ರಾಜ್ಯದ ಸಾವಿರ ಗ್ರಾ.ಪಂ.ಗಳಲ್ಲಿ “ಸ್ವಚ್ಛಮೇವ ಜಯತೆ’

ಗ್ರಾಮೀಣ ಭಾಗದಲ್ಲಿ ಸ್ವಚ್ಛತೆ-ತ್ಯಾಜ್ಯ ವಿಲೇವಾರಿ ನಿರ್ವಹಣೆಗೆ ಒತ್ತು

Team Udayavani, May 16, 2019, 6:00 AM IST

Swachh-Bharat-Mission-Plan

ಮಂಗಳೂರು: ಕೇಂದ್ರದ ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯಡಿ ಜೂನ್‌ ತಿಂಗಳಿಡೀ ಗ್ರಾಮ ಮಟ್ಟದಲ್ಲಿ “ಸ್ವಚ್ಛ ಮೇವ ಜಯತೆ’ ಎಂಬ ವಿಶೇಷ ಆಂದೋಲನ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯ 230 ಗ್ರಾ.ಪಂ.ಗಳ 366 ಗ್ರಾಮಗಳಲ್ಲಿ ಹಾಗೂ ಉಡುಪಿ ಜಿಲ್ಲೆಯ 158 ಗ್ರಾ.ಪಂ.ಗಳ 225 ಗ್ರಾಮಗಳಲ್ಲಿ ಇದನ್ನು ಕೈಗೆತ್ತಿಕೊಳ್ಳಲಾಗುತ್ತದೆ.

ಗ್ರಾಮೀಣ ಪ್ರದೇಶಗಳಲ್ಲಿ ಸಂಪೂರ್ಣ ಸ್ವಚ್ಛತೆ ಕಾಪಾಡುವ ಉದ್ದೇಶದಿಂದ ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯಡಿ ಕೇಂದ್ರ ಸರಕಾರ ಆಯೋಜಿಸಲಿರುವ ಆಂದೋಲನವಿದು. ರಾಜ್ಯದ ಆಯ್ದ ಒಂದು ಸಾವಿರ ಗ್ರಾ.ಪಂ.ಗಳಲ್ಲಿ ನಡೆಯಲಿದೆ.

ವೈಯಕ್ತಿಕ ಗೃಹ ಶೌಚಾಲಯ, ಸಮುದಾಯ ಶೌಚಾಲಯಗಳ ಬಳಕೆ, ಶಾಲಾ-ಅಂಗನವಾಡಿ ಶೌಚಾಲಯಗಳ ಉಪಯೋಗಕ್ಕೆ ಜಾಗೃತಿ, ಗ್ರಾಮಗಳಲ್ಲಿ ಘನ ತ್ಯಾಜ್ಯ ವಿಲೇವಾರಿ, ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವುದು ಉದ್ದೇಶ. ಇದರ ಭಾಗವಾಗಿ ಗ್ರಾ.ಪಂ., ಪ್ರತೀ ಗ್ರಾಮಗಳಲ್ಲಿ ಗೋಡೆ ಬರಹ ಬರೆಯಲಾಗುತ್ತದೆ. ಬೀದಿ ನಾಟಕದ ಮೂಲಕ ಸ್ವಚ್ಛತೆಯ ಅರಿವು ಮೂಡಿಸಲಾಗುತ್ತದೆ. ಪ್ರಬಂಧ ಸ್ಪರ್ಧೆ, ಶ್ರಮದಾನ, ಜಾಥಾ, ಶೌಚಾಲಯ ಬಳಕೆ ಅಭಿಯಾನ, ವಿವಿಧ ಐಇಸಿ ಕಾರ್ಯಕ್ರಮ, ಬ್ಯಾನರ್‌ಗಳ ಮೂಲಕ ಜಾಗೃತಿ ಮೂಡಿಸಲಾಗುತ್ತದೆ.

