57 ಲಕ್ಷ ಮಕ್ಕಳಿಗೆ ಸಾರಿಗೆ ಭಾಗ್ಯವಿಲ್ಲ!


Team Udayavani, May 17, 2019, 10:36 AM IST

blore-1
ಬೆಂಗಳೂರು: ಖಾಸಗಿ ಶಾಲೆಗೆ ಹೋಗುವ ಪ್ರತಿ ವಿದ್ಯಾರ್ಥಿಯ ಸಾರಿಗೆ ವ್ಯವಸ್ಥೆಯಯನ್ನು ಖುದ್ದು ಪರಿಶೀಲಿಸುವ ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ಕಾರಿ ಶಾಲೆ ಮಕ್ಕಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸುವುದನ್ನೇ ಮರೆತಿದೆ. ಸರ್ಕಾರಿ ಶಾಲೆಗೆ ಹೋಗುವ ವಿದ್ಯಾರ್ಥಿಗೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ರಿಯಾಯ್ತಿ ದರದ ಬಸ್‌ಪಾಸ್‌ ಹಾಗೂ 8ನೇ ತರಗತಿ ಮಕ್ಕಳಿಗೆ ಸೈಕಲ್‌ ವಿತರಣೆ ಹೊರತುಪಡಿಸಿ ಬೇರ್ಯಾವುದೇ ವ್ಯವಸ್ಥೆಯನ್ನು ಸರ್ಕಾರದಿಂದ ಮಾಡಲಾಗಿಲ್ಲ.

ಉಳಿದೆಲ್ಲ ತರಗತಿಯ ವಿದ್ಯಾರ್ಥಿಗಳು ಹೇಗೆ ಶಾಲೆಗೆ ಹೋಗುತ್ತಾರೆ. ಯಾವ ಸಾರಿಗೆ ಬಳಸಿಕೊಂಡು ಮನೆಗೆ ಹೋಗುತ್ತಾರೆ ಎನ್ನುವ ಬಗ್ಗೆ ಸರ್ಕಾರ ಗಮನ ಹರಿಸುತ್ತೂಲೇ ಇಲ್ಲ. ರಾಜ್ಯದ ಗ್ರಾಮಾಂತರ ಭಾಗದಲ್ಲಿ 38,496, ನಗರ ಪ್ರದೇಶದಲ್ಲಿ 4,996 ಸರ್ಕಾರಿ ಪ್ರಾಥಮಿಕ ಶಾಲೆ, ಗ್ರಾಮಾಂತರ ಭಾಗದಲ್ಲಿ 3,891, ನಗರ ಪ್ರದೇಶದಲ್ಲಿ 805 ಸರ್ಕಾರಿ ಪ್ರೌಢಶಾಲೆಗಳಿವೆ.

ಹಾಗೇ ಗ್ರಾಮಾಂತರ ಭಾಗದಲ್ಲಿ 6,414, ನಗರ ಪ್ರದೇಶದಲ್ಲಿ 8,014 ಖಾಸಗಿ ಪ್ರಾಥಮಿಕ ಶಾಲೆ, ಗ್ರಾಮಾಂತರ ಭಾಗದಲ್ಲಿ 2,267, ನಗರ ಪ್ರದೇಶದಲ್ಲಿ 4,479 ಖಾಸಗಿ ಪ್ರೌಢಶಾಲೆಗಳಿಗೆ. ಅದೇ ರೀತಿ ರಾಜ್ಯದಲ್ಲಿ 3,015 ಅನುದಾನಿತ ಪ್ರಾಥಮಿಕ ಶಾಲೆ ಹಾಗೂ 3,801 ಅನುದಾನಿತ ಪ್ರೌಢಶಾಲೆಗಳಿವೆ.

ಸರ್ಕಾರಿ ಶಾಲೆಗಳಲ್ಲಿ 21,11,176 ಗಂಡುಮಕ್ಕಳು, 22,68,078 ಹೆಣ್ಣುಮಕ್ಕಳು ಸೇರಿ ಒಟ್ಟು 43,79,254 ವಿದ್ಯಾರ್ಥಿಗಳಿದ್ದಾರೆ. ಖಾಸಗಿ ಶಾಲೆಗಳಲ್ಲಿ 24,60,838 ಗಂಡುಮಕ್ಕಳು, 19,40,471 ಹೆಣ್ಣುಮಕ್ಕಳು ಸೇರಿ 44,01,309 ವಿದ್ಯಾರ್ಥಿಗಳಿದ್ದಾರೆ.

