ಬಿಸಿಲಿನ ಹೊಡೆತಕ್ಕೆ ಕಾಗಿಣಾ ಒಡಲು ಬರಿದು

ಪಾತಾಳಕ್ಕಿಳಿದ ಕೊಳವೆ ಬಾವಿ ನೀರು•ಮೇವಿಗಾಗಿ ಅಲೆಯುತ್ತಿರುವ ಜಾನುವಾರು

Team Udayavani, May 15, 2019, 9:50 AM IST

15-May-1

ಶಹಾಬಾದ: ಮೇವು ಹಾಗೂ ನೀರಿನ ಮೂಲಗಳನ್ನು ಹುಡುಕಿಕೊಂಡು ಅಲೆದಾಡುತ್ತಿರುವ ದನಗಳ ಹಿಂಡು.

ಶಹಾಬಾದ: ನಗರದಿಂದ ಕೇವಲ ಎರಡು ಕಿಮೀ ದೂರದಲ್ಲಿರುವ ಭಂಕೂರ ಗ್ರಾಮದಲ್ಲಿ ಕಾಗಿಣಾ ನದಿಯಿದ್ದರೂ, ನೀರಿಗಾಗಿ ಹಾಹಾಕಾರ ಭುಗಿಲೆದ್ದಿದ್ದು, ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರದಾಡುವಂಥ ಪರಿಸ್ಥಿತಿ ಬಂದೊದಗಿದೆ.

ಸುಮಾರು ಹದಿನೈದು ಸಾವಿರ ಜನಸಂಖ್ಯೆ ಹೊಂದಿರುವ ಭಂಕೂರ ಗ್ರಾಪಂ ಕೇಂದ್ರ ಸ್ಥಾನ ಹೊಂದಿದೆ. ಕಳೆದ ಒಂದು ತಿಂಗಳಿನಿಂದ ಇಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಹೀಗಾಗಿ ಗ್ರಾಮಸ್ಥರು ನೀರಿಗಾಗಿ ಪ್ರತಿನಿತ್ಯ ಅಲೆಯುವಂತಾಗಿದೆ. ಗ್ರಾಪಂ ಪಕ್ಕದಲ್ಲಿರುವ ಕುಡಿಯುವ ನೀರಿನ ಶುದ್ಧೀಕರಣ ಘಟಕ ಗ್ರಾಮದ ಜನರಿಗೆ ವರದಾನವಾಗಿತ್ತು. ಆದರೆ ಬೇಸಿಗೆ ಪ್ರಭಾವಕ್ಕೆ ಒಳಗಾಗಿ ಕೊಳವೆ ಬಾವಿ ಬತ್ತಿ ಹೋಗಿದೆ. ಗ್ರಾಮದ ಪಂಚಾಯಿತಿ ಬಳಿಯಿರುವ ಬೆಳಗ್ಗೆ ಹಾಗೂ ಸಂಜೆ ಶುದ್ಧೀಕರಣ ಘಟಕದಿಂದ ಬರುವ ನೀರಿಗಾಗಿ ಹತ್ತಾರು ಕೊಡಗಳನ್ನು ಹಿಡಿದು ನಸುಕಿನ ಜಾವದಿಂದಲೇ ಸರದಿಯಲ್ಲಿ ಕಾಯುವಂಥ ಪರಿಸ್ಥಿತಿ ಗ್ರಾಮಸ್ಥರಿಗಾಗಿದೆ.

ಗ್ರಾಮದ ಹಣಮಂತ ದೇವರ ದೇವಸ್ಥಾನದ ಹಿಂದೆ ಒಂದು ಬಾವಿಯಿದೆ. ಅದು ಬಳಸಲು ಯೋಗ್ಯವಾ ಗಿಲ್ಲ. ಇರುವ ಒಂದೆರಡು ಕೊಳವೆ ಬಾವಿಗಳಲ್ಲಿ ನೀರು ಪಾತಾಳಕ್ಕೆ ಇಳಿದಿವೆ. ಇದರಿಂದ ಹನಿ ನೀರಿಗಾಗಿಯೂ ಪರದಾಡುವ ಪರಿಸ್ಥಿತಿ ಇದೆ. ಪ್ರತಿ ಬೇಸಿಗೆಯಲ್ಲಿ ಒಂದೆರಡು ಬಾರಿಯಾದರೂ ಮಳೆಯಾಗುತ್ತಿತ್ತು. ಇದರಿಂದ ಧರೆ ತಂಪಾಗುತ್ತಿತ್ತು. ಆದರೆ ಈ ಬಾರಿ ಒಂದು ಬಾರಿಯೂ ಮಳೆಯಾಗದಿರುವುದರಿಂದ ಭೂಮಿ ಕಾದ ಬಾಣಲೆಯಂತಾಗಿದೆ. ಎಲ್ಲಿಲ್ಲದ ಸಂಕಷ್ಟ ಎದುರಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡು ದುಬಾರಿ ಬೆಲೆಗೆ ಕ್ಯಾನ್‌ಗಳನ್ನು ಮಾರಾಟ ಮಾಡುತ್ತಿದ್ದಾರೆ. ಅನಿವಾರ್ಯವಾಗಿ ತೆಗೆದ ಕೊಳ್ಳಬೇಕಾಗಿದೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳುವವರು ಯಾರು ಇಲ್ಲದಂತಾಗಿದೆ ಎನ್ನುತ್ತಾರೆ ಗ್ರಾಮಸ್ಥರು.

