ಕಮಲ್ ಹಾಸನ್ ವಿರುದ್ಧ ಎಫ್ಐಆರ್
Team Udayavani, May 15, 2019, 6:00 AM IST
ತಿರುಚಿದ ಫೋಟೋ: ಕ್ಷಮೆಗೆ ತಾಕೀತು
ಸಾಮಾಜಿಕ ಜಾಲತಾಣಗಳಲ್ಲಿ ಪ.ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಅವರ ತಿರುಚಿದ ಫೋಟೋವನ್ನು ಅಪ್ಲೋಡ್ ಮಾಡಿ, ಬಂಧಿತರಾಗಿದ್ದ ಬಿಜೆಪಿ ಯುವ ಮೋರ್ಚಾ ನಾಯಕಿ ಪ್ರಿಯಾಂಕಾ ಶರ್ಮಾಗೆ ಸುಪ್ರೀಂ ಕೋರ್ಟ್ ಮಂಗಳವಾರ ಜಾಮೀನು ನೀಡಿದೆ. ಆದರೆ, ತಿರುಚಿದ ಫೋಟೋ ಹಾಕಿದ್ದಕ್ಕೆ ಮಮತಾ ಬ್ಯಾನರ್ಜಿ ಅವರಲ್ಲಿ ಲಿಖೀತ ರೂಪದಲ್ಲಿ ಕ್ಷಮೆ ಯಾಚಿಸುವಂತೆಯೂ ಶರ್ಮಾಗೆ ನ್ಯಾಯಪೀಠ ತಾಕೀತು ಮಾಡಿದೆ.
ಕಾಂಗ್ರೆಸ್ಗೆ ಡ್ರೈವರ್ ಸೀಟ್ ಕೊಡಲ್ಲ
ಕಾಂಗ್ರೆಸ್ಸೇತರ- ಬಿಜೆಪಿಯೇತರ ತೃತೀಯ ರಂಗ ರಚನೆಗೆ ಉತ್ಸುಕರಾಗಿದ್ದ ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್ಗೆ ಪ್ರಾದೇಶಿಕ ಪಕ್ಷಗಳಿಂದ ಅಂದುಕೊಂಡಷ್ಟು ಸ್ಪಂದನೆ ವ್ಯಕ್ತವಾಗಿಲ್ಲ. ಡಿಎಂಕೆ ನಾಯಕ ಸ್ಟಾಲಿನ್ ಅವರೂ, ‘ಕಾಂಗ್ರೆಸ್ಸೇತರ- ಬಿಜೆಪಿಯೇತರ ತೃತೀಯ ರಂಗ ಸ್ಥಾಪನೆ ಸಾಧ್ಯವಿಲ್ಲ. ಏನೇ ತೀರ್ಮಾನ ಕೈಗೊಳ್ಳುವುದಿದ್ದರೂ ಮೇ 23ರ ಬಳಿಕವೇ’ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ. ಹೀಗಾಗಿ, ಕೆಸಿಆರ್ ತಮ್ಮ ನಿಲುವನ್ನು ಸ್ವಲ್ಪಮಟ್ಟಿಗೆ ಸಡಿಲಿಸಿದ್ದಾರೆ.ಮಂಗಳವಾರ ಮಾತನಾಡಿದ ಟಿಆರ್ಎಸ್ ವಕ್ತಾರ ಆಬಿದ್ ರಸೂಲ್ ಖಾನ್, ‘ಕೇಂದ್ರದಲ್ಲಿ ಸರಕಾರ ರಚನೆಗೆ ಕಾಂಗ್ರೆಸ್ನ ಬೆಂಬಲ ಪಡೆಯುವಲ್ಲಿ ನಾವು ಮುಕ್ತರಾಗಿದ್ದೇವೆ. ಆದರೆ, ಯಾವ ಕಾರಣಕ್ಕೂ ಕಾಂಗ್ರೆಸ್ಗೆ ಡ್ರೈವಲ್ ಸೀಟು ಬಿಟ್ಟುಕೊಡಲ್ಲ’ ಎಂದಿದ್ದಾರೆ. ಈ ಮೂಲಕ ಪ್ರಧಾನಿ ಹುದ್ದೆಯನ್ನು ಕಾಂಗ್ರೆಸ್ಗೆ ಕೊಡಲ್ಲ ಎಂದು ಪರೋಕ್ಷವಾಗಿ ಟಿಆರ್ಎಸ್ ಸ್ಪಷ್ಟಪಡಿಸಿದೆ.
ಬಿಜೆಪಿಯಿಂದ ಆರೆಸ್ಸೆಸ್ ದೂರ
ಪ್ರಧಾನಿ ಮೋದಿ ನೇತೃತ್ವದ ಸರಕಾರ ಮುಳುಗುತ್ತಿರುವ ಹಡಗಿದ್ದಂತೆ. ಈಗ ಆರೆಸ್ಸೆಸ್ ಕೂಡ ಬಿಜೆಪಿಯಿಂದ ದೂರವಾಗುತ್ತಿದೆ ಎಂದು ಬಿಎಸ್ಪಿ ನಾಯಕಿ ಮಾಯಾವತಿ ಹೇಳಿದ್ದಾರೆ. ಈ ಬಾರಿ ಆರ್ಎಸ್ಎಸ್ ಸದಸ್ಯರು ಬಿಜೆಪಿ ಪರ ಪ್ರಚಾರ ನಡೆಸಿದ್ದನ್ನು ನಾನು ನೋಡಿಯೇ ಇಲ್ಲ. ಆರ್ಎಸ್ಎಸ್ ಕೂಡ ಬಿಜೆಪಿ ಜೊತೆ ನಿಲ್ಲುತ್ತಿಲ್ಲ ಎಂದಿದ್ದಾರೆ.ಬಿಜೆಪಿಯಿಂದ ಆರೆಸ್ಸೆಸ್ ದೂರಪ್ರಧಾನಿ ಮೋದಿ ನೇತೃತ್ವದ ಸರಕಾರ ಮುಳುಗುತ್ತಿರುವ ಹಡಗಿದ್ದಂತೆ. ಈಗ ಆರೆಸ್ಸೆಸ್ ಕೂಡ ಬಿಜೆಪಿಯಿಂದ ದೂರವಾಗುತ್ತಿದೆ ಎಂದು ಬಿಎಸ್ಪಿ ನಾಯಕಿ ಮಾಯಾವತಿ ಹೇಳಿದ್ದಾರೆ. ಈ ಬಾರಿ ಆರ್ಎಸ್ಎಸ್ ಸದಸ್ಯರು ಬಿಜೆಪಿ ಪರ ಪ್ರಚಾರ ನಡೆಸಿದ್ದನ್ನು ನಾನು ನೋಡಿಯೇ ಇಲ್ಲ. ಆರ್ಎಸ್ಎಸ್ ಕೂಡ ಬಿಜೆಪಿ ಜೊತೆ ನಿಲ್ಲುತ್ತಿಲ್ಲ ಎಂದಿದ್ದಾರೆ.