ಅನುದಾನಿತ ಶಾಲೆಯಲ್ಲಿ 6,94,661 ಗಂಡು ಮಕ್ಕಳು, 6,41,895 ಹೆಣ್ಣು ಮಕ್ಕಳು ಸೇರಿ 13,36,556 ವಿದ್ಯಾರ್ಥಿಗಳಿದ್ದಾರೆ. ಒಟ್ಟಾರೆ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಸುಮಾರು 1.01 ಕೋಟಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. 2019-20ನೇ ಸಾಲಿನ ದಾಖಲಾತಿ ಪ್ರಕ್ರಿಯೆ ಮುಗಿದ ನಂತರ ಸಂಖ್ಯೆಯಲ್ಲಿ ಸ್ವಲ್ಪ ಮಟ್ಟದ ಏರಿಕೆಯಾಗಲಿದೆ.

ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 44,01,309 ವಿದ್ಯಾರ್ಥಿಗಳ ಸಾರಿಗೆ ವ್ಯವಸ್ಥೆಯನ್ನು ಮಾತ್ರ ಖುದ್ದು ಪರಿಶೀಲನೆ ನಡೆಸುವ ಸರ್ಕಾರ, ಶಿಕ್ಷಣ ಇಲಾಖೆ ಅಧಿಕಾರಿಗಳು ಸುಮಾರು 57.15 ಲಕ್ಷ ವಿದ್ಯಾರ್ಥಿಗಳ ಸಾರಿಗೆ ವ್ಯವಸ್ಥೆ ಹೇಗಿದೆ ಎಂಬುದರ ಬಗ್ಗೆ ಕಿಂಚಿತ್ತೂ ತಲೆಕೆಡಿಸಿಕೊಂಡಿಲ್ಲ. ಖಾಸಗಿ ಶಾಲೆಗೆ ಬರುವ ಪ್ರತಿ ವಿದ್ಯಾರ್ಥಿಯ ಮಾಹಿತಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಲೆಹಾಕುತ್ತಾರೆ.

ಎಷ್ಟು ವಿದ್ಯಾರ್ಥಿಗಳು ಶಾಲಾ ವಾಹನ ಬಳಸುತ್ತಾರೆ, ಎಷ್ಟು ಮಂದಿ ಸೈಕಲ್‌, ದ್ವಿಚಕ್ರ ವಾಹನ, ಕಾರು, ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮೂಲಕ ಬರುತ್ತಿದ್ದಾರೆ ಎಂಬ ಸಂಪೂರ್ಣ ವಿವರವನ್ನು ಖಾಸಗಿ ಆಡಳಿತ ಮಂಡಳಿಗಳು ಆಗಿಂದಾಗೇ ಸಾರ್ವಜನಿಕ ಶಿಕ್ಷಣ ಇಲಾಖೆಗೆ ನೀಡಬೇಕು.

ಇಲಾಖೆಯ ಅಧಿಕಾರಿಗಳು ಶಾಲೆಗೆ ಬಂದು ಇದರ ಸಂಪೂರ್ಣ ಮಾಹಿತಿ ಪಡೆದುಕೊಂಡು ಹೋಗುತ್ತಾರೆ. ಆದರೆ, ಶಾಲಾ ವಾಹನದ ನಿಯಮ ಉಲ್ಲಂಘನೆಯಾದರೆ ಕ್ರಮ ತೆಗೆದುಕೊಳ್ಳಲು ಹಿಂದೇಟು ಹಾಕುತ್ತಾರೆ.

ಚರ್ಚೆ ನಡೆಸಿದರೂ ತೀರ್ಮಾನವಿಲ್ಲ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸಲು ಹಾಗೂ ಪೋಷಕರನ್ನು ಆಕರ್ಷಿಸುವ ದೃಷ್ಟಿಯಿಂದ ಪ್ರತಿ ತಾಲೂಕು ಅಥವಾ ಹೋಬಳಿ ಮಟ್ಟದಲ್ಲಿ ಒಂದು ಸಾರ್ವಜನಿಕ ಕಾರ್ಪೊರೇಟ್‌ ಹೊಣೆಗಾರಿಯಲ್ಲಿ ಶಾಲೆ ರಚಿಸುವ ಬಗ್ಗೆ ಹಿಂದಿನ ಕಾಂಗ್ರೆಸ್‌ ಸರ್ಕಾರದಲ್ಲಿ ತೀವ್ರ ಚರ್ಚೆ ನಡೆದಿತ್ತು.

