ಸಿದ್ದು ಟ್ವೀಟ್ ವಿಶ್ವಾಸದ್ದೋ, ಕಾಲೆಳೆದಿದ್ದೋ: ಲಿಂಬಾವಳಿ
Team Udayavani, May 17, 2019, 6:00 AM IST
ಕಲಬುರಗಿ: ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಸ್ಥಾನಕ್ಕಿಂತ ಉನ್ನತ ಸ್ಥಾನದ ಅರ್ಹತೆ ಇದೆ ಎಂಬುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವುದು ವಿಶ್ವಾಸದ ಪ್ರೀತಿಯೋ ಅಥವಾ ಕಾಲೆಳೆಯೋ ಪ್ರೀತಿಯೋ? ಗೊತ್ತಿಲ್ಲ ಎಂದು ಬಿಜೆಪಿ ಮುಖಂಡ ಅರವಿಂದ ಲಿಂಬಾವಳಿ ವ್ಯಂಗ್ಯವಾಡಿದರು.
ಚಿಂಚೋಳಿ ಕ್ಷೇತ್ರದ ಪ್ರಚಾರ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಒಟ್ಟಾರೆ ಈ ಟ್ವೀಟ್ಗಳ ಸಮರ ನೋಡಿದರೆ ಇದು ಚುನಾವಣೆ ಪ್ರಚಾರವೋ ಅಥವಾ ಅವರವರ ನಡುವಿನ ಕಿತ್ತಾಟವೋ ಗೊತ್ತಾಗುತ್ತಿಲ್ಲ. ಈ ರೀತಿ ಕಿತ್ತಾಟದಲ್ಲಿ ತೊಡಗಿದ್ದರೆ ಜನರು ವೋಟ್ ಹಾಕಲಿದ್ದಾರೆ ಎಂಬುದಾಗಿ ತಿಳಿದುಕೊಂಡಿದ್ದೀರಾ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಸಂಖ್ಯಾಬಲ ಕುಸಿತ: ಜೆಡಿಎಸ್-ಕಾಂಗ್ರೆಸ್ ನಾಯರಕು ಕನಿಷ್ಠ ಉಪ ಚುನಾವಣೆಯಲ್ಲಾದರೂ ಒಂದಾಗುತ್ತಾರೆ ಅಂದುಕೊಂಡಿದ್ದೀವಿ. ಆದರೆ ಈ ಕಿತ್ತಾಟ ನೋಡಿದಲ್ಲಿ ಚುನಾವಣೆ ನಂತರ ಸರ್ಕಾರ ಉಳಿಯಲ್ಲ ಎನ್ನುವುದು ಸ್ಪಷ್ಟವಾಗುತ್ತದೆ. ರಾಜ್ಯದಲ್ಲಿ ಮತ್ತಷ್ಟು ಉಪ ಚುನಾವಣೆಗಳು ಬರಬಹುದು. ಬಿಜೆಪಿ ಬೆಂಬಲಿಸಲು ಹಲವು ನಾಯಕರು ರಾಜೀನಾಮೆ ನೀಡಬಹುದಾಗಿದೆ. ಶಾಸಕ ರಮೇಶ್ ಜಾರಕಿಹೊಳಿ ಮಾತ್ರವಲ್ಲ ಇತರರೂ ಬರಬಹುದು. ಹೀಗಾಗಿ ಕಾಂಗ್ರೆಸ್ ಸಂಖ್ಯಾಬಲ ಕಡಿಮೆಯಾಗೋದು ಖಚಿತ ಎಂದು ಲಿಂಬಾವಳಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
MUST WATCH
ಹೊಸ ಸೇರ್ಪಡೆ
ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