ಗುಮ್ಮಟ ನಗರಿಗೆ ಹಣ್ಣುಗಳ ಲಗ್ಗೆ

ಮಹಾರಾಷ್ಟ್ರ ಕಲ್ಲಂಗಡಿ-ಉತ್ತರ ಕನ್ನಡದ ಪೈನಾಫ‌ಲ್ ಗೆ ಮನಸೋತ ಬಸವನಾಡಿನ ಜನ

Team Udayavani, May 16, 2019, 10:42 AM IST

16-May-7

ವಿಜಯಪುರ: ಐತಿಹಾಸಿಕ ಬಸವನಾಡಿನಲ್ಲಿ ಬೇಸಿಗೆಯ ಬಿಸಿಲಿನ ಧಗೆ ಹಿನ್ನೆಲೆ ಹಣ್ಣುಗಳ ಪಾನೀಯಗಳಿಗೆ ಬೇಡಿಕೆ ಹೆಚ್ಚಿರುವ ಕಾರಣ ಹಣ್ಣು ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆ ಹೆಚ್ಚಿದೆ. ಕಲ್ಲಂಗಡಿ, ಪೈನಾಫ‌ಲ್ ಹಣ್ಣುಗಳಿಗೆ ಎಲ್ಲಿಲ್ಲದ ಬೇಡಿಕೆ ಹೆಚ್ಚಿದ್ದು ಮಳೆ ಇಲ್ಲದೇ ಬರ ಆವರಿಸಿದ್ದರೂ ರೈತರು ಕಷ್ಟಪಟ್ಟು ಬೆಳೆದಿರುವ ಹಣ್ಣುಗಳು ವಿಜಯಪುರ ಹಣ್ಣಿನ ಮಾರುಕಟ್ಟೆಗೆ ಲಗ್ಗೆ ಇಡುತ್ತಿದೆ.

ಬೇಸಿಗೆ ಹಂಗಾಮಿನಲ್ಲಿ ವಿವಿಧ ಹಣ್ಣುಗಳಿಗೆ ಸುಗ್ಗಿಯ ಕಾಲ. ಅದರಲ್ಲೂ ತಂಪು ಪಾನೀಯ ತಯಾರಿಸುವ ವ್ಯಾಪಾರಿಗಳಿಂದ ಕಲ್ಲಂಗಡಿ, ಪೈನಾಫ‌ಲ್ನಂಥ ಹಣ್ಣುಗಳಿಗೆ ಎಲ್ಲಿಲ್ಲದ ಬೇಡಿಕೆ ಹಾಗೂ ಬೆಲೆ ಇರುತ್ತದೆ. ಕಳೆದ ಮೂರು ವರ್ಷಗಳಲ್ಲಿ ಈ ಬಾರಿಯ ಹಿಂಗಾರಿನಲ್ಲಿ ಉತ್ತಮ ಮಳೆ ಇಲ್ಲದೇ ರೈತರ ಎಲ್ಲ ಬೆಳೆಗಳು ಕೈ ಕೊಟ್ಟಿದ್ದು, ರೈತರು ಅರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ. ಮತ್ತೂಂದೆಡೆ ತಿಂಗಳ ಹಿಂದೆ ಸುರಿದ ಆಲಿಕಲ್ಲು ಮಳೆ ಕಷ್ಟ ಪಟ್ಟು ಬೆಳೆದ ಕಲ್ಲಂಗಡಿ ಹಣ್ಣನ್ನು ಹಾನಿ ಮಾಡಿದ್ದು, ರೈತರು ಕೈ ಸುಟ್ಟುಕೊಳ್ಳುವಂತೆ ಮಾಡಿದೆ. ಜಿಲ್ಲೆಯಲ್ಲಿ ಆಲಿಕಲ್ಲು ಮಳೆಗೆ ಸುಮಾರು 100 ಎಕರೆಗೂ ಹೆಚ್ಚಿನ ಪ್ರದೇಶದಲ್ಲಿ ಬೆಳೆದಿದ್ದ ಕಲ್ಲಂಗಡಿ ಹಣ್ಣು ಹಾನಿಯಾಗಿದೆ.