ಬಿಸಿಲಿನ ಪ್ರಖರತೆಗೆ ಮನೆಯಿಂದ ಹೊರ ಬರುವಂತಿಲ್ಲ. ಮದುವೆ, ಗೃಹ ಪ್ರವೇಶ ಇತರ ಕಾರ್ಯಕ್ರಮಗಳಿಗೆ ಅನಿವಾರ್ಯವಾಗಿ ಹೋಗು ವಂತಾಗಿದೆ. ಇತ್ತ ಕಾಗಿಣಾ ಒಡಲು ಬರಿದಾಗಿದೆ. ಸುತ್ತಮುತ್ತಲೂ ಹಸಿರಿನಿಂದ ಕಂಗೊಳಿಸುತ್ತಿದ್ದ ಗಿಡ, ಮರಗಳು ಒಣಗಿವೆ. ದನ-ಕರುಗಳಿಗೆ ಮೇವಿಲ್ಲ. ಹಸಿರು ಹುಡುಕಿಕೊಂಡು ಅಲೆದಾಡುವ ಪರಿಸ್ಥಿತಿ ಬಂದೊಗಿದೆ. ಈ ಬೇಸಿಗೆಯಲ್ಲಿ ನದಿಯೂ ಸಂಪೂರ್ಣ ಬತ್ತಿ ಹೋಗಿದ್ದರಿಂದ ನೀರಿನ ಸರಬರಾಜು ಮಾಡುವುದು ಗ್ರಾಪಂಗೆ ತಲೆನೋವಾಗಿ ಪರಿಣಮಿಸಿದೆ. ಅಲ್ಲದೇ ಜನಗಳಿಗೆ ನೀರಿಲ್ಲ, ಇನ್ನು ಜಾನುವಾರುಗಳ ಗತಿ ಏನು ಎನ್ನುವಂತಾಗಿದೆ.

ಶಾಶ್ವತ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಈ ಹಿಂದೆ ನದಿಯಲ್ಲಿ ಜಾಕವೆಲ್ ನಿರ್ಮಿಸಲಾಗಿದೆ. ಅದರ ಮೇಲೆ ಯಾವುದೇ ಮುಚ್ಚಳಕವಿಲ್ಲದೇ ಇರುವುದರಿಂದ ಮಳೆಗಾಲದಲ್ಲಿ ನದಿ ತುಂಬಿ ಬಂದಾಗ ಜಾಕವೆಲ್ ನೀರಿನಲ್ಲಿ ಮುಳುಗುತ್ತದೆ. ಅಲ್ಲದೇ ಹರಿದು ಬಂದ ಎಲ್ಲ ಪದಾರ್ಥಗಳು ಜಾಕವೆಲ್ನಲ್ಲಿ ಸೇರಿ ಗಬ್ಬು ವಾಸನೆ ಹರಡಲು ಶುರುವಾಗುತ್ತದೆ. ಅಲ್ಲದೇ ಈಗಾಗಲೇ ಜಾಕವೆಲ್ನಿಂದ ಸರಬರಾಜು ಮಾಡುವ ನೀರನ್ನು ಬಳಸಿದ್ದಕ್ಕೆ ಜನರಿಗೆ ತುರಿಕೆ ಕಂಡುಬರುತ್ತಿದೆ. ಗ್ರಾಪಂ ನೀರನ್ನು ಪರೀಕ್ಷೆಗೆ ಕಳಿಸಿದ್ದು, ಈ ನೀರು ಕುಡಿಯಬೇಡಿ ಹಾಗೂ ಬಳಸಬೇಡಿ ಎಂದು ಡಂಗೂರ ಸಾರಿದ್ದಾರೆ. ಈಗಾಗಲೇ ಗ್ರಾಪಂನಿಂದ ಕಾಗಿಣಾ ನದಿ ದಡದಲ್ಲಿ ಕೊಳವೆ ಬಾವಿ ತೋಡಿಸಲಾಗಿದೆ. ಜನರು ಅಲ್ಲಿಂದಲೇ ನೀರನ್ನು ತೆಗೆದುಕೊಂಡು ಹೋಗುತ್ತಿದ್ದಾರೆ.

