ತೊಡಿಕಾನ: ಅಂಗನವಾಡಿ ಕಟ್ಟಡ ಕಾಮಗಾರಿ ಆಮೆಗತಿ


Team Udayavani, May 16, 2019, 6:20 AM IST

arantodu

ಅರಂತೋಡು: ಸುಳ್ಯ ತಾಲೂಕಿನ ತೊಡಿಕಾನ ಗ್ರಾಮದ ಶಾಲಾ ಬಳಿಯ ಅಂಗನವಾಡಿ ಕಟ್ಟಡ ಕಾಮಗಾರಿ ಸ್ಥಗಿತಗೊಂಡು ಮೂರು ವರ್ಷದ ಬಳಿಕ ಮತ್ತೆ ಕಾಮಗಾರಿ ಆರಂಭಗೊಂಡು ಮತ್ತೆ ನಿಧಾನಗತಿಯಲ್ಲಿ ಸಾಗುತ್ತಿದೆ.

2015ನೇ ಇಸವಿಯ ಜನವರಿ ತಿಂಗಳಿನಲ್ಲಿ ನೂತನ ಅಂಗನವಾಡಿ ಕಟ್ಟಡಕ್ಕೆ ಹಳೆಯ ಅಂಗವಾಡಿ ಕಟ್ಟಡದ ಪಕ್ಕದಲ್ಲಿಯೇ ಗುದ್ದಲಿ ಪೂಜೆ ನೆರವೇರಿಸಿ ಇಲಾಖೆ ಅನುದಾನ 4.18 ಲಕ್ಷ ರೂ. ಇಲಾಖೆ ಅನುದಾನದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಬಳಿಕ ಅನುದಾನದ ಕೊರತೆಯಿಂದ ಕಾಮಗಾರಿ ಸ್ಥಗಿತಗೊಂಡಿತ್ತು. ಬಳಿಕ ಸ್ಥಳೀಯ ಗ್ರಾ.ಪಂ. ವತಿಯಿಂದ 14ನೇ ಹಣಕಾಸು ಯೋಜನೆಯಲ್ಲಿ ಅನುದಾನ ಮೀಸಲಿರಿಸಿ ಕಾಮಗಾರಿ ಮತ್ತೆ ಕೈಗೆತ್ತಿಕೊಳ್ಳಲಾಗಿದೆ.

ಅಪೂರ್ಣ ಕಾಮಗಾರಿ
ಇದೀಗ ಸ್ಲಾಬ್‌ ಕೆಲಸ ಪೂರ್ಣಗೊಂಡು ಗೋಡೆಯ ಗಾರೆ ಕೆಲಸವನ್ನು ಮುಗಿಸಲಾಗಿದೆ. ಶೌಚಾಲಯದ ಕೆಲಸ ನಡೆಯುತ್ತಿದೆ. ಅಡುಗೆ ಕೊಠಡಿಯ ಕೆಲಸ, ಕಿಟಕಿ, ಬಾಗಿಲು ನಿರ್ಮಾಣ ಆಗಬೇಕು. ವಿದ್ಯುತ್‌ ಸಂಪರ್ಕಕ್ಕೆ ವೈರಿಂಗ್‌ ಕೆಲಸ ನಡೆದಿದೆ. ಕಟ್ಟಡದ ಛಾವಣಿ ಮಳೆಗಾಲದಲ್ಲಿ ಸೋರುತ್ತಿದೆ. ಒಳಗಿನ ಎರಡು ಕೊಣೆಗಳಿಗೆ ಟೈಲ್ಸ್‌ ಹಾಕಲು ಬಾಕಿ ಉಳಿದಿದೆ. ಬಣ್ಣ ಬಳಿಯುವುದು ಸಹಿತ ಇತರ ಕೆಲಸ ಬಾಕಿ ಉಳಿದುಕೊಂಡಿವೆ.

ಶಿಥಿಲಗೊಂಡ ಕಟ್ಟಡ
ತೊಡಿಕಾನ ಅಂಗನವಾಡಿ ಹಳೆಯ ಕಟ್ಟಡ ಶಿಥಿಲಗೊಂಡಿದ್ದು, ಇದರಲ್ಲಿಯೇ ಅಂಗನವಾಡಿಯ ಮಕ್ಕಳು ಕಾಲ ಕಳೆಯುವಂತಾಗಿದೆ. ಸದ್ಯದಲ್ಲೇ ಮತ್ತೆ ಮಳೆಗಾಲ ಪ್ರಾರಂಭವಾಗುವುದರಿಂದ ನೂತನ ಕಟ್ಟಡ ಕಾಮಗಾರಿ ಪೂರ್ಣ ಗೊಳ್ಳದಿದ್ದರೆ ಮಕ್ಕಳು ಈ ಮಳೆಗಾಲದಲ್ಲಿ ಹಳೆಯ ಕಟ್ಟಡದಲ್ಲಿ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಅಂಗನವಾಡಿಗೆ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಪಕ್ಕದ ಪ್ರಾಥಮಿಕ ಶಾಲೆಯ ನೀರನ್ನು ಬಳಸುತ್ತಿದ್ದು, ಪ್ರಾಥಮಿಕ ಶಾಲೆಗೆ ಪ್ರತಿ ತಿಂಗಳು ಬರುವ ವಿದ್ಯುತ್‌ ಬಿಲ್‌ನ ಮೂರನೇ ಒಂದು ಭಾಗವನ್ನು ಅಂಗವಾಡಿ ಮಕ್ಕಳ ಹೆತ್ತವರಿಂದ ಸಂಗ್ರಹಿಸಿ ಪಾವತಿಸಲಾಗುತ್ತಿದೆ.
ಜತೆಗೆ ಅಂಗನವಾಡಿಗೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಅಗತ್ಯವಾಗಿ ಕಾಡುತ್ತಿದೆ.

ಶೀಘ್ರ ಕೆಲಸ ಮುಗಿಸಲು ಸೂಚನೆ
ತೊಡಿಕಾನ ಅಂಗನವಾಡಿಗೆ ನಾವು ಗ್ರಾ.ಪಂ.ನ 14ನೇ ಹಣಕಾಸು ಯೋಜನೆಯಲ್ಲಿ ಹಣವನ್ನು ಮೀಸಲಿರಿಸಿ ಕಾಮಗಾರಿ ನಡೆಯುತ್ತಿದೆ. ಮುಂದಿನ ಕೆಲವು ದಿನಗಳಲ್ಲಿ ಮಳೆಗಾಲ ಪ್ರಾರಂಭವಾಗುವುದರಿಂದ ಗುತ್ತಿಗೆದಾರರಿಗೆ ತತ್‌ಕ್ಷಣ ಕಾಮಗಾರಿ ಮುಗಿಸಿ ಕೊಡುವಂತೆ ಸೂಚನೆ ನೀಡುತ್ತೇವೆ.
– ನೀಲಾವತಿ ಕೊಡಂಕೇರಿ, ಅಧ್ಯಕ್ಷರು, ಅರಂತೋಡು ಗ್ರಾ.ಪಂ.

ಟಾಪ್ ನ್ಯೂಸ್

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.