ಗೋಡ್ಸೆ ಹೇಳಿಕೆಗೆ ನೋಟಿಸ್‌

ಸಾಧ್ವಿ ಪ್ರಜ್ಞಾ, ಹೆಗಡೆ, ಕಟೀಲ್ ವಿರುದ್ಧ ಶಾ ಗರಂ

Team Udayavani, May 18, 2019, 6:00 AM IST

18

ನವದೆಹಲಿ: ನಾಥೂರಾಂ ಗೋಡ್ಸೆ ಕುರಿತು ಬಿಜೆಪಿಯ ವಿವಿಧ ನಾಯಕರು ನೀಡುತ್ತಿರುವ ಹೇಳಿಕೆಗಳು ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ. ಗೋಡ್ಸೆಯನ್ನು ದೇಶಭಕ್ತ ಎಂದು ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್‌ ಸಂಭೋದಿಸಿದ ಬೆನ್ನಲ್ಲೇ ಕರ್ನಾಟಕದ ಇಬ್ಬರು ಬಿಜೆಪಿ ನಾಯಕರು ಗೋಡ್ಸೆ ಪರ ಟ್ವೀಟ್ ಮಾಡಿ ವಿವಾದಕ್ಕೀಡಾಗಿದ್ದಾರೆ. ಕೇಂದ್ರ ಸಚಿವ ಅನಂತ್‌ಕುಮಾರ್‌ ಹೆಗಡೆ ಹಾಗೂ ಸಂಸದ ನಳಿನ್‌ ಕುಮಾರ್‌ ಕಟೀಲ್ ವಿವಾದಾತ್ಮಕ ಟ್ವೀಟ್ ಮಾಡಿದ್ದು, ಬಿಜೆಪಿ ನಾಯಕತ್ವಕ್ಕೆ ಇರುಸು ಮುರುಸು ಉಂಟುಮಾಡಿದೆ. ಮೂರೂ ನಾಯಕರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಶುಕ್ರವಾರ ಸಾಧ್ವಿ, ಹೆಗಡೆ ಹಾಗೂ ಕಟೀಲ್ಗೆ ನೋಟಿಸ್‌ ಜಾರಿ ಮಾಡಿ, 10 ದಿನಗಳೊಳಗಾಗಿ ಪಕ್ಷದ ಶಿಸ್ತು ಸಮಿತಿಗೆ ವಿವರಣೆ ನೀಡುವಂತೆ ಖಡಕ್‌ ಸೂಚನೆ ನೀಡಿದ್ದಾರೆ. ಜತೆಗೆ, ನಿಮ್ಮ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬಾರದೇಕೆ ಎಂದೂ ಪ್ರಶ್ನಿಸಿದ್ದಾರೆ.

ವಕ್ತಾರ ಅಮಾನತು: ಈ ಬೆಳವಣಿಗೆಗಳ ನಡುವೆಯೇ ಮಧ್ಯಪ್ರದೇಶದ ಬಿಜೆಪಿ ವಕ್ತಾರ ಅನಿಲ್ ಸೌಮಿತ್ರಾ, ಫೇಸ್‌ಬುಕ್‌ನಲ್ಲಿ ಗಾಂಧೀಜಿ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್‌ ಮಾಡಿದ್ದಲ್ಲದೆ, ಅವರನ್ನು ‘ಪಾಕಿಸ್ತಾನದ ರಾಷ್ಟ್ರಪಿತ’ ಎಂದು ಕರೆದಿದ್ದಾರೆ. ಈ ವಿಚಾರ ಬಹಿರಂಗವಾಗುತ್ತಿದ್ದಂತೆ, ಸೌಮಿತ್ರಾರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡಿ ರಾಜ್ಯ ಬಿಜೆಪಿ ಅಧ್ಯಕ್ಷ ರಾಕೇಶ್‌ ಸಿಂಗ್‌ ಆದೇಶ ಹೊರಡಿಸಿದ್ದಾರೆ.

ಕಟೀಲ್, ಹೆಗಡೆ ಹೇಳಿದ್ದೇನು?: ಗೋಡ್ಸೆಯನ್ನು ಮಾಜಿ ಪ್ರಧಾನಿ ರಾಜೀವ್‌ಗಾಂಧಿಗೆ ಹೋಲಿಸಿ ಟ್ವೀಟ್ ಮಾಡಿರುವ ಸಂಸದ ನಳಿನ್‌ ಕುಮಾರ್‌ ಕಟೀಲ್, ‘ಗೋಡ್ಸೆ ಒಬ್ಬರನ್ನು ಕೊಂದರೆ, ಕಸಬ್‌ 72 ಮಂದಿಯನ್ನು ಕೊಂದರೆ, ರಾಜೀವ್‌ ಗಾಂಧಿ 17 ಸಾವಿರ ಮಂದಿಯನ್ನು ಕೊಂದರು. ಈ ಮೂವರಲ್ಲಿ ಹೆಚ್ಚು ಕ್ರೂರಿ ಯಾರು ಎಂದು ನೀವೇ ನಿರ್ಧರಿಸಿ’ ಎಂದು ಬರೆದಿದ್ದಾರೆ. ಇನ್ನು ಸಚಿವ ಅನಂತ್‌ಕುಮಾರ್‌ ಹೆಗಡೆ, ‘7 ದಶಕಗಳ ಬಳಿಕ ಇಂದಿನ ತಲೆಮಾರು ಬದಲಾದ ಪರಿಕಲ್ಪನೆಯಲ್ಲಿ ಚರ್ಚೆ ನಡೆಸುವ ಅವಕಾಶ ಪಡೆದಿರುವುದು ಖುಷಿಯ ಸಂಗತಿ. ನಾಥೂರಾಂ ಗೋಡ್ಸೆ ಕೊನೆಗೂ ಈ ಚರ್ಚೆಯಿಂದ ಸಂತೋಷಗೊಂಡಿರಬಹುದು’ ಎಂದು ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

1-qweewq

IPL ಇಂದು ಲೀಗ್‌ ಪಂದ್ಯಗಳಿಗೆ ತೆರೆ: KKR vs RR ಟೇಬಲ್‌ ಟಾಪರ್‌ಗಳ ಸೆಣಸಾಟ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Revant Reddy

TG; ತೆಲಂಗಾಣದ ಸಂಕ್ಷಿಪ್ತ ರೂಪ ಇನ್ನು ಮುಂದೆ ‘ಟಿಎಸ್‌’ ಅಲ್ಲ!

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Amit Shah 2

UP ಯಲ್ಲಿ ದೇಸಿ ಪಿಸ್ತೂಲ್‌ ಬದಲು ಸೇನೆ ಶಸ್ತ್ರಾಸ್ತ್ರ ತಯಾರಿಕೆ: ಅಮಿತ್‌ ಶಾ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.