ಪಾತಾಳಕ್ಕಿಳಿದಿದೆ ಅಂತರ್ಜಲ ಮಟ್ಟ

ಸಾವಿರಾರು ಆಡಿ ಕೊಳವೆ ಬಾವಿ ಕೊರೆದರೂ ನೀರಿಲ್ಲ | ಮುಂದಿನ ವರ್ಷ ಹನಿ ನೀರಿಗೂ ಪರದಾಟ

Team Udayavani, May 15, 2019, 5:23 PM IST

tumkur-tdy-2..

ಕೊಳವೆ ಬಾವಿಗಳಿಗೆ ನೀರು ಇಂಗಿಸುವುದು.

ಚಿಕ್ಕನಾಯಕನಹಳ್ಳಿ: ತಾಲೂಕಿನಲ್ಲಿ ಅಂತರ್ಜಲ ಮಟ್ಟ ಪಾತಾಳಕ್ಕಿಳಿದಿದೆ. ಬತ್ತಿ ಹೋಗಿರುವ ಕೊಳವೆ ಬಾವಿಗಳಿಗೆ ಮರುಜೀವ ನೀಡುವ ಸಂಜೀವಿನಿ ಇಂಗು ಗುಂಡಿ ಯೋಜನೆಯು ಅನುಷ್ಠಾನಕ್ಕೆ ಬಂದರೆ ಮಾತ್ರ ಮುಂದಿನ ದಿನಗಳಲ್ಲಿ ಅಂತರ್ಜಲ ಮಟ್ಟ ಸುಧಾರಿಸುತ್ತದೆ ಹೊರತು, ಬೇರೆ ದಾರಿ ಇಲ್ಲವಾಗಿದೆ.

ಭೀಕರ ಬರದ ಛಾಯೆ ತಾಲೂಕಿನಲ್ಲಿ ಮನೆ ಮಾಡಿದ್ದು, ವರ್ಷದಿಂದ ವರ್ಷಕ್ಕೆ ಅಂತರ್ಜಲ ಪಾತಾಳಕ್ಕಿಳಿಯುತ್ತಿದೆ. ಸಾವಿರ ಆಡಿ ಕೊಳವೆ ಬಾವಿ ಕೊರೆದರೂ ನೀರು ಬರುತ್ತಿಲ್ಲ. ಬಿಸಿಲಿಗೆ ದಿನದಿಂದ ದಿನಕ್ಕೆ ಬಹುತೇಕ ಕೊಳವೆ ಬಾವಿ ಬತ್ತಿ ಹೋಗುತ್ತಿದೆ. ಅಂತರ್ಜಲ ಕುಸಿತದಲ್ಲಿ ರಾಜ್ಯದಲ್ಲಿ ಚಿಕ್ಕನಾಯಕನಹಳ್ಳಿ ತಾಲೂಕು ಎರಡನೇ ಸ್ಥಾನದಲ್ಲಿ ಇದೆ. ತಾಲೂಕಿನಲ್ಲಿ ಜಲಕ್ಷಾಮ ಆವರಿಸಿಕೊಂಡು ರೈತರನ್ನು ಕಂಗಾಲು ಮಾಡಿದೆ.

ಮಳೆ ನೀರು ಸಂಗ್ರಹಿಸಿ: ತಾಲೂಕಿನಲ್ಲಿ ಸರ್ಕಾರದ ಅಧಿನದಲ್ಲಿ ಕುಡಿಯುವ ನೀರಿನ ಸುಮಾರು 1475 ಕೊಳವೆ ಬಾವಿಗಳು ಇದೆ. ಇವುಗಳ ಪೈಕಿ ಸುಮಾರು 650 ಕೊಳವೆ ಬಾವಿಗಳಲ್ಲಿ ನೀರು ಬರುತ್ತಿದೆ. 2 ಲಕ್ಷ ಜನಸಂಖ್ಯೆ ಇರುವ ತಾಲೂಕಿನಲ್ಲಿ ನೀರಿನ ಹಾಹಕಾರ ಹೆಚ್ಚಾಗಿದ್ದು, ಸಾವಿರಾರು ಆಡಿ ಕೊಳವೆ ಬಾವಿ ಕೊರೆಸುವ ಮುನ್ನ ಬತ್ತಿ ಹೋಗಿರುವ ಕೊಳವೆ ಬಾವಿಗಳಿಗೆ ಮಳೆ ನೀರು ಸಂಗ್ರಹವಾಗುವಂತೆ ಮಾಡಿದರೆ, ಅಂತರ್ಜಲ ಮಟ್ಟ ಸುಧಾರಿಸುವ ಸಾಧ್ಯತೆಗಳು ಹೆಚ್ಚಾಗಿವೆ.

