ಗ್ರಾಪಂ ಕಚೇರಿಗೆ ಬೀಗ-ಪ್ರತಿಭಟನೆ

ಎಚ್.ಕಡದಕಟ್ಟೆ ಯುಟಿಪಿ ಗ್ರಾಮಕ್ಕೆ ಶಾಶ್ವತ ನೀರು ಪೂರೈಕೆ ಯೋಜನೆಗೆ ಆಗ್ರಹ

Team Udayavani, May 16, 2019, 9:58 AM IST

16-May-2

ಹೊನ್ನಾಳಿ: ಸಮೀಪದ ಎಚ್.ಕಡದಕಟ್ಟೆ ಯುಟಿಪಿ ಗ್ರಾಮಸ್ಥರು ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸಬೇಕೆಂದು ಒತ್ತಾಯಿಸಿ ಗ್ರಾ.ಪಂ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

ಹೊನ್ನಾಳಿ: ಪಟ್ಟಣದಿಂದ ಕೇವಲ 3 ಕಿ.ಮೀ. ದೂರದ ತುಂಗಾ ಮೇಲ್ದಂಡೆ ಯೋಜನೆ ಬಳಿ ಇರುವ ಎಚ್.ಕಡದಕಟ್ಟೆ ಹ್ಯಾಂಡ್‌ ಪೋಸ್ಟ್‌ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಕಳೆದ ಎರಡು ತಿಂಗಳಿನಿಂದ ಸಮಸ್ಯೆ ಇದ್ದು, ಸಮಸ್ಯೆ ತೀವ್ರಗೊಂಡ ಪ್ರಯುಕ್ತ ಬುಧವಾರ ಗ್ರಾಮಸ್ಥರು ಗ್ರಾ.ಪಂ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

ಗ್ರಾಮದಲ್ಲಿನ ಎರಡು ಕೊಳವೆ ಬಾವಿಗಳ ನೀರು ಬತ್ತಿ ಹೋದ ಕಾರಣ ಗ್ರಾಪಂ ವತಿಯಿಂದ ಇತರೆಡೆಯ ಕೊಳವೆ ಬಾವಿಗಳಿಂದ ಟ್ಯಾಂಕರ್‌ ಮೂಲಕ ನೀರು ತಂದು ಸರಬರಾಜು ಮಾಡಲಾಗುತ್ತಿದೆ. ಟ್ಯಾಂಕರ್‌ ಮೂಲಕ ಸರಬರಾಜು ಮಾಡುವ ನೀರು ಸಾಕಾಗುವುದಿಲ್ಲ, ಸರಿಯಾದ ಸಮಯಕ್ಕೆ ನೀರು ಸರಬರಾಜು ಮಾಡುತ್ತಿಲ್ಲ. ಹಾಗೂ ಅಶುದ್ಧ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಪಂ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದಾಗ ಸ್ಥಳಕ್ಕೆ ಆಗಮಿಸಿದ ಪಿಡಿಒ ರವಿಕುಮಾರ್‌, ಸದ್ಯಕ್ಕೆ ನೀರು ಲಭ್ಯವಿರುವ ಕೊಳವೆ ಬಾವಿಯಿಂದ ಸಮರ್ಪಕವಾಗಿ ನೀರು ಸರಬರಾಜು ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಗ್ರಾಮಕ್ಕೆ ಪೈಪ್‌ಲೈನ್‌ ಅಳವಡಿಸಿ ಶಾಶ್ವತ ನೀರು ಸರಬರಾಜು ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿ ಪ್ರತಿಭಟನೆ ವಾಪಸ್‌ ಪಡೆಯಲು ಮನವಿ ಮಾಡಿದರು.

ಪಿಡಿಒ ಮನವಿಗೆ ಜಗ್ಗದ ಪ್ರತಿಭಟನಾಕಾರರು, ಗ್ರಾ.ಪಂ ಅಧ್ಯಕ್ಷರು ಹಾಗೂ ತಾ.ಪಂ ಇಒ ಸ್ಥಳಕ್ಕೆ ಬಂದು ನಮ್ಮ ಸಮಸ್ಯೆ ಕೇಳಿ, ಬೇಗನೆ ನೀರು ಸರಬರಾಜು ಮಾಡುವ ವ್ಯವಸ್ಥೆ ಮಾಡಿದರೆ ಮಾತ್ರ ಪ್ರತಿಭಟನೆ ವಾಪಸ್‌ ಪಡೆಯುವುದಾಗಿ ಸ್ಪಷ್ಟಪಡಿಸಿದರು.

