ಖಂಡಿಗೆ: ಮೀನು ಹಿಡಿಯುವ ಜಾತ್ರೆ


Team Udayavani, May 16, 2019, 6:00 AM IST

1505PBE1

ಖಂಡಿಗೆ ಶ್ರೀ ಧರ್ಮರಸು ಉಳ್ಳಾಯ ದೈವಸ್ಥಾನದ ಜಾತ್ರೆಯ ಅಂಗವಾಗಿ ಮೀನು ಹಿಡಿಯುವ ಜಾತ್ರೆ ನಡೆಯಿತು.

ಸುರತ್ಕಲ್‌: ಸುರತ್ಕಲ್‌ ಸಮೀಪದ ಖಂಡಿಗೆ ಶ್ರೀ ಧರ್ಮರಸು ಉಳ್ಳಾಯ ದೈವಸ್ಥಾನದ ಜಾತ್ರೆಯ ಅಂಗವಾಗಿ ಬುಧವಾರ ಮೀನು ಹಿಡಿಯುವ ಜಾತ್ರೆ ನಡೆಯಿತು.

ಬೆಳಗ್ಗೆ 7 ಗಂಟೆಯಿಂದಲೇ ವಿವಿಧ ಜಾತಿ ಪಂಗಡದ ಜನತೆ ನಂದಿನಿ ನದಿಯಲ್ಲಿ ಮೀನು ಹಿಡಿಯುವ ಕಾರ್ಯದಲ್ಲಿ ನಿರತರಾಗಿದ್ದರು. ಚೇಳಾçರು ಗ್ರಾಮದ ಖಂಡಿಗೆಯ ಇತಿಹಾಸ ಪ್ರಸಿದ್ಧ ಶ್ರೀ ಧರ್ಮರಸು ಕ್ಷೇತ್ರವು ಪಾವಂಜೆ ರಾಷ್ಟ್ರೀಯ ಹೆದ್ದಾರಿ ಸೇತುವೆ ಸಮೀಪ ನಂದಿನಿ ನದಿಯ ತಟದಲ್ಲಿದ್ದು, ದೈವಸ್ಥಾನದಲ್ಲಿ ವರ್ಷಾವಧಿ ಜಾತ್ರೆ ಮೇ ತಿಂಗಳಲ್ಲಿ ಬರುವ ವೃಷಭ ಸಂಕ್ರಮಣದಂದು ನಡೆಯುತ್ತದೆ. ಈ ನದಿಯಲ್ಲಿ ಮೀನು ಹಿಡಿಯುವ ಪದ್ಧತಿ ಹಿಂದಿನಿಂದಲೂ ಬೃಹತ್‌ ಮಟ್ಟದಲ್ಲಿ ನಡೆಯುತ್ತದೆ.

ತುಳುನಾಡಿನಲ್ಲಿ ಎರ್ಮಾಳು ಜೆಪ್ಪು ಖಂಡೇವು ಅಡೆಪು ನಾಣ್ಣುಡಿ ಜಾರಿಯಲ್ಲಿದೆ. ಉಡುಪಿ ಜಿಲ್ಲೆಯ ಎರ್ಮಾಳು ದೇಗುಲದಲ್ಲಿ ಜಾತ್ರೆ ಪ್ರಾರಂಭಗೊಳ್ಳುವ ಮೂಲಕ ಅವಿಭಜಿತ ದ.ಕ. ಉಡುಪಿ ಜಿಲ್ಲೆಯಲ್ಲಿ ಜಾತ್ರೆಗಳು ಪ್ರಾರಂಭಗೊಂಡು, ಖಂಡಿಗೆ ಶ್ರೀ ಧರ್ಮರಸು ಕ್ಷೇತ್ರದ ಜಾತ್ರೆಯೊಂದಿಗೆ ಎಲ್ಲ ಜಾತ್ರೆಗಳು ಮುಕ್ತಾ ಯವಾಗುತ್ತದೆ. ವೃಷಭ ಸಂಕ್ರಮಣದಂದು ಬೆಳಗ್ಗೆ 7ರ ಸುಮಾರಿಗೆ ದೈವಸ್ಥಾನದಲ್ಲಿ ಸಂಬಂಧ ಪಟ್ಟವರು ದೈವಕ್ಕೆ ಪ್ರಾಥನೆ ಸಲ್ಲಿಸಿ ನಂದಿನಿ ನದಿಯ ದಡಕ್ಕೆ ಆಗಮಿಸಿ ನದಿಗೆ ಪ್ರಸಾದ ಹಾಕಿ ಅದೇ ಸಂದರ್ಭ ಸುಡು ಮದ್ದು ಸಿಡಿಸಲಾಯಿತು. ತತ್‌ಕ್ಷಣ ಮೀನು ಹಿಡಿಯಲು ಬಂದ ಜನರು ನದಿಗೆ ಧುಮುಕಿ ಮೀನು ಹಿಡಿಯಲು ಆರಂಭಿಸಿದರು.


ದೈವದ ಪ್ರಸಾದ

ಮಧ್ಯಾಹ್ನದವರೆಗೂ ಮೀನು ಹಿಡಿದು, ಹಿಡಿದ ಮೀನನ್ನು ಮನೆಗೆ ತೆಗೆದು ಕೊಂಡು ಹೋಗಿ, ಸತ್ತವರಿಗೆ ಬಡಿಸುವ ಕ್ರಮ ಇಲ್ಲಿಯದು. ಇದು ಈಗಲೂ ಹೆಚ್ಚಿನ ಮನೆಗಳಲ್ಲಿ ಆಚರಿಸಿಕೊಂಡೂ ಬರುತ್ತಿದ್ದಾರೆ.

ಕೆಲವರು ವ್ಯಾಪಾರದ ದೃಷ್ಟಿಯಿಂದ ಇಲ್ಲಿ ಹಿಡಿದ ಮೀನನ್ನು ಅಲ್ಲಿಯೇ ಮಾರುವವರೂ ಇದ್ದಾರೆ. ವರ್ಷದಲ್ಲಿ ಒಂದು ದಿನ ಇಲ್ಲಿನ ಮೀನನ್ನು ಪದಾರ್ಥ ಮಾಡಿ ತಿನ್ನುವುದೇ ಇಲ್ಲಿನ ದೈವದ ಪ್ರಸಾದವೆಂದು ಭಕ್ತರು ನಂಬುವುದರಿಂದ ಜಾತ್ರೆಗೆ ವಿಶೇಷ ಪ್ರಾಮುಖ್ಯ ದೊರೆತಿದೆ. ಬೆಳಗ್ಗೆ ಮೀನು ಹಿಡಿಯುವ ಜಾತ್ರೆಯಾದರೆ ಕ್ಷೇತ್ರದಲ್ಲಿ ರಾತ್ರಿ ಧಾರ್ಮಿಕ ಕಾರ್ಯಕ್ರಮ ಬಳಿಕ ಧ್ವಜಾವರೋಹಣ ನೆರವೇರಿತು.

ಇಲ್ಲಿ ಮೀನು ಹಿಡಿಯಲು ಜಾತಿ, ಧರ್ಮದ ಬೇಧ ಮರೆತು ಹಿಂದೂ, ಮುಸ್ಲಿಂ, ಕ್ರೈಸ್ತರು ಪಾಲ್ಗೊಂಡರು. ಜಾತ್ರೆ ಸಂದರ್ಭ ವಿವಿಧ ಧಾರ್ಮಿಕ ಕಾರ್ಯಕ್ರಮ ಜರಗುತ್ತದೆ.

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.