ನೀರು ಇಂಗಿಸುವ ಪದ್ಧತಿ ಆರಂಭಿಸಿ: ತಾಲೂಕಿನಲ್ಲಿ ಕಳೆದ 15 ವರ್ಷಗಳ ಅವಧಿಯಲ್ಲಿ ಪ್ರತಿ ವರ್ಷ 450ರಿಂದ 750 ಮಿ.ಮಿ ಮಳೆಯಾಗುತ್ತಿದೆ. ಆದರೆ, ಮಳೆ ನೀರನ್ನು ಸಂಗ್ರಹಿಸುವಲ್ಲಿ ವಿಫ‌ಲವಾದ ಕಾರಣದಿಂದ ಇಂದು ಭೀಕರ ಬರ ಬಂದಿದೆ. ಪ್ರತಿ ಕೊಳವೆ ಬಾವಿಗಳಿಗೂ ಮಳೆ ಬಂದ ವೇಳೆ ನೀರನ್ನು ಇಂಗಿಸುವ ಪದ್ಧತಿ ಆರಂಭವಾಗಬೇಕಿದೆ. ನೀರು ಇಂಗಿಸುವ ಕ್ರಮವನ್ನು ಅನುಷ್ಠಾನಕ್ಕೆ ತಂದರೆ ಮಾತ್ರ ಮುಂದಿನ ದಿನಗಳಲ್ಲಿ ತಾಲೂಕಿನ ಅಂತರ್ಜಲ ಮಟ್ಟ ಸುಧಾರಿಸುತ್ತದೆ.

ನೀರು ಇಂಗಿಸುವುದು ಹೇಗೆ?: 8 ಆಡಿ ಆಗಲ 10 ಆಡಿ ಆಳದ ಕೊಳವೆ ಬಾವಿ ಹೊಂಡಕ್ಕೆ 180 ರಂಧ್ರಗಳಿರುವ ಕೇಸಿಂಗ್‌ ಪೈಪ್‌ ಆಳವಡಿಸಿಕೊಳ್ಳಬೇಕು. ಇದಕ್ಕೆ ನೈಲನ್‌ ಮೆಷ್‌ ಮರಳು ಹೊದಿಕೆಯ ಮೂರು ಫಿಲ್ಟರ್‌ಗಳನ್ನು ಆಳವಡಿಸಬೇಕು. 5 ಆಡಿ ಎತ್ತರದಷ್ಟು ದಪ್ಪ ಕಲ್ಲು, 40 ಎಂಎಂ ಜಲ್ಲಿಕಲ್ಲುನ್ನು ಒಂದು ಆಡಿ ಎತ್ತರಕ್ಕೆ ತುಂಬಬೇಕು. ಇದರ ಮೇಲ್ಬಾಗಕ್ಕೆ 20 ಎಂಎಂ ಜಲ್ಲಿಕಲ್ಲನ್ನು 1 ಆಡಿಗಳಷ್ಟು ತುಂಬಬೇಕು. ಮೇಲ್ಬಾಗದಲ್ಲಿ ಗೊಜ್ಜುಕಲ್ಲು ತುಂಬಬೇಕು. ಅನಂತರ ಮಳೆ ನೀರನ್ನು ನೇರವಾಗಿ ಇಂಗುಗುಂಡಿಗೆ ತುಂಬಿಸಬಹುದು. ಹೀಗೆ ಮಾಡುವುದರಿಂದ ಕೊಳವೆ ಬಾವಿ ಸುತ್ತಲೂ 1 ಕಿ.ಮೀ ವ್ಯಾಪ್ತಿಯ ಅಂತರ್ಜಲ ಮಟ್ಟ ವೃದ್ಧಿಯಾಗುತ್ತದೆ. ಇದರಲ್ಲಿ 15 ಪ್ರಕಾರದ ಮಾದರಿಗಳಿವೆ. 20ರಿಂದ 40 ಸಾವಿರ ರೂ. ವೆಚ್ಚವಾಗಲಿದೆ.

ತಾಲೂಕಿನಲ್ಲಿ ಅಂತರ್ಜಲ ಮಟ್ಟ ಕುಸಿದು ಕೊಳವೆ ಬಾವಿಗಳಲ್ಲಿ ನೀರಿಲ್ಲದೆ ಬತ್ತಿ ಹೋಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ತಾಲೂಕಿನಲ್ಲಿ ನೀರು ಇಂಗಿಸುವ ಪದ್ಧತಿಯನ್ನು ಜಾರಿಗೊಳಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಅಂತರ್ಜಲ ಮಟ್ಟ ಸಂಪೂರ್ಣ ಕುಸಿಯುವುದರಲ್ಲಿ ಅನುಮಾನವಿಲ್ಲ.

● ಚೇತನ್‌ ಪ್ರಸಾದ್‌

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.