೆಯಲ್ಲಿ ಹರಿಯುವ ಸಾಧ್ಯೆತೆಯೂ ಹೆಚ್ಚು.

ಜಾಗೃತಿ ಮೂಡಲಿ
ಜನರ ಸಹಕಾರದಿಂದ ಮಾತ್ರ ಇಂತಹ ಕಾರ್ಯಗಳು ಸುಲಲಿತವಾಗಿ ನಡೆಯಲು ಸಾಧ್ಯ. ಕುಟುಂಬಶ್ರೀ, ವಿದ್ಯಾರ್ಥಿ ಪೋಲೀಸ್‌, ಸಾಮಾಜಿಕ ಕಾರ್ಯಕರ್ತರು ಪೂರ್ಣ ಸಹಕಾರ ನೀಡುವ ಮೂಲಕ ಬದಿಯಡ್ಕ ಪ್ರದೇಶವನ್ನು ಸ್ವತ್ಛವಾಗಿಸಲು ಸಾಧ್ಯವಾಯಿತು. ಮುಂದೆ ತ್ಯಾಜ್ಯಗಳನ್ನು ಕಂಡಲ್ಲಿ ಎಸೆಯದಂತೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನೂ ಮಾಡಲಾಗುವುದು.
 - ಕೃಷ್ಣ ಭಟ್‌, ಬದಿಯಡ್ಕ ಪಂಚಾಯತ್‌ ಆಧ್ಯಕ್ಷರು.

ಪ್ಲಾಸ್ಟಿಕ್‌ ಸಂಗ್ರಹಿಸಿ
ಸ್ವತ್ಛ ಪರಿಸರದಿಂದ ಆರೋಗ್ಯವಂತ ಸಮಾಜ ಸಷ್ಟಿಯಾಗುತ್ತದೆ. ಪ್ಲಾಸ್ಟಿಕ್‌ ಮುಂತಾದ ವಸ್ತುಗಳಲ್ಲಿ ಕಟ್ಟಿ ನಿಲ್ಲುವ ಮಳೆನೀರು ರೋಗಾಣುಗಳನ್ನುಂಟು ಮಾಡುವುದರಿಂದ ಅವುಗಳನ್ನು ಮಾರ್ಗದ ಬದಿ, ಚರಂಡಿಗಳಿಂದ ಸಂಗ್ರಹಿಸಿ ಸಂಸ್ಕರಣಕೇಂದ್ರಗಳಿಗೆ ಸಾಗಿಸುವ ಕಾರ್ಯ ಕೈಗೊಳ್ಳಲಾಗಿದೆ.
– ಶ್ಯಾಮ ಪ್ರಸಾದ್‌ ಮಾನ್ಯ, ಸ್ಥಾಯೀ ಸಮಿತಿ ಅಧ್ಯಕ್ಷರು

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.