ನಾರಾಯಣಗೌಡರಿಗೆ 10 ಕೋಟಿ ಸಂದಾಯ: ಚಂದ್ರಶೇಖರ್
Team Udayavani, May 15, 2019, 3:00 AM IST
ಕೆ.ಆರ್.ಪೇಟೆ: “ಆಪರೇಷನ್ ಕಮಲ’ಕ್ಕೆ ಒಳಗಾಗಿರುವ ಶಾಸಕ ಕೆ.ಸಿ.ನಾರಾಯಣಗೌಡರು ಬಿಜೆಪಿಯವರಿಂದ ಈಗಾಗಲೇ ಹತ್ತು ಕೋಟಿ ರೂ.ಪಡೆದುಕೊಂಡಿದ್ದು, ಬಾಕಿ ಹಣಕ್ಕಾಗಿ ಕಾಯುತ್ತಿದ್ದಾರೆ. ಬಾಕಿ ಹಣ ಸಿಕ್ಕ ತಕ್ಷಣವೇ ಮುಂಬೈಗೆ ಹಾರಿ ಹೋಗಲಿದ್ದಾರೆ ಎಂದು ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಹೊಸ ಬಾಂಬ್ ಸಿಡಿಸಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಶಾಸಕ ನಾರಾಯಣಗೌಡರನ್ನು ಜೆಡಿಎಸ್ ಪಕ್ಷದ ವರಿಷ್ಠರು ಈಗಾಗಲೇ ಕೈಬಿಟ್ಟಿದ್ದಾರೆ. ಈಗ ನಡೆಯುತ್ತಿರುವ ಪುರಸಭಾ ಚುನಾವಣೆ ಉಸ್ತುವಾರಿಯನ್ನು ಶಾಸಕರಿಗೆ ನೀಡಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.
ಆದ ಕಾರಣ ಲೋಕಸಭಾ ಚುನಾವಣೆ ಫಲಿತಾಂಶ ಬಂದ ತಕ್ಷಣ ನಾರಾಯಣಗೌಡ ಮಾಯವಾದರೆ ಅಚ್ಚರಿಯಿಲ್ಲ. ಅವರು ಬಿಜೆಪಿಯವರಿಂದ ಈಗಾಗಲೇ ಮುಂಗಡವಾಗಿ 10 ಕೋಟಿ ರೂ.ಪಡೆದುಕೊಂಡಿದ್ದಾರೆ. ಅದರಿಂದಲೇ ಅಧಿವೇಶನದ ಸಮಯದಲ್ಲಿ 15 ದಿನ ಮುಂಬೈನಲ್ಲೇ ಉಳಿದುಕೊಂಡಿದ್ದರು.
ಬಿಜೆಪಿಯವರು ಕೊಟ್ಟ ಮಾತಿನಂತೆ ಬಾಕಿ ಹಣ ಕೈ ಸೇರಿದ ತಕ್ಷಣವೇ ಅವರು ಕ್ಷೇತ್ರ ಬಿಡಲಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಬಿಜೆಪಿಯವರು ಅವರನ್ನು ಎಲ್ಲಿಗೆ ಎತ್ತಿಕೊಂಡು ಹೋಗುವರೋ ಗೊತ್ತಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