ಒಂದು ತಿಂಗಳ ಅರಿವು ಕಾರ್ಯಕ್ರಮ
ಸ್ವಚ್ಛ ಭಾರತ್‌ ಮಿಷನ್‌ನಡಿಯಲ್ಲಿ ಜೂ. 1ರಿಂದ 30ರ ವರೆಗೆ ಜಿಲ್ಲೆ, ತಾಲೂಕು, ಗ್ರಾ.ಪಂ.ಗಳಲ್ಲಿ ತಿಂಗಳ ಕಾಲ “ಸ್ವಚ್ಛಮೇವ ಜಯತೆ’ ಆಂದೋಲನದಡಿ ಅರಿವು ಕಾರ್ಯ ಕ್ರಮ ನಡೆಯಲಿದೆ. ಮುಖ್ಯ ವಾಗಿ ಜಿ.ಪಂ., ತಾ.ಪಂ., ಗ್ರಾ.ಪಂ.ಗಳ ಶಾಲಾ ಅಂಗನವಾಡಿ ಕಟ್ಟಡ, ಪಂ. ಕಚೇರಿ, ಸಾರ್ವಜನಿಕ ಸ್ಥಳಗಳು, ಸಮುದಾಯ ಶೌಚಾಲಯ, ಜನ ನಿಬಿಡ ಪ್ರದೇಶಗಳ ಕಟ್ಟಡ, ಬಹಿರ್ದೆಸೆ ಸ್ಥಳಗಳಲ್ಲಿ, ಬಸ್‌ ನಿಲ್ದಾಣಗಳ ಸಮೀಪ ಮಲ ಸೂಕ್ತ ವಿಲೇವಾರಿ, ಘನ ತ್ಯಾಜ್ಯ ನಿರ್ವಹಣೆಯ ಬಗ್ಗೆ ಗೋಡೆ ಬರಹ ಬರೆಸಲಾಗುತ್ತದೆ. ಆಂದೋಲನದ ಮಾಹಿತಿಯಿರುವ ಪೋಸ್ಟರ್‌ಗಳನ್ನು ಗ್ರಾ.ಪಂ.ಗಳಿಗೆ ಹಂಚಲಾಗುತ್ತದೆ. ಆಂದೋಲನದ ಪ್ರಮುಖ ಉದ್ದೇಶಗಳನ್ನು ಕೆಎಸ್ಸಾ ರ್ಟಿಸಿ ಬಸ್‌ ನಿಲ್ದಾಣಗಳಲ್ಲಿ, ರಾಜ್ಯದ ಪ್ರಮುಖ ರೈಲು ನಿಲ್ದಾಣಗಳಲ್ಲಿ ದೃಶ್ಯ, ಶ್ರವ್ಯ ಮಾಧ್ಯಮದ ಮೂಲಕ ಜಾಹೀರು ಮಾಡಲಾಗುತ್ತದೆ. ಮಕ್ಕಳಿಂದ ಜಾಥಾ, ಸ್ವಚ್ಛತಾ ಪ್ರತಿಜ್ಞಾ ವಿಧಿ, ಸ್ವಚ್ಛತೆಗಾಗಿ ಶ್ರಮದಾನ, ಪ್ರಬಂಧ ಸ್ಪರ್ಧೆ, ಶೌಚಾಲಯ ಬಳಕೆ ಅಭಿಯಾನ, ವಿಶೇಷ ಕೈತೊಳೆಯುವ ಅಭಿಯಾನ, ವಿಶೇಷ ಗ್ರಾಮ ಸಭೆಗಳ ಆಯೋಜನೆಯೂ ಇದರ ಭಾಗವಾಗಿದೆ.

ಸ್ವಚ್ಛತೆಯ ಅರಿವು
ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯಡಿ ಸ್ವಚ್ಛ ಮೇವ ಜಯತೆ ಆಂದೋಲನವನ್ನು ದ.ಕ. ಜಿಲ್ಲೆಯ ಎಲ್ಲ ಗ್ರಾ.ಪಂ. ವ್ಯಾಪ್ತಿಯಲ್ಲಿ ಆಯೋಜಿಸಲಾಗುತ್ತದೆ. ಕಾರ್ಯಕ್ರಮದ ಮೂಲಕ ಸಾರ್ವಜನಿಕರಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲಾಗುತ್ತದೆ.
– ಡಾ| ಸೆಲ್ವಮಣಿ ಆರ್‌.,
ದ.ಕ. ಜಿ.ಪಂ. ಸಿಇಒ

ಗ್ರಾಮಕ್ಕೆ ಬರಲಿದೆ ಸ್ವಚ್ಛತಾ ರಥ
ಆಂದೋಲನದ ಮಹತ್ವವನ್ನು ಗ್ರಾಮೀಣ ಜನರಿಗೆ ತಿಳಿಸುವ ಉದ್ದೇಶದಿಂದ ಜೂ. 5ರಿಂದ ತಿಂಗಳ ಕಾಲ 2-3 ಸ್ವಚ್ಛತಾ ರಥಗಳು ಪ್ರತೀ ಜಿಲ್ಲೆಯಲ್ಲಿ ಸಂಚರಿಸಲಿವೆ.

-ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.