ನಿರುಪಯುಕ್ತ ಜಾಗ ಈಗ ಉದ್ಯಾನ

ಹಸಿರು ಕಂಗೊಳಿಸುವ ಉದ್ಯಾನ ನಿರ್ಮಾಣ•ಖಾಸಗಿ ವಾಹನಗಳ ಮಾಲೀಕರ ಕಾರ್ಯ

Team Udayavani, May 15, 2019, 11:18 AM IST

BAGALKOTE-tdy-3..

ತೇರದಾಳ: ಪಟ್ಟಣದ ಬಸ್‌ ನಿಲ್ದಾಣ ಬಳಿ ಖಾಸಗಿ ವಾಹನಗಳ ಚಾಲಕರು ಹಾಗೂ ಮಾಲೀಕರು ನಿರ್ಮಿಸಿದ ಉದ್ಯಾನವನ.

ತೇರದಾಳ: ಪಟ್ಟಣದ ಬಸ್‌ ನಿಲ್ದಾಣ ಬಳಿಯ ಮಹಾತ್ಮ ಗಾಂಧಿ ಕ್ರೀಡಾಂಗಣದ ಕಾಂಪೌಂಡ್‌ಗೆ ಹೊಂದಿಕೊಂಡಿದ್ದ ನಿರುಪಯುಕ್ತ ಜಾಗ ಈಗ ಉದ್ಯಾನವನವಾಗಿ ಮಾರ್ಪಟ್ಟಿದೆ.

ಖಾಸಗಿ ವಾಹನಗಳ ಚಾಲಕರು ಉದ್ಯಾನವನ ನಿರ್ಮಿಸಿ ಸಾಮಾಜಿಕ ಕಾರ್ಯ ಕೈಗೊಂಡಿದ್ದಾರೆ. ಮೂತ್ರವಿಸರ್ಜನೆ, ಸತ್ತ ಪ್ರಾಣಿ ಸೇರಿದಂತೆ ಗಲೀಜು ತಂದು ಹಾಕಿ ಜಾಗವನ್ನು ದುರುಪಯೋಗ ಪಡಿಸಿಕೊಳ್ಳಲಾಗಿತ್ತು. ಇದನ್ನು ಕಂಡ ಆಟೋ ರಿಕ್ಷಾ, ಮ್ಯಾಕ್ಸಿಕ್ಯಾಬ್‌ ವಾಹನಗಳ ಮಾಲೀಕರು ಮತ್ತು ಚಾಲಕರ ಸಂಘದವರು ಪರಿಸರ ಸ್ವಚ್ಛಗೊಳಿಸುವ ಕಾರ್ಯ ಕೈಗೊಂಡು ಪ್ರಶಂಸೆಗೆ ಪಾತ್ರರಾಗಿದ್ದಾರೆ.

ತಮ್ಮ ಸ್ವಂತ ಹಣದಲ್ಲಿಯೇ ಸುಮಾರು ಅರ್ಧ ಕಿ.ಮೀ ದೂರದವರೆಗೆ ಪೈಪ್‌ಲೈನ್‌ ಅಳವಡಿಸಿ ನೀರಿನ ಅನುಕೂಲ ಮಾಡಿಕೊಂಡ ಚಾಲಕರು ಹಾಗೂ ಮಾಲೀಕರು ಶ್ರಮದಾನದಿಂದ ಸ್ಥಳ ಶುಚಿಗೊಳಿಸಿದರು. ಸಸಿ ನೆಡಲು ಗುಂಡಿತೋಡಿ, ಗೊಬ್ಬರ ಹಾಕಿ ಭೂಮಿ ಸಿದ್ಧಪಡಿಸಿಕೊಂಡರು. ಗೋವಾ, ಬೆಂಗಳೂರು, ಸಾಂಗಲಿ ಸೇರಿದಂತೆ ವಿವಿಧ ಕಡೆಗಳಿಂದ ಮಾವು, ತೆಂಗು, ತುಳಸಿ, ಬೇವು, ಬದಾಮ, ಸಾಗವಾನಿ, ವಿವಿಧ ತೆರನಾದ ಹೂ-ಬಳ್ಳಿ ಸೇರಿದಂತೆ ಅನೇಕ ಸಸಿಗಳನ್ನು ತಂದು ನಾಟಿ ಮಾಡಿದ್ದಾರೆ. ದಿನಂಪ್ರತಿ ಎಲ್ಲರೂ ಸರದಿಯಂತೆ ನೀರುಣಿಸಿದ್ದಾರೆ. ಬೇಸಿಗೆಯಾಗಿದ್ದರಿಂದ ಕೆರೆಯಿಂದ ನೀರು ತಂದು ಹಾಕಿ, ಸಸಿಗಳ ರಕ್ಷಣೆಗೆ ಸ್ವಂತ ಖರ್ಚಿನಿಂದ ತಂತಿ ಜಾಳಿಗೆ ಅಳವಡಿಸಿ ಪೋಷಣೆ ಮಾಡುತ್ತಿದ್ದಾರೆ. ಆಗಾಗ್ಗೆ ಕಳೆ-ಕಸ ತೆಗೆದು ಸ್ವಚ್ಛ ಕಾರ್ಯ ಕೈಗೊಂಡಿದ್ದಾರೆ. ಅನೇಕ ಹೂ, ಗಿಡ, ಬಳ್ಳಿಗಳು ಬೆಳೆದು ನೋಡುಗರನ್ನು ಕೈಬೀಸಿ ಕರೆಯುತ್ತಿವೆ. ಕಲ್ಲಿನ ಆಸನ ನಿರ್ಮಿಸಿದ್ದು, ಬಿಸಿಲಿನ ತಾಪಕ್ಕೆ ಬಸವಳಿದವರಿಗೆ ವಿಶ್ರಾಂತಿಗೆ ಆಹ್ವಾನಿಸುವ ಸುಂದರ ತಾಣವಾಗಿದೆ.

ಚಾಲಕರು ಹಾಗೂ ಮಾಲೀಕರು ಪುರಸಭೆಯವರಿಂದ ನಲ್ಲಿ ಜೋಡಣೆ ಪಡೆ‌ದು ವಿವಿಧ ಕಡೆ ಹೋಗಿ ಅನೇಕ ಸಸಿಗಳನ್ನು ಹಾಗೂ ಮಾರ್ಗದರ್ಶನ ಪಡೆದು ಕೈ ದೋಟ ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Choosing the Best Gambling Enterprise Online Payment Method

Best Online Slots For Best Casino Game

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.