ಗ್ರಾಮಕ್ಕೆ ನುಗ್ಗಿ ಜನರನ್ನು ಅಟ್ಟಾಡಿಸಿದ ಕಾಡಾನೆ


Team Udayavani, May 18, 2019, 3:00 AM IST

gramakke

ಎಚ್‌.ಡಿ.ಕೋಟೆ: ಕಾಡಾನೆಗಳು ಕಾಡಿನಿಂದ ನಾಡಿನತ್ತ ಮುಖ ಮಾಡಿ ಜನರು ವಾಸಿಸುವ ಗ್ರಾಮಗಳತ್ತ ಧಾವಿಸುತ್ತಿದ್ದು, ಜನರನ್ನು ಭಯಭೀತರನ್ನಾಗಿಸಿವೆ. ಶುಕ್ರವಾರ ಬೆಳಗಿನ ಜಾವ ಕಬಿನಿ ಜಲಾಶಯ ಸಮೀಪದ ಬೀಚನಹಳ್ಳಿ ಹಾಗೂ ಅಕ್ಕ ಪಕ್ಕದ ಗ್ರಾಮಗಳಲ್ಲಿ ಕಾಡಾನೆ (ಒಂಟಿ ಸಲಗ) ಕಾಣಸಿಕೊಂಡು ಗ್ರಾಮದ ಜನರನ್ನು ಅಟ್ಟಾಡಿಸಿ ದಾಂದಲೆ ನಡೆಸಿದೆ. ಓರ್ವ ಮಹಿಳೆ ಸೇರಿದಂತೆ ಹಲವರು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಳೆದ 15 ದಿನಗಳ ಹಿಂದೆ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ಕಾಣಿಸಿಕೊಂಡ ಆನೆಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾಡಿಗೆ ವಾಪಸ್‌ ಕಳುಹಿಸಲು ಕಾರ್ಯಾಚರಣೆ ಕೈಗೊಂಡಿದ್ದ ಮರು ದಿನವೇ ಪಡುಕೋಟೆ ಗ್ರಾಮದಲ್ಲಿ ಕಾಣಿಸಿಕೊಂಡು ನಂತರ ಮೇ 5 ರಂದು ಮಾದಾಪುರ ಗ್ರಾಮದಲ್ಲಿ ಕಾಣಸಿಕೊಂಡು ಒರ್ವ ಕೂಲಿ ಕಾರ್ಮಿಕನ ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು.

ನಂತರ ಹೆಚ್ಚಿನ ಸಿಬ್ಬಂದಿ ಕರೆಸಿಕೊಂಡು 4 ದಸರಾ ಆನೆಗಳ ಸಹಾಯದಿಂದ ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸುವಲ್ಲಿ ಅರಣ್ಯಾಧಿಕಾರಿಗಳ ತಂಡ ಯಶಸ್ವಿಯಾಗಿ, ಚಿಕ್ಕದೇವಮ್ಮನ ಬೆಟ್ಟದ ಕಾಡಿಗೆ ಸೇರಿಸಿದ್ದರು.

ಭಯಭೀತಿಯಲ್ಲಿ ಜನರು: ಘಟನೆ ಮರೆಯಾಗುವ ಮುನ್ನವೇ ಮತ್ತೆ ಕಾಡಿನಿಂದ ಹೊರ ಬಂದು ಪ್ರತಿದಿನ ಒಂದಲ್ಲ ಒಂದು ಗ್ರಾಮಗಳ ಬಳಿ ಕಾಣಿಸಿಕೊಳ್ಳುತ್ತಿದ್ದು, ಗ್ರಾಮಸ್ಥರು ಹಾಗೂ ಹೊಲ ಗದ್ದೆಗಳಲ್ಲಿ ಕೃಷಿಯಲ್ಲಿ ತೊಡಗುವ ರೈತರು, ಕೂಲಿ ಕಾರ್ಮಿಕರನ್ನು ಭಯಭೀತರನ್ನಾಗಿಸಿವೆ.

ರೊಚ್ಚಿಗೆದ್ದ ಸಲಗ: ಶುಕ್ರವಾರ ಬೆಳಗಿನ ಜಾವ ತುಂಬಸೋಗೆ ಗ್ರಾಮದಲ್ಲಿ ಒಂಟಿ ಸಲಗ ಕಾಣಿಸಿಕೊಂಡು ವಾಯುವಿಹಾರಕ್ಕೆ ತೆರಳಿದ್ದ ಜನರ ಕಣ್ಣಿಗೆ ಬಿದ್ದ ಆನೆ ಹೊಲ ಗದ್ದೆಗಳ ಮೂಲಕ ನಡೆದು 6.30 ರಲ್ಲಿ ಬೀಚನಹಳ್ಳಿ ಗ್ರಾಮದ ಮಧ್ಯೆಯೇ ಕಾಣಿಸಿಕೊಂಡಿದೆ. ಆನೆ ಗ್ರಾಮಕ್ಕೆ ಬಂದಿರುವ ಸುದ್ದಿ ತಿಳಿದು ಜನರು ಆನೆಯನ್ನು ಹಿಂಬಾಲಿಸಿ ಗಲಾಟೆ ಮಾಡಿದ್ದರಿಂದ ರೊಚ್ಚಿಗೆದ್ದ ಸಲಗ ಸಿಕ್ಕ ಸಿಕ್ಕವರನ್ನು ಅಟ್ಟಾಡಿಸಿದೆ. ಈ ಸಂದರ್ಭದಲ್ಲಿ ಮನೆಯ ಮುಂದೆ ಕುಳಿತಿದ್ದ ಕಮಲಮ್ಮ ಅವರ ಮೇಲೆ ದಾಳಿ ಮಾಡಿ ಸೊಂಡಲಿನಿಂದ ಎಸೆದಿದೆ.

