ವಿಶ್ವಸಂಸ್ಥೆಯಲ್ಲಿ ದಿಯಾ ಝಲಕ್‌!


Team Udayavani, May 17, 2019, 6:02 AM IST

Bollywood-actress-Dia-Mirza

ಬಾಲಿವುಡ್‌ ನಾಯಕ ನಟರು, ನಾಯಕಿಯರು ಬೇರೆ ಬೇರೆ ಖಾಸಗಿ ಕಂಪೆನಿಗಳಿಗೆ, ಸಂಘ ಸಂಸ್ಥೆಗಳಿಗೆ, ವಾಣಿಜ್ಯ ಉದ್ದೇಶದ ಚಟುವಟಿಕೆಗಳಿಗೆ ಪ್ರಚಾರ ರಾಯಭಾರಿಗಳಾಗುವುದು ಹೊಸದೇನಲ್ಲ. ಆದರೆ, ಸದುದ್ದೇಶದ ಕಾರ್ಯಗಳಿಗೆ ತಮ್ಮ ಸಮಯ ನೀಡುವುದು, ಅದರಿಂದ ಯಾವುದೇ ಫ‌ಲಾಪೇಕ್ಷೆ ಇಲ್ಲದೆ ಪ್ರಚಾರ ರಾಯಭಾರಿ ಆಗುವುದು, ಆ ಕಾರ್ಯಗಳನ್ನು ಪ್ರಚಾರಪಡಿಸುವುದಕ್ಕೆ ಅನೇಕ ಸ್ಟಾರ್ ಹಿಂದೇಟು ಹಾಕುತ್ತಾರೆ.

ಈಗ ಯಾಕೆ ಸ್ಟಾರ್‌ಗಳ ರಾಯಭಾರದ ಬಗ್ಗೆ ಮಾತು ಅಂತೀರಾ? ಅದಕ್ಕೂ ಒಂದು ಕಾರಣವಿದೆ. ಅಂದ ಹಾಗೆ, ಆ ಕಾರಣ ಬಾಲಿವುಡ್‌ ನಟಿ ದಿಯಾ ಮಿರ್ಜಾ. ವಿಷಯ ಏನಪ್ಪ ಅಂದ್ರೆ, ವಿಶ್ವಸಂಸ್ಥೆಯ ಬಹು ಮಹತ್ವಾಕಾಂಕ್ಷೆಯ ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆ ಅಭಿಯಾನಕ್ಕೆ ಬಾಲಿವುಡ್‌ ನಟಿ ದಿಯಾ ಮಿರ್ಜಾ ಪ್ರಚಾರ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ.

ಜಾಗತಿಕ ಹವಾಮಾನ ಬದಲಾವಣೆ ನಿಯಂತ್ರಣ ಕುರಿತು ಪ್ಯಾರಿಸ್‌ ಒಪ್ಪಂದದಲ್ಲಿ ಉಲ್ಲೇಖವಾಗಿರುವ ಸುಸ್ಥಿರ ಅಭಿವೃದ್ಧಿಗೆ (ಎಸ್‌ಡಿಜಿ) ನಿಗದಿಪಡಿಸಿರುವ ಗುರಿಗಳ ಸಾಧನೆಗೆ ರಾಷ್ಟ್ರಗಳನ್ನು ಪ್ರೇರೇಪಿಸುವುದು ಅಭಿಯಾನದ ಉದ್ದೇಶವಾಗಿದೆ. ಯುರೋಪಿಯನ್‌, ಏಷ್ಯಾನ್‌ ಖಂಡಗಳ ಪ್ರಮುಖ ಜನಪ್ರಿಯ ತಾರೆಯರನ್ನು ಈ ಅಭಿಯಾನದಲ್ಲಿ ರಾಯಭಾರಿಯನ್ನಾಗಿ ನೇಮಿಸಲಾಗುತ್ತಿದ್ದು, ಇನ್ನುಳಿದಂತೆ ಇ ಕಾಮರ್ಸ್‌ ಕ್ಷೇತ್ರದ ಅಲಿಬಾಬಾ ಸಂಸ್ಥೆಯ ಮುಖ್ಯಸ್ಥ ಜಾಕ್‌ ಮಾ ಪೆಂಗ್‌ ಲೀ, ಬ್ರಿಟಿಷ್‌ ನಟ ರಿಚರ್ಡ್‌ ಕರ್ಟಿಸ್‌ ಸೇರಿದಂತೆ 17 ಖ್ಯಾತನಾಮರನ್ನು ವಿಶ್ವಸಂಸ್ಥೆಯ ಈ ಅಭಿಯಾನಕ್ಕೆ ರಾಯಭಾರಿಗಳನ್ನಾಗಿ ನೇಮಿಸಲಾಗಿದೆ. ಇಂಥಾದ್ದೊಂದು ಅಪರೂಪದ ಅವಕಾಶ ಈ ಬಾರಿ ದಿಯಾ ಮಿರ್ಜಾ ಅವರನ್ನು ಹುಡುಕಿಕೊಂಡು ಬಂದಿದೆ.

