ಬಿಜೆಪಿ ಜತೆ ಸೇರಿ ಸರ್ಕಾರ ರಚನೆ ಮಾಡುವ ಮಾತೇ ಇಲ್ಲ: ರೇವಣ್ಣ


Team Udayavani, May 15, 2019, 3:06 AM IST

revanna

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಬಿಜೆಪಿ ಜತೆ ಸೇರಿ ಸರ್ಕಾರ ರಚನೆ ಮಾಡುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ತಿಳಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿ, ಕಾಂಗ್ರೆಸ್‌ ಜತೆಗಿನ ಮೈತ್ರಿ ಮುಂದುವರಿಯಲಿದ್ದು ಯಾವುದೇ ಕಾರಣಕ್ಕೂ ಸರ್ಕಾರ ಪತನವಾಗುವುದಿಲ್ಲ. ಕುಮಾರಸ್ವಾಮಿಯವರು ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ರಾಜಕೀಯ ಚರ್ಚೆ ಮಾಡಿಲ್ಲ. ಬಿಜೆಪಿ ಜತೆ ಸೇರಿ ಸರ್ಕಾರ ರಚನೆ ಮಾಡುವ ಯಾವುದೇ ಪ್ರಸ್ತಾವನೆ ಇಡಲಿಲ್ಲ. ಅಂತಹ ಮಾತುಗಳು ಶುದ್ಧ ಸುಳ್ಳು ಎಂದರು.

“ಪ್ರಧಾನಿ ಭೇಟಿ ಸಂದರ್ಭದಲ್ಲಿ ನಾನೂ ಇದ್ದೆ. ರಾಜ್ಯದ ಅಭಿವೃದ್ಧಿ, ಬರ ಪರಿಹಾರಕ್ಕೆ ಅನುದಾನ ನೀಡುವ ವಿಚಾರದ ಬಗ್ಗೆ ಮಾತ್ರ ಚರ್ಚೆ ಮಾಡಲಾಯಿತು. ರಾಜ್ಯ ಮೈತ್ರಿ ಸರ್ಕಾರಕ್ಕೆ ಯಾವುದೇ ಹಾನಿಯಾಗುವುದಿಲ್ಲ’ ಎಂದು ಹೇಳಿದರು.

ಹಾಸನದಲ್ಲಿ ಪ್ರಜ್ವಲ್‌ ಕನಿಷ್ಠ ಎರಡು ಲಕ್ಷ ಲೀಡ್‌ನ‌ಲ್ಲಿ ಗೆಲ್ಲುತ್ತಾರೆ. ದೇವೇಗೌಡರೆ ನಿಂತಿದ್ದರೆ ಐದು ಲಕ್ಷ ಲೀಡ್‌ ಬರುತ್ತಿತ್ತು. ತುಮಕೂರು ಮತ್ತು ಮಂಡ್ಯದಲ್ಲೂ ನಾವೇ ಗೆಲ್ಲೋದು. ಮಂಡ್ಯದಲ್ಲಿ ನಮ್ಮ ಎಂಟು ಶಾಸಕರನ್ನು ಇಟ್ಟುಕೊಂಡು ಜೆಡಿಎಸ್‌ ಅಭ್ಯರ್ಥಿ ಗೆಲ್ಲೋದಿಲ್ಲ ಅಂದರೆ ಏನರ್ಥ.

ಜೆಡಿಎಸ್‌ ಮತ್ತು ಕಾಂಗ್ರೆಸ್‌ನ ಪಾರಂಪರಿಕ ಓಟ್‌ಗಳು ಯಾವಾಗಲೂ ಬದಲಾಗಲ್ಲ. ಕಾಂಗ್ರೆಸ್‌-ಜೆಡಿಎಸ್‌ ಸೇರಿ 20 ಸ್ಥಾನ ಗೆಲ್ಲಲಿದ್ದೇವೆ. ಸರ್ಕಾರಕ್ಕೆ ಏನೂ ಆಗುವುದಿಲ್ಲ ಎಂದು ಈ ಹಿಂದೆಯೂ ನಾನು ಹೇಳಿದ್ದೆ. ಅದು ನಿಜವಾಗಿತ್ತು. ಈಗ ಹೇಳುತ್ತಿರುವುದು ನಿಜ. ನಮ್ಮ ಸರ್ಕಾರ ಸೇಫ್. ಜೆಡಿಎಸ್‌ ಲೋಕಸಭೆ ಚುನಾವಣೆಯಲ್ಲಿ 6 ಸ್ಥಾನ ಗೆಲ್ಲಲಿದೆ ಎಂದರು.

ಬಿಜೆಪಿಯವರು ಇಪ್ಪತ್ತು ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳುತ್ತಲೇ ಇದ್ದಾರೆ. ಅಷ್ಟು ಜನ ಇದ್ದಿದ್ದರೆ ಮೊದಲೇ ಕರೆದುಕೊಂಡು ಹೋಗಿ ಸರ್ಕಾರ ರಚನೆ ಮಾಡಬೇಕಿತ್ತಲ್ಲವೇ? ಯಡಿಯೂರಪ್ಪ ಅವರದು ಒಂದು ರೀತಿಯಲ್ಲಿ ಹಗಲು ಕನಸು. ಫ‌ಲಿತಾಂಶದ ನಂತರ ಅವರೇ ಎಲ್ಲಿರುತ್ತಾರೋ ಎಂದು ಲೇವಡಿ ಮಾಡಿದರು.

ಟಾಪ್ ನ್ಯೂಸ್

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.