ವಾಹನಗಳು ಜಖಂ: ನಂತರ ಎರಡು ದ್ವಿಚಕ್ರ ವಾಹನ, ಒಂದು ಬೈಸಿಕಲ್‌ ಅನ್ನು ಜಖಂಗೊಳಿಸಿ ಕಬಿನಿ ಎಡದಂಡೆ ನಾಲೆ ಮೂಲಕ ಮಾಗುಡಿಲು ಗ್ರಾಮದ ಗದ್ದೆ ಮಾರ್ಗವಾಗಿ ಕಬಿನಿ ನದಿಯಲ್ಲಿ ಈಜಿಕೊಂಡು ಸರಗೂರು ಗ್ರಾಮದ ಹೊಸ ಬಡಾವಣೆ ಸಮೀಪದ ಗದ್ದೆಯಲ್ಲಿ ಬಿಡುಬಿಟ್ಟಿದೆ. ಕಾಡಿನಿಂದ ತಪ್ಪಿಸಿಕೊಂಡು ನಾಡಿಗೆ ಬಂದಿರುವ ಕಾಡಾನೆಯನ್ನು ಕಾಡಿಗೆ ಅಟ್ಟಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಹಾಸ ಪಡುತ್ತಿದ್ದಾರೆ. ಕಾಡಾನೆಯನ್ನು ನೋಡಲು ಹೆಚ್ಚಿನ ಜನರು ಸೇರುವುದರಿಂದ ಕಾರ್ಯಾಚರಣೆ ನಡೆಸಲು ತೊಂದರೆಯಾಗುತ್ತಿದೆ.

ಬೆಳೆಹಾನಿ: ಬೆಳ್ಳಂ ಬೆಳಗ್ಗೆಯೇ ಕಾಡಾನೆಗಳು ಹೊಲ ಗದ್ದೆಗಳಲ್ಲಿ ಕಾಣಿಸಿಕೊಂಡು ನಾಟಿ, ಬಿತ್ತನೆ ಮಾಡಿರುವ ಬೆಳೆಗಳನ್ನು ನಾಶಪಡಿಸುತ್ತಿದ್ದು, ಕಷ್ಟಪಟ್ಟು ಬೆಳೆ ಬೆಳೆದ‌ ರೈತರಿಗೆ ನಷ್ಟ ಉಂಟಾಗಿದೆ. ಒಂದು ಕಡೆ ಸರಿಯಾದ ಕಾಲಕ್ಕೆ ಮಳೆಯಿಲ್ಲ. ಮುಂಗಾರು ಕೈಕೊಟ್ಟರು ಅಲ್ಪಸ್ವಲ್ಪ ಬಿದ್ದ ಮಳೆಗೆ ಹಾಗೂ ಪಂಪ್‌ ಸೆಟ್‌ ನೀರಿನಿಂದ ಬೆಳೆದ ಬೆಳೆಗಳನ್ನು ಕಾಡಾನೆಗಳು ದಾಳಿ ಮಾಡಿ ನಾಶಪಡಿಸುತ್ತಿರುವುದು ರೈತರನ್ನು ಚಿಂತೆಗಿಡುಮಾಡಿದೆ.

ಸರಗೂರು ಪಟ್ಟಣ ಸಮೀಪದ ಗದ್ದೆಯಲ್ಲಿ ಆನೆ ಬಿಡುಬಿಟ್ಟಿದೆ. ಹೆಚ್ಚಿನ ಸಿಬ್ಬಂದಿಯೊಂದಿಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ. ಮಳೆಯಿಂದಾಗಿ ಕಾರ್ಯಾಚರಣೆ ಕಷ್ಟವಾಗಿದೆ. ಆನೆಯನ್ನು ಇಂದು ರಾತ್ರಿಯೇ(ಶುಕ್ರವಾರ ) ಮುಳ್ಳೂರು ಅರಣ್ಯಕ್ಕೆ ಸೇರಿಸಲಾಗುವುದು.
-ಮೊಸೀನ್‌ ಬಾಷಾ, ಅರಣ್ಯಾಧಿಕಾರಿ

ಟಾಪ್ ನ್ಯೂಸ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.