ಮಲ್ಲೇಶ್ವರಸ್ವಾಮಿ-ವೀರಭದ್ರೇಶ್ವರಸ್ವಾಮಿ ಕೆಂಡೋತ್ಸವ


Team Udayavani, May 16, 2019, 5:29 PM IST

16-May-35

ಚಿಕ್ಕಮಗಳೂರು: ಮೆಣಸಿನ ಮಲ್ಲೇದೇವರಹಳ್ಳಿಯಲ್ಲಿ ಗ್ರಾಮದೇವತೆ ಶ್ರೀಮಲ್ಲೇಶ್ವರಸ್ವಾಮಿ ಮತ್ತು ಶ್ರೀವೀರಭದ್ರೇಶ್ವರ ಸ್ವಾಮಿಯವರ ಕೆಂಡೋತ್ಸವ ನಡೆಯಿತು.

ಚಿಕ್ಕಮಗಳೂರು: ತಾಲೂಕಿನ ಮೆಣಸಿನ ಮಲ್ಲೇದೇವರಹಳ್ಳಿಯಲ್ಲಿ ಗ್ರಾಮದೇವತೆ ಶ್ರೀಮಲ್ಲೇಶ್ವರಸ್ವಾಮಿ ಮತ್ತು ಶ್ರೀವೀರಭದ್ರೇಶ್ವರ ಸ್ವಾಮಿಯವರ ಕೆಂಡೋತ್ಸವ ಸಹಸ್ರಾರು ಭಕ್ತರ ನಡುವೆ ವೈಭವದಿಂದ ನಡೆಯಿತು.

ಉತ್ಸವದ ಪ್ರಯುಕ್ತ ಶ್ರೀಮಲ್ಲೇಶ್ವರಸ್ವಾಮಿ ಮತ್ತು ಶ್ರೀವೀರಭದ್ರೇಶ್ವರ ಸ್ವಾಮಿಗೆ ರುದ್ರಾಭಿಷೇಕ, ವಿಶೇಷ ಪೂಜೆ, ಅಲಂಕಾರ ಮಾಡಲಾಗಿತ್ತು. ಬೆಳಕು ಹರಿಯುತ್ತಿದ್ದಂತೆ ಗ್ರಾಮದ ಮಠದ ಮನೆ ಮುಂಭಾಗದಲ್ಲಿ ಸಾಲಂಕೃತಗೊಂಡು ಸಜ್ಜಾಗಿ ನಿಂತಿದ್ದ ಅಡ್ಡಪಲ್ಲಕ್ಕಿಯಲ್ಲಿ ಪಾರ್ವತಿ ಪರಮೇಶ್ವರ ಹಾಗೂ ಮಲ್ಲೇಶ್ವರ ಸ್ವಾಮಿಯ ಉತ್ಸವ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜಿಸಲಾಯಿತು.

ನಂತರ ಗ್ರಾಮೀಣ ವಾದ್ಯಗಳ ನಡುವೆ ಮಠದ ಅಯ್ಯ ಸಿದ್ದಲಿಂಗೇಶ್ವರಸ್ವಾಮಿ ಅವರ ನೇತೃತ್ವದಲ್ಲಿ ಅಡ್ಡಪಲ್ಲಕ್ಕಿಯನ್ನು ಚಿಲುಮೆ ಬಾವಿಯ ಬಳಿಗೆ ಕೊಂಡೊಯ್ದು ಗಂಗಾಪೂಜೆ ನೆರವೇರಿಸಲಾಯಿತು. ಬಳಿಕ ಮುಂದುವರೆದ ಮೆರವಣಿಗೆ ಇತಿಹಾಸ ಪ್ರಸಿದ್ಧ ಶ್ರೀಮಲ್ಲೇಶ್ವರಸ್ವಾಮಿ ದೇವಾಲಯವನ್ನು ತಲುಪಿತು.

ದೇವಾಲಯದ ಮುಂಭಾಗದಲ್ಲಿ ಹಾಕಲಾಗಿದ್ದ ಕೆಂಡದ ರಾಶಿಗೆ ಪೂಜೆ ಸಲ್ಲಿಸಿದ ನಂತರ ಮಠದ ಅಯ್ಯನವರು, ಕಳಸ ಹೊತ್ತ ಬಾಲಕಿ, ಮತ್ತು ಅಡ್ಡ ಪಲ್ಲಕ್ಕಿಯನ್ನು ಹೊತ್ತ ಭಕ್ತರು ಕ್ರಮವಾಗಿ ಕೆಂಡವನ್ನು ಹಾಯ್ದರು. ಬಳಿಕ ಅದನ್ನು ಹಿಂಬಾಲಿಸಿದ ನೂರಾರು ಭಕ್ತರು ಸಹ ಕೆಂಡ ತುಳಿದರು.

ಮಹಾಮಂಗಳಾರತಿ ನಂತರ ಸಾರ್ವಜನಿಕ ಅನ್ನಸಂತರ್ಪಣೆ ಜರುಗಿತು. ಮಧ್ಯಾಹ್ನ ಗ್ರಾಮದಲ್ಲಿ ದುರ್ಗಾದೇವಿ ಪೂಜೆ, ಪಲ್ಲಕ್ಕಿ ಉತ್ಸವ, ಸಂಜೆ ಪಾರ್ವತಿ ಪರಮೇಶ್ವರರ ಕಲ್ಯಾಣೋತ್ಸವ, ಓಕಳಿ ಉತ್ಸವ ನಡೆಸಲಾಯಿತು.

ಉತ್ಸವದ ಪ್ರಯುಕ್ತ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಸುತ್ತಮುತ್ತಲ ಗ್ರಾಮಗಳ ಸಹಸ್ರಾರು ಭಕ್ತರು ಉತ್ಸವದಲ್ಲಿ ಪಾಲ್ಗೊಂಡಿದ್ದರು.

ಗ್ರಾಮದ ಮುಖಂಡರಾದ ಎಂ.ಸಿ.ರುದ್ರಪ್ಪ, ಎಂ.ಉಮೇಶ್‌, ಪಂಚಾಕ್ಷರಿ, ಎಂ.ಬಿ.ಅಶೋಕ್‌ಕುಮಾರ್‌, ಚಂದ್ರಶೇಖರ್‌, ಭದ್ರಪ್ಪ, ಷಡಕ್ಷರಿ, ಚಂದ್ರಶೇಖರ್‌ ಗೇಟಿ, ಪ್ರಶಾಂತ್‌, ತೋಟಪ್ಪ, ರೇವಣ್ಣ, ವೀರಭದ್ರಪ್ಪ ಇನ್ನಿತರರಿದ್ದರು.

ಟಾಪ್ ನ್ಯೂಸ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.