ವಿಜಯಪುರ ತರಕಾರಿ ಹಾಗೂ ಹಣ್ಣುಗಳ ಮಾರುಕಟ್ಟೆಗೆ ಜಿಲ್ಲೆಯ ಸಿಂದಗಿ, ಅಂತರಂಗಿ, ಜುಮನಾಳ, ನೆರೆಯ ಕಲಬುರಗಿ ಜಿಲ್ಲೆಯ ಅಫ‌್ಜಲಪುರ, ಚಳ್ಳಗೇರ, ಕೊಕಟನೂರು ಮಾತ್ರವಲ್ಲದೇ ಮಹಾರಾಷ್ಟ್ರದ ಜತ್ತ, ಸೇಗಾಂ ಸೇರಿದಂತೆ ವಿವಿಧ ಭಾಗಗಳಿಂದ ಕಲ್ಲಂಗಡಿ ಹಣ್ಣು ವಿಜಯಪುರ ಮಾರುಕಟ್ಟೆಗೆ ಬರುತ್ತವೆ. ಜನೆವರಿ ತಿಂಗಳಿಂದ ಜುಲೈ ಅಂತ್ಯದವರೆಗೆ ಕಲ್ಲಂಗಡಿ ಹಣ್ಣಿನ ವಹಿವಾಟು ನಡೆಯುತ್ತದೆ.

ಸಗಟು ಮಾರುಕಟ್ಟೆಯಲ್ಲಿ ಗಾತ್ರಗಳಿಗೆ ತಕ್ಕಂತೆ ಬೆಲೆ ನಿಗದಿ ಮಾಡಲಾಗುತ್ತದೆ. ಪ್ರತಿ 50 ಹಣ್ಣುಗಳ ಗೂಡು ಮಾಡಿ ಗಾತ್ರಕ್ಕೆ ತಕ್ಕಂತೆ 300 ರೂ. 800 ರೂ.ವರೆಗೆ ಬೆಲೆ ಇದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಹಣ್ಣಿನ ಇಳುವರಿ ಕಡಿಮೆ ಇರುವ ಕಾರಣ ಬೆಲೆಯಲ್ಲಿ 1-2 ನೂರು ರೂ. ಬೆಲೆ ಏರಿಕೆಯಾಗಿದೆ.

ವಿಜಯಪುರ ಮಾರುಕಟ್ಟೆಯಲ್ಲಿ ಕಲ್ಲಂಗಡಿ ಮಾರುಕಟ್ಟೆಯಿಂದ ಸುಮಾರು ನೂರಾರು ವ್ಯಾಪಾರಿಗಳಿದ್ದು, ಇಲ್ಲಿ ಕೊಳ್ಳುವ ಕಲ್ಲಂಗಡಿ ಹಣ್ಣುಗಳನ್ನು ಪ್ರತಿ ಹಣ್ಣಿಗೆ 1-2 ರೂ. ಲಾಭದ ಲೆಕ್ಕದಲ್ಲಿ ಚಿಲ್ಲರೆ ಮಾರುಕಟ್ಟೆಯ ವ್ಯಾಪಾರಿಗಳಿಗೆ ಮಾರುತ್ತಾರೆ.

ಇನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಭಾಗದಿಂದ ಜಿಲ್ಲೆಗೆ ಪೈನಾಫ‌ಲ್ ಹಣ್ಣುಗಳು ಆವಕ ಆಗುತ್ತದೆ. ವಾರದಲ್ಲಿ ಕನಿಷ್ಠ ಎರಡು ಬಾರಿ ಇಲ್ಲಿಗೆ 10 ಟನ್‌ ಪೈನಾಫ‌ಲ್ ಹಣ್ಣಿನ ಲೋಡ್‌ ಬರುತ್ತವೆ. ಕ್ವಿಂಟಲ್ ಲೆಕ್ಕದಲ್ಲಿ ಹಣ್ಣುಗಳನ್ನು ಖರೀದಿ ಮಾಡಲಾಗುತ್ತಿದ್ದು, ಇದೇ ಲೆಕ್ಕದಲ್ಲಿ ವ್ಯಾಪಾರಿಗಳಿಗೆ ಮಾರಾಟ ಮಾಡಲಾಗುತ್ತದೆ. ಬೇಸಿಗೆ ಹಂಗಾಮಿನಲ್ಲಿ ಪೈನಾಫ‌ಲ್ ಆವಕ ಹಾಗೂ ಬೆಲೆ ಹೆಚ್ಚಿರುತ್ತದೆ. ಬೇಸಿಗೆ ದಿನಗಳಲ್ಲಿ ಬೆಲೆ ಕ್ವಿಂಟಲ್ಗೆ 2,200 ರೂ. ಇದ್ದರೆ, ಇತರೆ ದಿನಗಳಲ್ಲಿ 1500 ರೂ. ಇರುತ್ತದೆ. ಬರ ಹಾಗೂ ಬೇಸಿಗೆ ಹೆಚ್ಚಿದ್ದರೂ ಪೈನಾಫ‌ಲ್ ವಹಿವಾಟಿನಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ ಎಂಬುದು ವ್ಯಾಪಾರಿಗಳ ಅನಿಸಿಕೆ.

