ಮಧ್ಯವರ್ತಿ ಮನೆ ಮೇಲೆ ಎಸಿಬಿ ದಾಳಿ


Team Udayavani, May 18, 2019, 3:05 AM IST

ACB2

ಬೆಂಗಳೂರು: ಟಿಡಿಆರ್‌ (ವರ್ಗಾಯಿಸಬಹುದಾದ ಅಭಿವೃದ್ಧಿ ಹಕ್ಕುಗಳು) ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ “ಭ್ರಷ್ಟರ ಬೇಟೆ’ ಮುಂದುವರಿಸಿರುವ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಅಧಿಕಾರಿಗಳು, ಶುಕ್ರವಾರ ಹಗರಣದ ಏಜೆಂಟ್‌ಗಳು ಮತ್ತು ಬ್ಯಾಂಕ್‌ ನಡುವೆ ಮಧ್ಯವರ್ತಿಯಾಗಿ ಕೆಲಸ ಮಾಡುತ್ತಿದ್ದ ಕಾಟನ್‌ಪೇಟೆ ನಿವಾಸಿ ರಾಜೇಶ್‌ ಕುಮಾರ್‌ ಎಂಬಾತನ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಇದೇ ವೇಳೆ ಹಲಸೂರು ಗೇಟ್‌ ಪೊಲೀಸ್‌ ಠಾಣೆ ಸಮೀಪದಲ್ಲಿರುವ ಶ್ರೀ ಬನಶಂಕರಿ ಮಹಿಳಾ ಕೋ-ಆಪರೇಟಿವ್‌ ಬ್ಯಾಂಕ್‌ ಮೇಲಿನ ದಾಳಿಯನ್ನು ಶುಕ್ರವಾರವೂ ಮುಂದುವರಿಸಿದ್ದಾರೆ. ಎಸಿಬಿ ಎಸ್ಪಿ ಸಂಜೀವ್‌ ಪಾಟೀಲ್‌, ಡಿವೈಎಸ್‌ಪಿ ರವಿಕುಮಾರ್‌ ನೇತೃತ್ವದ ತಂಡ ರಾಜೇಶ್‌ ಕುಮಾರ್‌ ಮನೆ ಮೇಲೆ ದಾಳಿ ನಡೆಸಿ, ಡೈರಿಯೊಂದನ್ನು ವಶಕ್ಕೆ ಪಡೆದಿದೆ.

ಈ ಡೈರಿಯಲ್ಲಿ ಬಿಬಿಎಂಪಿಯ ಎಂಜಿನಿಯರ್‌ಗಳು ಮತ್ತು ಹಿರಿಯ, ಕಿರಿಯ ಅಧಿಕಾರಿಗಳ ಹೆಸರನ್ನು ನೊಂದಾಯಿಸಿದ್ದು, ಯಾರಿಗೆ ಎಷ್ಟು ಹಣ ಕೊಡಲಾಗಿದೆ? ಕೊಡಬೇಕಿದೆ? ಎಂಬೆಲ್ಲ ಮಾಹಿತಿಯನ್ನು ಆರೋಪಿ ನಮೂದಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಡೈರಿಯನ್ನು ವಶಕ್ಕೆ ಪಡೆದುಕೊಂಡಿದ್ದು, ಪರಿಶೀಲನೆ ನಡೆಯುತ್ತಿದೆ. ಪ್ರಾಥಮಿಕ ಮಾಹಿತಿ ಪ್ರಕಾರ 80 ಕೋಟಿ ರೂ.ಗೂ ಹೆಚ್ಚಿನ ಹಣದ ವಹಿವಾಟು ನಡೆದಿರುವುದು ಡೈರಿ ಮೂಲಕ ಪತ್ತೆಯಾಗಿದೆ ಎಂದು ಎಸಿಬಿ ಮೂಲಗಳು ತಿಳಿಸಿವೆ.

ಏಜೆಂಟ್‌-ಬ್ಯಾಂಕ್‌ಗೆ ಮಧ್ಯವರ್ತಿ: ಆರೋಪಿಯು ಸುಮಾರು ವರ್ಷಗಳಿಂದ ಟಿಡಿಆರ್‌ ಹಗರಣದ ಏಜೆಂಟ್‌ಗಳು ಹಾಗೂ ಶ್ರೀ ಬನಶಂಕರಿ ಮಹಿಳಾ ಕೋ-ಆಪರೇಟಿವ್‌ ಬ್ಯಾಂಕ್‌ ನಡುವೆ ಮಧ್ಯವರ್ತಿಯಾಗಿ ಕೆಲಸ ಮಾಡುತ್ತಿದ್ದ. ಆತ ಅನ್ಯ ವ್ಯಕ್ತಿಗಳ ಹೆಸರಿನಲ್ಲಿ ಖಾತೆಗಳನ್ನು ತೆರೆದು ಟಿಡಿಆರ್‌ಗೆ ಸಂಬಂಧಿಸಿದ ಚೆಕ್‌ಗಳನ್ನು ಹಾಕಿ ಹಣ ಡ್ರಾ ಮಾಡಿಕೊಡುತ್ತಿದ್ದ.

ಇದಕ್ಕೆ ಏಜೆಂಟ್‌ಗಳ ಮೂಲಕ ಇಂತಿಷ್ಟು ಕಮಿಷನ್‌ ಪಡೆಯುತ್ತಿದ್ದ. ಹೀಗಾಗಿ ಹಗರಣದಲ್ಲಿ ಬ್ಯಾಂಕ್‌ ಅಧಿಕಾರಿಗಳು ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಇದುವರೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ನಿರ್ದಿಷ್ಟ ಬ್ಯಾಂಕ್‌ನಿಂದ ಹಣ ವರ್ಗಾವಣೆಯಾದ ದಾಖಲೆಗಳನ್ನು ಜಪ್ತಿ ಮಾಡಿ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಎಸಿಬಿ ಅಧಿಕಾರಿಯೊಬ್ಬರು ಹೇಳಿದರು.

ಹಾಗೇ ಶ್ರೀಬನಶಂಕರಿ ಮಹಿಳಾ ಕೋ-ಆಪರೇಟಿವ್‌ ಬ್ಯಾಂಕ್‌ನಲ್ಲಿ ಭದ್ರತೆಗಾಗಿ ಇಡಲಾಗಿದ್ದ ಕೆಲ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿ ವಿವರಿಸಿದರು.

ಟಾಪ್ ನ್ಯೂಸ್

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.