ಆ ಶಾಲಾ ಮಕ್ಕಳಿಗೆ ಸರ್ಕಾರದಿಂದಲೇ ಶಾಲಾ ವಾಹನದ ವ್ಯವಸ್ಥೆ ಕಲ್ಪಿಸುವ ಬಗ್ಗೆಯೂ ಚರ್ಚೆಯಾಗಿತ್ತು. ಅಂತಿಮವಾಗಿ ಯಾವುದೇ ನಿರ್ಧಾರ ಆಗಲಿಲ್ಲ.

ಭದ್ರತಾ ಲೋಪಗಳಿಗೆ ಕಡಿವಾಣವಿಲ್ಲ
ಖಾಸಗಿ ಶಾಲೆಗೆ ಮಕ್ಕಳನ್ನು ಕಳುಹಿಸುವ ಬಹುತೇಕ ಪೋಷಕರು ಸುರಕ್ಷತೆ ಹಾಗೂ ಭದ್ರತೆಯ ಹಿತದೃಷ್ಟಿಯಿಂದ ಶಾಲಾಡಳಿತ ಮಂಡಳಿಯ ವಾಹನಗಳಿಗೆ ದುಬಾರಿ ಶುಲ್ಕ ನೀಡಲು ಯೋಚನೆ ಮಾಡುವುದಿಲ್ಲ. ತಿಂಗಳಿಗೆ 500 ರೂ.ಗಳಿಂದ ಆರಂಭವಾಗಿ 3 ಸಾವಿರ ಹಾಗೂ ಅದಕ್ಕಿಂತ ಹೆಚ್ಚು ವಾಹನ ಶುಲ್ಕ ಪಡೆಯುವ ಶಾಲೆಗಳು ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿವೆ.

ಕೆಲವೊಂದು ಶಾಲೆಗಳು ಕಿ.ಮೀ ಲೆಕ್ಕದಲ್ಲಿ ಮಕ್ಕಳ ಪಾಲಕ, ಪೋಷಕರಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡುತ್ತವೆ. ದುಬಾರಿ ಶುಲ್ಕ ನೀಡಿದರೂ ಭದ್ರತೆ ಹಾಗೂ ಸುರಕ್ಷತೆಯ ಲೋಪದ ಬಗ್ಗೆ ಪ್ರಶ್ನಿಸುವ ಅಧಿಕಾರವನ್ನು ಪಾಲಕ, ಪೋಷಕರಿಗೆ ಶಾಲಾಡಳಿತ ಮಂಡಳಿ ನೀಡಿರುವುದಿಲ್ಲ. ಇದಕ್ಕೂ ಸರ್ಕಾರ ಹಾಗೂ ಇಲಾಖೆ ಕಡಿವಾಣ ಹಾಕಿಲ್ಲ.

ಸರ್ಕಾರಿ ಶಾಲೆಯಲ್ಲೂ ಶಾಲಾ ವಾಹನವಿದೆ
ರಾಜ್ಯದ 50ಕ್ಕೂ ಅಧಿಕ ಸರ್ಕಾರಿ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಯಿಂದ ಮನೆಗೆ ಹಾಗೂ ಮನೆಯಿಂದ ಶಾಲೆಗೆ ಕರೆದೊಯ್ಯಲು ಶಾಲಾ ವಾಹನದ ವ್ಯವಸ್ಥೆ ಇದೆ. ಇದನ್ನು ಸರ್ಕಾರ ಅಥವಾ ಸಾರ್ವಜನಿಕ ಶಿಕ್ಷಣ ಇಲಾಖೆ ಮಾಡಿಲ್ಲ.

ಬದಲಾಗಿ ಸ್ಥಳೀಯರು ನೀಡಿದ ಅನುದಾನ, ಹಳೇ ವಿದ್ಯಾರ್ಥಿಗಳ ಸಂಘದ ಶ್ರಮ ಮತ್ತು ಶಾಲಾಭಿವೃದ್ಧಿ ಸಮಿತಿಗಳ ಪರಿಶ್ರಮದಿಂದ ಸರ್ಕಾರಿ ಶಾಲೆಗೂ ವಾಹನ ಬಂದಿದೆ. ಆ ವಾಹನದ ನಿರ್ವಹಣೆಯನ್ನು ಶಾಲೆಗೆ ವಹಿಸಿಲ್ಲ. ಸಂಘ ಅಥವಾ ಸಮಿತಿಯೇ ನೋಡಿಕೊಳ್ಳುತ್ತಿದೆ. ಸ್ಥಳೀಯರೇ ಚಾಲಕರಾಗಿರುವುದರಿಂದ ಮಕ್ಕಳಿಗೆ ಭದ್ರತೆಯೂ ಹೆಚ್ಚಿದೆ.

–ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.