ಎರಡು ದಿನಗಳ ಹಿಂದಷ್ಟೇ ಬೆಣ್ಣೆ ತೋರಾ ಅಣೆಕಟ್ಟಿನಿಂದ ಬಿಟ್ಟ ನೀರು ನದಿಗೆ ಬಂದಿದೆ. ಅದು ತಿಳಿ ಹಳದಿ ಬಣ್ಣದಿಂದ ಕೂಡಿದ್ದು, ವಾಸನೆ ಬರುತ್ತಿದ್ದು, ಬಳಸಲು ಮಾತ್ರ ಉಪಯೋಗ ಮಾಡುವಂತಿವೆ. ಒಂದೊಮ್ಮೆ ಕುಡಿದರೆ ರೋಗಗಳು ಹರಡುವುದು ನಿಶ್ಚಿತ. ಜನತೆ ಯಾವಾಗ ನೀರಿನ ಸಮಸ್ಯೆ ಬಗೆಹರಿಯುತ್ತದೆ ಎಂದು ಕಾಯ್ದು ಕುಳಿತಿದ್ದಾರೆ.

ಅಕ್ರಮ ಮರಳುಗಾರಿಕೆಯಿಂದ ಕಾಗಿಣಾ ಒಡಲು ಬರಿದಾಗಿದೆ. ಈ ಅಕ್ರಮ ತಡೆಗಟ್ಟಿದ್ದರೆ ಕೊಳಚೆ ನೀರು ಕುಡಿಯುತ್ತಿರಲಿಲ್ಲ. ಹನಿ ನೀರಿಗಾಗಿ ಪರದಾಡುವ ಪರಿಸ್ಥಿತಿ ಬರುತ್ತಿರಲಿಲ್ಲ. ಜನರು ಕುಡಿಯುವ ನೀರಿಗಾಗಿ ಐದಾರು ಕಿ.ಮೀ ವರೆಗೆ ಅಲೆದಾಡುವಂತೆ ಆಗಿದೆ. ಹಗಲು-ರಾತ್ರಿ ನೀರು ತರುವುದೇ ಕಾಯಕವಾಗಿದೆ. ಗ್ರಾ.ಪಂ.ನವರು ನದಿಯಿಂದ ನೀರು ಸರಬರಾಜು ಮಾಡುತ್ತಿದ್ದಾರೆ. ಆದರೆ ನೀರು ಗಬ್ಬು ವಾಸನೆ ಹರಡುತ್ತಿದೆ. ಈ ನೀರು ಬಳಸಲು ಯೋಗ್ಯವಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕ್ಷೇತ್ರದ ಶಾಸಕರಾದ ಪ್ರಿಯಾಂಕ್‌ ಖರ್ಗೆ ಅವರು ಚುನಾವಣೆಯಿಂದ ಸ್ವಲ್ಪ ಬಿಡುವು ಮಾಡಿಕೊಂಡು ಗ್ರಾಮದ ಕಡೆಗೆ ಗಮನಹರಿಸಲಿ.
•ಪ್ರಕಾಶ ಪಾಟೀಲ
ಕರವೇ ಘಟಕದ ಅಧ್ಯಕ್ಷರು

ಅಂತರ್ಜಲ ಮಟ್ಟ ಕುಸಿದಿದೆ. ಜಾಕವೆಲ್ನಲ್ಲಿ ಹೂಳು ತುಂಬಿಕೊಂಡಿರುವುದರಿಂದ ಕಲುಷಿತ ನೀರನ್ನೇ ಕುಡಿಯಬೇಕಾಗಿದೆ. ಇದರಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಗ್ರಾಮಸ್ಥರನ್ನು ಕಾಡುತ್ತಿದೆ. ಮುಂಬರುವ ದಿನಗಳಲ್ಲಾದರೂ ಮುಂಜಾಗೃತೆ ವಹಿಸಿ ಗ್ರಾಮಕ್ಕೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಡಬೇಕು.
ಸಂತೋಷ ಕಲಶೆಟ್ಟಿ ,
ಗ್ರಾಮಸ್ಥ

ಮಲ್ಲಿನಾಥ ಜಿ.ಪಾಟೀಲ

ಟಾಪ್ ನ್ಯೂಸ್

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.