ಎಚ್.ಕಡದಕಟ್ಟೆ ಹ್ಯಾಂಡ್‌ಪೋಸ್ಟ್‌ ಗ್ರಾಮದಲ್ಲಿ ಕೇವಲ ನೂರು ಮನೆಗಳಿದ್ದು ಗ್ರಾಮದಿಂದ ತುಂಗಭದ್ರಾ ನದಿ ಕೇವಲ 4 ಕಿ.ಮೀ. ದೂರದಲ್ಲಿ ಹರಿಯುತ್ತಿದೆ. ಆದರೂ ಗ್ರಾಮಕ್ಕೆ ಶಾಶ್ವತ ನೀರು ಸರಬರಾಜು ವ್ಯವಸ್ಥೆ ಮಾಡಿಲ್ಲ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹೇಗಿದ್ದಾರೆ ನೋಡಿ ಸ್ವಾಮಿ ಎಂದು ಗ್ರಾಮದ ಮುಖಂಡರಾದ ಬಸವರಾಜಪ್ಪ, ಚನ್ನೇಶ್‌ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಒಂದು ದಿನಕ್ಕೆ ಇಡೀ ಗ್ರಾಮಕ್ಕೆ ಕೇವಲ 3 ಟ್ಯಾಂಕರ್‌ ನೀರು ಕೊಡುತ್ತಿದ್ದಾರೆ. ಒಂದು ಮನೆಗೆ ಒಂದು ಡ್ರಮ್‌ ನೀರು ಮಾತ್ರ ದೊರೆಯುತ್ತದೆ. ಅದರಲ್ಲೇ ಅಡುಗೆ, ಪಾತ್ರೆ ಹಾಗೂ ಬಟ್ಟೆ ತೊಳೆಯಲು ಸಾಧ್ಯವೇ ಎಂದು ಬಸಮ್ಮ, ಶಾಂತಮ್ಮ, ಆಂಜನೇಯ, ಲೋಕೇಶ್‌ ಪ್ರಶ್ನಿಸಿದರು.

ಗ್ರಾಮದವರೆಲ್ಲಾ ಕೂಲಿ ಮಾಡಲು ಹೋದಾಗ ಮಧ್ಯಾಹ್ನ ನೀರಿನ ಟ್ಯಾಂಕರ್‌ ಬರುತ್ತದೆ. ಆ ಸಮಯದಲ್ಲಿ ನೀರನ್ನು ಹೇಗೆ ಸಂಗ್ರಹಿಸಿಟ್ಟುಕೊಳ್ಳಬೇಕು. ಟ್ಯಾಂಕರ್‌ ನೀರು ಕುಡಿದು ಹಲವು ಜನರು ಅನಾರೋಗ್ಯ ಪೀಡಿತರಾಗಿದ್ದಾರೆ ಎಂದು ರೇಣುಕಪ್ಪ ನೊಂದು ನುಡಿದರು.

ಸಂಜೆ 4.30ರ ಸುಮಾರಿಗೆ ಸ್ಥಳಕ್ಕೆ ಆಗಮಿಸಿದ ತಾ.ಪಂ ಇಒ ರಾಘವೇಂದ್ರ ಸಮಸ್ಯೆ ಆಲಿಸಿ, ಸದ್ಯಕ್ಕೆ ಬೇಡಿಕೆಗನುಗುಣವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಟ್ಯಾಂಕರ್‌ ನೀರು ಪೂರೈಸಲಾಗುವುದು. ಮುಂದಿನ ನಾಲ್ಕು ದಿನಗಳಲ್ಲಿ ಹೊಸದಾಗಿ ಕೊಳವೆ ಬಾವಿ ತೋಡಿಸಿ ನೀರು ಸರಬರಾಜು ಮಾಡಲಾಗುವುದು. ಗ್ರಾಮದ ಸುತ್ತಮುತ್ತ ಇರುವ ತೋಟ ಹಾಗೂ ಇತರ ಕೊಳವೆ ಬಾವಿಗಳ ಮಾಲೀಕರು ನೀರು ಕೊಟ್ಟರೆ ತಿಂಗಳಿಗೆ ರೂ.10 ಸಾವಿರ ಪಾವತಿಸಿ ಜನರಿಗೆ ನೀರು ಸರಬರಾಜು ಮಾಡಲಾಗುವುದು ಎಂದು ಹೇಳಿದರು. ನಂತರ ಪ್ರತಿಭಟನಾಕಾರರು ತಮ್ಮ ಪ್ರತಿಭಟನೆಯನ್ನು ವಾಪಸ್‌ ಪಡೆದರು. ಗ್ರಾ.ಪಂ ಅಧ್ಯಕ್ಷೆ ಲಕ್ಷ್ಮಮ್ಮ, ಸದಸ್ಯ ಮಾದಪ್ಪ ಇದ್ದರು.

ಟಾಪ್ ನ್ಯೂಸ್

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.