ಜಮೀನಿನ ಪಹಣಿ ಪತ್ರದಲ್ಲಿ ಬೆಳೆ ನಮೂದಿಸಲು ರೈತರ ಪರದಾಟ!

ಬೆಳೆ ಸಾಲ ಪಡೆಯಲು ಪಹಣಿಯಲ್ಲಿ ಬೆಳೆ ದಾಖಲೆ ಕಡ್ಡಾಯ

Team Udayavani, May 15, 2019, 5:46 PM IST

15-May-35

ಶೃಂಗೇರಿ: ತಾಲೂಕು ಕಚೇರಿಯಲ್ಲಿ ಪಹಣಿಯಲ್ಲಿ ಬೆಳೆ ದೃಢೀಕರಣಕ್ಕಾಗಿ ರೈತರು ಸಾಲುಗಟ್ಟಿ ನಿಂತಿರುವುದು.

ಶೃಂಗೇರಿ: ಜಮೀನಿನ ಪಹಣಿಯ ಬೆಳೆ ಕಾಲಂನಲ್ಲಿ ಬೆಳೆಯ ಬಗ್ಗೆ ಮಾಹಿತಿ ಇಲ್ಲದೆ, ಬೆಳೆ ದೃಢೀಕರಣಕ್ಕಾಗಿ ತಾಲೂಕಿನ ರೈತರು ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಪಹಣಿಯಲ್ಲಿ ಬೆಳೆ ಮಾಹಿತಿ ದಾಖಲಿಸುವ ಸಮಸ್ಯೆ ನಿನ್ನೆ-ಮೊನ್ನೆಯದಲ್ಲ, ಕಳೆದ 2 ರಿಂದ 3 ವರ್ಷಗಳಿಂದಲೂ ಇದೆ. ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ರೈತರು ಸಹಕಾರ ಸಂಸ್ಥೆ, ವಾಣಿಜ್ಯ ಬ್ಯಾಂಕ್‌ಗಳಲ್ಲಿ ಬೆಳೆ ಸಾಲ ಪಡೆಯುವ ಉದ್ದೇಶಕ್ಕಾಗಿ ಜಮೀನಿನ ಪ‌ಹಣಿ ಮತ್ತು ಪಹಣಿಯಲ್ಲಿ ಬೆಳೆ ಮಾಹಿತಿ ಕಡ್ಡಾಯವಾಗಿದೆ. ಆದರೆ ಪ‌ಹಣಿಗಾಗಿ ರೈತರು ತಾಲೂಕು ಕಚೇರಿಯಲ್ಲಿ ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ, ಪಹಣಿಯ ಬೆಳೆ ಕಾಲಂನಲ್ಲಿ ಬೆಳೆ ಬಗ್ಗೆ ಮಾಹಿತಿ ಇಲ್ಲದಿರ‌ುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಬಯಲುಸೀಮೆ ಪ್ರದೇಶದಲ್ಲಿ ಬೆಳೆಯುವ ಭತ್ತ, ಶುಂಠಿ ಇವುಗಳೆಲ್ಲ ವಾರ್ಷಿಕ ಬೆಳೆಗಳು. ಪ್ರತಿವರ್ಷವೂ ಪಹಣಿಯಲ್ಲಿ ಬದಲಾವಣೆಯಾಗುವುದು ಸಹಜ. ಆದರೆ ಮಲೆನಾಡಿನ ಪ್ರಮುಖ ಬೆಳೆಯಾದ ಅಡಕೆ ತೋಟ, ತೆಂಗು ಇತ್ಯಾದಿ ಬೆಳೆಗಳು ಪ‌ಹಣಿಯ ಬೆಳೆಯ ಕಾಲಂ ಇರಬೇಕು. ಆದರೆ ಬೆಳೆ ಕಾಲಂನಲ್ಲಿ ಶೂನ್ಯವಾಗಿ ಬರೀ ಬಿಳಿ ಹಾಳೆ ಬರುತ್ತದೆ. ಬೆಳೆ ಮಾಹಿತಿ ಇಲ್ಲದ ಪ‌ಹಣಿಯನ್ನು ಯಾವುದಾದರೂ ಸಹಕಾರ ಸಂಘ ಅಥವಾ ವಾಣಿಜ್ಯ ಬ್ಯಾಂಕ್‌ಗಳಿಗೆ ನೀಡಿದರೆ ಕವಡೆ ಕಾಸಿನ ಬೆಲೆ ಇಲ್ಲದಾಗಿದೆ. ಬೆಳೆಯಿಲ್ಲದ ಪ‌ಹಣಿ ಮೇಲೆ ಸಾಲ ನೀಡಲಾಗದು ಎಂಬ ಸಿದ್ಧ ಉತ್ತರ ಬ್ಯಾಂಕ್‌ನಿಂದ ಬರುತ್ತದೆ. ಕಡ್ಡಾಯ ಬೆಳೆಯ ದೃಢೀಕರಣಕ್ಕಾಗಿ ಮತ್ತೆ ಗ್ರಾಮ ಲೆಕ್ಕಿಗರನ್ನು ಹುಡುಕಿಕೊಂಡು ಹೊರಡಬೇಕಿದೆ.

ಪ‌ಹಣಿಯಲ್ಲಿ ಬೆಳೆಯಿಲ್ಲದೆ ಪರದಾಡುವಂತಾಗಿದ್ದು, ದೃಢೀಕರಣ ಇಲ್ಲದ ಪಹಣಿ ಸರಿಪಡಿಸುವುದಕ್ಕೆ ನೂರಾರು ರೂ. ಖರ್ಚು ಮತ್ತು ಸಮಯ ವ್ಯರ್ಥವಾಗುತ್ತಿದೆ. ಇದರೊಂದಿಗೆ ಮತ್ತೂಂದು ಸಮಸ್ಯೆ ಇದೆ. 20 ಗುಂಟೆ ಬೆಳೆಯುವ ಅಡಕೆ ತೋಟದ ಪ್ರದೇಶದಲ್ಲಿ ಕಾಳು ಮೆಣಸು, ಕಾಫಿ ಬೆಳೆಯುತ್ತಿದ್ದರೂ ಬೆಳೆ ಕಾಲಂನಲ್ಲಿ 3 ಗುಂಟೆ ಎಂದು ನಮೂದಾಗಿದೆ. ಇದು ಪ್ರತಿವರ್ಷವೂ ರೈತರಿಗೆ ಗೋಳು ತಪ್ಪಿದ್ದಲ್ಲ. ಈ ರೀತಿ ಪಡೆದ ದೃಢೀಕರಣದ ಪಹಣಿಯ ಆಯಸ್ಸು ಕೂಡ ಕೇವಲ ಆರು ತಿಂಗಳು ಮಾತ್ರ. ಇದಕ್ಕೆಲ್ಲ ಸರ್ಕಾರ ಶಾಶ್ವತ ಪರಿಹಾರ ಕಂಡು ಹಿಡಿಯಬೇಕು.
•ಯಡದಳ್ಳಿ ಪ್ರಕಾಶ್‌ ಹೆಗ್ಡೆ, ಮಸಿಗೆ ಸುರೇಶ್‌, ಹಂಚಲಿ ಕೃಷ್ಣಮೂರ್ತಿರಾವ್‌, ಬೆಳಂದೂರು ದೇವೆಂದ್ರಗೌಡರು.

ಟಾಪ್ ನ್ಯೂಸ್

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.