ಇನ್ನು ಈ ಬಗ್ಗೆ ವಿಶ್ವಸಂಸ್ಥೆ ಮಹಾ ಕಾರ್ಯದರ್ಶಿ ಆಂಟೋನಿಯೋ ಗುಟರೆಸ್‌ ದಿಯಾ ಮಿರ್ಜಾ ಅವರ ಅಧಿಕೃತ ರಾಯಭಾರಿ ನೇಮಕ ಆದೇಶಕ್ಕೆ ಸಹಿ ಹಾಕಿದ್ದಾರೆ ಎಂದು ವಿಶ್ವಸಂಸ್ಥೆಯ ವಕ್ತಾರ ಕಚೇರಿ ಪ್ರಕಟಣೆ ಹೊರಡಿಸಿದೆ.

ಈ ಬಗ್ಗೆ ಮಾತನಾಡಿರುವ ನಟಿ ದಿಯಾ ಮಿರ್ಜಾ ವಿಶ್ವಸಂಸ್ಥೆಯು ನನಗೆ ನೀಡಿರುವ ಅಭೂತಪೂರ್ವ ಗೌರವಕ್ಕೆ ನಾನು ಆಭಾರಿಯಾಗಿದ್ದೇನೆ. ವಿಶ್ವಸಂಸ್ಥೆಯ ಬಹು ಮಹತ್ವಾಕಾಂಕ್ಷೆಯ ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆಯ ಈ ಅಭಿಯಾನಕ್ಕೆ (ಎಸ್‌ಡಿಜಿ) ನಾನು ಸೂಕ್ತ ನ್ಯಾಯ ಒದಗಿಸಲಿದ್ದೇನೆ ಎಂದು ಟ್ವೀಟ್‌ ಮಾಡಿ ಸಂತಸ ಹಂಚಿಕೊಂಡಿದ್ದಾರೆ.

ಟಾಪ್ ನ್ಯೂಸ್

ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

Karnataka ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Karnataka ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Karnataka MLC Election; ಆಗ್ನೇಯ ಶಿಕ್ಷಕರ ಕ್ಷೇತ್ರ: 15 ಮಂದಿ ಅಂತಿಮ

Karnataka MLC Election; ಆಗ್ನೇಯ ಶಿಕ್ಷಕರ ಕ್ಷೇತ್ರ: 15 ಮಂದಿ ಅಂತಿಮ

SSLC Exam 2 ಪರಿಷ್ಕೃತ ವೇಳಾಪಟ್ಟಿ: ಜೂ.14ರಿಂದ ಪರೀಕ್ಷೆ

SSLC Exam 2 ಪರಿಷ್ಕೃತ ವೇಳಾಪಟ್ಟಿ: ಜೂ.14ರಿಂದ ಪರೀಕ್ಷೆ

police crime

Hubli; ನೇಹಾ & ಅಂಜಲಿ ಹತ್ಯೆ ಪ್ರಕರಣ: ಡಿಸಿಪಿ ತಲೆದಂಡ

1-sadasds

IPL ಚೆನ್ನೈ ಗೆ ಗೆಲ್ಲಲು 219 ರನ್ ಗಳ ಗುರಿ ಮುಂದಿಟ್ಟ ಆರ್ ಸಿಬಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

Karnataka ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Karnataka ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Karnataka MLC Election; ಆಗ್ನೇಯ ಶಿಕ್ಷಕರ ಕ್ಷೇತ್ರ: 15 ಮಂದಿ ಅಂತಿಮ

Karnataka MLC Election; ಆಗ್ನೇಯ ಶಿಕ್ಷಕರ ಕ್ಷೇತ್ರ: 15 ಮಂದಿ ಅಂತಿಮ

SSLC Exam 2 ಪರಿಷ್ಕೃತ ವೇಳಾಪಟ್ಟಿ: ಜೂ.14ರಿಂದ ಪರೀಕ್ಷೆ

SSLC Exam 2 ಪರಿಷ್ಕೃತ ವೇಳಾಪಟ್ಟಿ: ಜೂ.14ರಿಂದ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.