ಕುಕ್ಕೆ ದೇಗುಲದ ಹುಂಡಿ ಕದಿಯುತ್ತಿದ್ದ ವ್ಯಕ್ತಿ ಸೆರೆ
Team Udayavani, May 18, 2019, 3:00 AM IST
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಒಳಾಂಗಣದ ಕಾಣಿಕೆ ಹುಂಡಿಯಿಂದ ಕಳವು ಮಾಡುತ್ತಿದ್ದ ತುಮಕೂರು ಮೂಲದ ತಿಪಟೂರು ಅಶ್ವಿನ್ (20)ನನ್ನು ಶುಕ್ರವಾರ ಬಂಧಿಸಲಾಗಿದೆ.
ಗುರುವಾರ ರಾತ್ರಿ 9 ಗಂಟೆಗೆ ದೇಗುಲದ ಒಳಾಂಗಣದೊಳಗೆ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ವರ್ತಿಸುತ್ತಿರುವುದು ಕರ್ತವ್ಯ ನಿರತ ದೇಗುಲದ ಸಿಬ್ಬಂದಿ ಗಮನಕ್ಕೆ ಬಂತು.
ಆತ ಕುಕ್ಕೆಲಿಂಗ ಗುಡಿಯ ಎದುರಿನಲ್ಲಿ ಭಕ್ತರು ಹಾಕಿದ ಕಾಣಿಕೆಯನ್ನು ಹುಂಡಿಯ ಮೇಲ್ಭಾಗದಿಂದ ತೆಗೆದು ಜೇಬಲ್ಲಿ ತುಂಬಿಸಿಕೊಳ್ಳುತ್ತಿದ್ದ. ಇದೇ ರೀತಿ ಎಲ್ಲ ಕಾಣಿಕೆ ಹುಂಡಿಗಳಿಂದ ಕಳವು ಮಾಡುತ್ತಿದ್ದುದು ಸಿಸಿಟಿವಿ ದೃಶ್ಯದಿಂದ ತಿಳಿದು ಬಂತು.
ದೇಗುಲದ ಕಾರ್ಯ ನಿರ್ವಹಣಾಧಿಕಾರಿ ಎಂ.ಎಚ್.ರವೀಂದ್ರ ಅವರು ಸುಬ್ರಹ್ಮಣ್ಯ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ.
ವಿಚಾರಣೆ ವೇಳೆ ಆತ ಹುಂಡಿ ತುಂಬಿ ಮೇಲ್ಭಾಗದಲ್ಲಿ ಕಾಣುತ್ತಿದ್ದ ನೋಟುಗಳನ್ನು ತೆಗೆದಿರುವುದಾಗಿ ಒಪ್ಪಿಕೊಂಡಿದ್ದಾನೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