ನನಗೆ ಜಗಳ ಇಷ್ಟವಿಲ್ಲ,ಐತಿಹಾಸಿಕ ಸತ್ಯ ಹೇಳಿದ್ದೇನೆ; ಕಮಲಹಾಸನ್
ಮಾಧ್ಯಮಗಳ ವಿರುದ್ಧವೂ ಆಕ್ರೋಶ ಹೊರ ಹಾಕಿದ ನಟ
Team Udayavani, May 16, 2019, 11:09 AM IST
ಚೆನ್ನೈ: ನಾನು ಐತಿಹಾಸಿಕ ಸತ್ಯವನ್ನೇ ಹೇಳಿದ್ದೇನೆ ಹೊರತು ಯಾರೊಂದಿಗೂ ಜಗಳವಾಡಲು ನಾನು ಆ ರೀತಿ ಹೇಳಿಲ್ಲ ಎಂದು ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕ ಕಮಲಹಾಸನ್ ಅವರು ಹೇಳಿಕೆ ನೀಡಿದ್ದಾರೆ.
ಚುನಾವಣಾ ಪ್ರಚಾರದ ವೇಳೆ ‘ಗಾಂಧೀಜಿಯನ್ನು ಹತ್ಯೆಗೈದಿದ್ದ ನಾಥುರಾಮ್ ಗೋಡ್ಸೆ ಮೊದಲ ಹಿಂದು ಉಗ್ರ’ ಎಂಬ ಹೇಳಿಕೆ ವಿವಾದದ ಸ್ವರೂಪ ಪಡೆದುಕೊಂಡ ವಿಚಾರಕ್ಕೆ ಸಂಬಂಧಿಸಿ ಈ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳ ವಿರುದ್ಧವೂ ಆಕ್ರೋಶ ಹೊರ ಹಾಕಿದ ಕಮಲ ಹಾಸನ್ ‘ನನ್ನ ಹೇಳಿಕೆಯನ್ನು ವಿಚಾರದ ಹೊರಗೆ ಕೊಂಡೊಯ್ಯಲಾಗಿದೆ’ ಎಂದಿದ್ದಾರೆ.
‘ನಾನೇನು ಹೇಳಿದ್ದೇನೋ ಅದರ ತಲೆ ಮತ್ತು ಬಾಲವನ್ನು ಕತ್ತರಿಸಿ ಬರೀ ಒಂದು ಭಾಗವನ್ನು ಮಾತ್ರ ಬಿತ್ತರಿಸಲಾಗಿದೆ. ನನ್ನ ಹೇಳಿಕೆಯನ್ನು ತಿರುಚಿ ಆಕ್ರೋಶ ಹೊರಹೊಮ್ಮುವಂತೆ ಮಾಡಲಾಗಿದೆ. ಯಾವೆಲ್ಲಾ ಐಪಿಸಿ ಸೆಕ್ಷನ್ಗಳಿವೆ ಅವುಗಳೆಲ್ಲವನ್ನೂ ನನ್ನ ಮೇಲೆ ಹಾಕಲಾಗಿದೆ. ಮಾಧ್ಯಮಗಳೂ ಕೂಡ ಇದಕ್ಕೆ ಸಮಾನ ಹೊಣೆಯಾಗುತ್ತಾರೆ’ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಮಕ್ಕಳ್ ನೀಧಿ ಮಯ್ಯಂ(ಜನರ ನ್ಯಾಯ ಕೇಂದ್ರ)ಜಾತಿ, ವರ್ಣ, ಧರ್ಮವನ್ನು ಪರಿಗಣಿಸದೆ ಎಲ್ಲಾ ವರ್ಗದವರಿಗೂ ಸಮಾನ ಗೌರವ ನೀಡುವುದೇ ನಮ್ಮ ಪಕ್ಷದ ಗುರಿಯಾಗಿದೆ ಎಂದರು.
ನನ್ನ ಮನೆಯಲ್ಲೂ ಎಲ್ಲರೂ ದೇವರನ್ನು ಪ್ರಾರ್ಥಿಸುತ್ತಾರೆ. ನನ್ನ ಮಗಳು ಕೂಡ ದೈವ ಭಕ್ತೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’