ಮೈಸೂರು: ಶೂಟೌಟ್ಗೆ ವ್ಯಕ್ತಿ ಬಲಿ
Team Udayavani, May 17, 2019, 6:00 AM IST
ಮೈಸೂರು: ನಿಷೇಧಿತ ನೋಟುಗಳ ಬದಲಾವಣೆ ಮಾಡಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರ ಮೇಲೆ ಪ್ರತಿ ದಾಳಿ ಮಾಡಿದ ವ್ಯಕ್ತಿ ಪೊಲೀಸರ ಗುಂಡೇಟಿಗೆ ಬಲಿಯಾಗಿರುವ ಘಟನೆ ನಗರದಲ್ಲಿ ಸಂಭವಿಸಿದೆ.
ಮುಂಬೈ ಮೂಲದ ಸುಖ್ವಿಂದರ್ ಸಿಂಗ್ ಪೊಲೀಸರ ಗುಂಡಿಗೆ ಬಲಿಯಾದ ವ್ಯಕ್ತಿ. ನಗರದ ಹಿನಕಲ್ ರಿಂಗ್ ರಸ್ತೆ ಜಂಕ್ಷನ್ ಬಳಿಯ ಎಸ್ವಿ ರೆಸಿಡೆನ್ಸಿ ಅಪಾರ್ಟ್ಮೆಂಟ್ ಎದುರು ಗುರುವಾರ ಬೆಳಗ್ಗೆ 9.30 ರ ಸಮಯದಲ್ಲಿ ಈ ಘಟನೆ ಜರುಗಿದೆ.
ಇಬ್ಬರು ಪರಾರಿ, ಕಾರು ವಶಕ್ಕೆ: ಘಟನೆಯಲ್ಲಿ ಸುಖ್ವಿಂದರ್ ಸಿಂಗ್ ಪೊಲೀಸರ ಗುಂಡಿಗೆ ಬಲಿಯಾಗಿದ್ದು, ಸ್ಥಳದಲ್ಲಿದ್ದ ಮತ್ತಿಬ್ಬರು ಪರಾರಿಯಾಗಿದ್ದಾರೆ. ಅವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಆರೋಪಿಗಳ ಬಳಿ ಇದ್ದ ಕಾರನ್ನು ವಶಕ್ಕೆ ಪಡೆದಿದ್ದಾರೆ. ಕಾರಿನ ಮಾಲೀಕ ಮೈಸೂರಿನ ಮಂಡಿ ಮೊಹಲ್ಲಾದ ನಿವಾಸಿ ಎಂದು ತಿಳಿದು ಬಂದಿದೆ.
ಘಟನೆ ವಿವರ: ಬೆಳಗ್ಗೆ 9.30ರ ಸಮಯದಲ್ಲಿ ಅಪಾರ್ಟ್ಮೆಂಟ್ ಬಳಿ ನಿಷೇಧಿತ ನೋಟುಗಳ ಬದಲಾವಣೆಗೆ ಗುಂಪೊಂದು ಬಂದಿದೆ ಎಂಬುದರ ಬಗ್ಗೆ ಖಚಿತ ಮಾಹಿತಿ ಆಧರಿಸಿ, ವಿಜಯ ನಗರ ಠಾಣೆಯ ಇನ್ಸ್ಪೆಕ್ಟರ್ ಬಿ.ಜಿ. ಕುಮಾರ್ ಮತ್ತು ಮೂವರು ಸಿಬ್ಬಂದಿ, ಕಾರ್ಯಾಚರಣೆಗೆ ಇಳಿದಿದ್ದಾರೆ. ಅಪಾರ್ಟ್ಮೆಂಟ್ ಎದುರು ರಿಂಗ್ ರಸ್ತೆಯಲ್ಲಿ ಆರೋಪಿಗಳು ತೆರಳುತ್ತಿದ್ದ ಕಾರನ್ನು, ತಮ್ಮ ಜೀಪ್ ಮೂಲಕ ಅಡ್ಡ ಹಾಕಿದ ಪೊಲೀಸರು, ಕಾರಿನಲ್ಲಿದ್ದವರನ್ನು ಹಿಡಿಯಲು ಯತ್ನಿಸಿದ್ದಾರೆ. ಪೊಲೀಸರನ್ನು ಕಂಡೊಡನೆ ಇಬ್ಬರು ಪರಾರಿಯಾಗಿದ್ದು, ಒಬ್ಬನನ್ನು ಹಿಡಿದಿದ್ದಾರೆ. ತಕ್ಷಣ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆತ, ತನ್ನ ಬಳಿ ಇದ್ದ ರಿವಾಲ್ವಾರ್ ಎತ್ತಿಕೊಳ್ಳಲು ಮುಂದಾಗಿದ್ದಾನೆ. ಈ ಸಂದರ್ಭ ಸ್ಥಳದಲ್ಲಿದ್ದ ಇನ್ಸ್ಪೆಕ್ಟರ್ ಬಿ.ಜಿ. ಕುಮಾರ್ ತಮ್ಮಲ್ಲಿದ್ದ ರಿವಾಲ್ವರ್ನಿಂದ ಗುಂಡು ಹಾರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