ಒಂದೆಡೆ ಮಳೆಯ ಕೊರತೆ ಮತ್ತೂಂದೆಡೆ ಅಲ್ಲಲ್ಲಿ ಕೊಳವೆ ಬಾವಿ, ಕೆರೆ ನೀರಿನಿಂದ ಬೆಳೆದ ಕಲ್ಲಂಗಡಿ ಬೆಳೆ ಈಚೆಗೆ ಸುರಿದ ಆಲಿಕಲ್ಲು ಮಳೆಯಿಂದ ಹಾಳಾಗಿದೆ. ಇದರಿಂದ ನಿರೀಕ್ಷಿತ ಪ್ರಮಾಣ ಹಾಗೂ ನಿರೀಕ್ಷಿತ ಗುಣಮಟ್ಟದ ಹಣ್ಣು ಸಿಗುತ್ತಿಲ್ಲ. ಬೆಳೆ ಕಡಿಮೆ ಇರುವ ಕಾರಣ ಬೆಲೆಯೂ ಏರಿಕೆಯಾಗಿದೆ.
ಮುಸ್ತಾಕಹ್ಮದ್‌ ಬಿಳಗಿ,
ಕಲ್ಲಂಗಡಿ ಸಗಟು ವ್ಯಾಪಾರಿ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಭಾಗದಿಂದ ವಾರಕ್ಕೆ ಎರಡು ಬಾರಿ ಲ್ಲಿಗೆ ಪೈನಾಫ‌ಲ್ ಹಣ್ಣು ಸಣ್ಣ ಲಾರಿಗಳ ಲೋಡ್‌ ಬರುತ್ತವೆ. ಕೆ.ಜಿ. ಲೆಕ್ಕದಲ್ಲಿ ಮಾರಾಟ ಮಾಡುತ್ತೇವೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಮಾರುಕಟ್ಟೆಯಲ್ಲಿ ಬೆಲೆ ಹೆಚ್ಚಿದೆ.
ಇಸಾಕ್‌ ಸೋಲಾಪುರಕರ,
ಪೈನಾಫ‌ಲ್ ಮಧ್ಯವರ್ತಿ

50 ಹಣ್ಣಿನ ಗುಂಪು ಮಾಡಿ ಹಣ್ಣುಗಳನ್ನು ಸಗಟು ಮಾರುಕಟ್ಟೆಯಲ್ಲಿ ಕೊಂಡು, ಮಾರುಕಟ್ಟೆಯಲ್ಲಿ ಹಣ್ಣಿನ ವ್ಯಾಪಾರಿಗಳಿಗೆ ಮಾರುತ್ತೇನೆ. ಮಾರುಕಟ್ಟೆ ಶುಲ್ಕ, ಸಾರಿಗೆ ವೆಚ್ಚ, ಹಮಾಲಿ, ಕೂಲಿ ಅಂತೆಲ್ಲ ಕಳೆದರೆ ದಿನಕ್ಕೆ 500 ರೂ. ಲಾಭ ಇರುತ್ತದೆ. ಇದರಲ್ಲೇ ಕಳೆದ ಹಲವು ವರ್ಷಗಳಿಂದ ಜೀವನ ರೂಪಿಸಿಕೊಂಡಿದ್ದೇನೆ.
•ಸಂತೋಷ ಆಥಣಿ,
ಹಣ್ಣಿನ ವ್ಯಾಪಾರಿ

ಜಿ.ಎಸ್‌.ಕಮತರ

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.