ಬದುಕಬೇಕಾ, ಸಾಯಬೇಕಾ? ಇನ್ಸ್ ಸ್ಟಾಗ್ರಾಮ್ ನಲ್ಲಿ ಸಮೀಕ್ಷೆ; ಹುಡುಗಿ ಆತ್ಮಹತ್ಯೆ!


Team Udayavani, May 15, 2019, 3:06 PM IST

Death

ಕೌಲಾಲಂಪುರ್: ರಕ್ತ ನೀಡಿ ಜೀವ ಉಳಿಸಿ, ನಾಪತ್ತೆಯಾಗಿದ್ದಾರೆ..ದಯವಿಟ್ಟು ಇವರ ಪತ್ತೆಗೆ ಸಹಕರಿಸಿ ಹೀಗೆ ನೂರಾರು ವಿಧದ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿರುತ್ತದೆ. ಆದರೆ ತಾನು ಬದುಕಬೇಕಾ ಅಥವಾ ಸಾಯಬೇಕಾ? ಎಂಬುದನ್ನು ಸಾಮಾಜಿಕ ಜಾಲತಾಣದಲ್ಲಿ ಸಮೀಕ್ಷೆ ನಡೆಸಿ ಹುಡುಗಿಯೊಬ್ಬಳು ಕಟ್ಟಡದ ಮೇಲಿನಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ವಿಲಕ್ಷಣ ಘಟನೆಯೊಂದು ಮಲೇಶ್ಯಾದಲ್ಲಿ ನಡೆದಿದೆ!

ಘಟನೆ ವಿವರ:

ಸಾರಾವಾಕ್ ಪೊಲೀಸರ ಮಾಹಿತಿ ಪ್ರಕಾರ, ಮೇ 13ರಂದು 16 ವರ್ಷದ ಹುಡುಗಿಯೊಬ್ಬಳು ಇನ್ಸ್ ಸ್ಟಾಗ್ರಾಮ್ ಫೋಟೋ ಶೇರಿಂಗ್ ಆ್ಯಪ್ ನಲ್ಲಿ “ ಇದು ತುಂಬಾ ಮುಖ್ಯವಾದದ್ದು..ನನಗೆ D/L ಆಯ್ಕೆ ಮಾಡಲು ನೆರವು ನೀಡಿ” ಎಂದು ಪ್ರಶ್ನೆ ಕೇಳಿದ್ದಳು.

ಇನ್ಸ್ ಸ್ಟಾಗ್ರಾಮ್ ಸಮೀಕ್ಷೆ ಪ್ರಕಾರ ಬಾಲಕಿಯ ಶೇ.69ರಷ್ಟು ಫಾಲೋವರ್ಸ್ “ಡಿ” ಆಯ್ಕೆ ಮಾಡಿಕೊಳ್ಳಲು ಸಹಮತ ಸೂಚಿಸಿದ್ದರು! ಆ ಬಳಿಕ ಹುಡುಗಿ ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಳು!

ಸಂತ್ರಸ್ತೆ ಹುಡುಗಿಯ ಆಪ್ತ ಗೆಳೆಯರ ಪ್ರಕಾರ, ಡಿ/ಎಲ್ ಅಂದರೆ ಡೆತ್ ಆ್ಯಂಡ್ ಲೈಫ್! ಎಂಬುದಾಗಿ ವಿವರಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಐದಿಲ್ ಬೋಲ್ಹಾಸ್ಸಾನ್ ತಿಳಿಸಿರುವುದಾಗಿ ದ ಬೋರ್ನಿಯೋ ಪೋಸ್ಟ್ ಪತ್ರಿಕೆ ವರದಿ ಮಾಡಿದೆ.

ಈ ಪ್ರಕರಣದ ಬಗ್ಗೆ ಮಾತನಾಡಿರುವ ವಕೀಲ, ಸಂಸತ್ ಸದಸ್ಯ ರಾಮ್ ಕರ್ಪಾಲ್ ಸಿಂಗ್, ಇನ್ಸ್ ಸ್ಟಾಗ್ರಾಮ್ ನಲ್ಲಿ ಬಾಲಕಿ ಆತ್ಮಹತ್ಯೆ ಮಾಡಿಕೊಳ್ಳಬೇಕೆಂದು ಯಾರು ವೋಟ್ ಹಾಕಿದ್ದಾರೋ ಅವರೇ ಕಾರಣರಾಗುತ್ತಾರೆ. ಈ ಘಟನೆ ಬಗ್ಗೆ ಅಧಿಕಾರಿಗಳು ತನಿಖೆ ನಡೆಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಮಲೇಶ್ಯಾದ ಕಾನೂನಿನ ಪ್ರಕಾರ ಅಪ್ರಾಪ್ತೆಯ ಆತ್ಮಹತ್ಯೆಗೆ ಯಾರು ಪ್ರೇರಣೆ ನೀಡುತ್ತಾರೋ..ಅವರು ದೋಷಿ ಎಂದು ಸಾಬೀತಾದರೆ ಮರಣದಂಡನೆ ಅಥವಾ 20 ವರ್ಷಗಳ ಕಾಲ ಜೈಲುಶಿಕ್ಷೆ ಅನುಭವಿಸಬೇಕಾಗುತ್ತದೆ.

ಟಾಪ್ ನ್ಯೂಸ್

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.