ತೆಕ್ಕಟ್ಟೆ: ಐಟಿ ಎಂಜಿನಿಯರ್ ನೀರುಪಾಲು
Team Udayavani, May 18, 2019, 6:00 AM IST
ತೆಕ್ಕಟ್ಟೆ: ಇಲ್ಲಿನ ಕೊಮೆ ಪರಿಸರದಲ್ಲಿ ಸಮುದ್ರದಲ್ಲಿ ಆಟವಾಡುತ್ತಾ ಅಪಾಯಕ್ಕೆ ಸಿಲುಕಿದ್ದ ಬೆಂಗಳೂರು ಮೂಲದ ಮೂವರು ಸಾಫ್ಟ್ವೇರ್ ಎಂಜಿನಿಯರ್ಗಳ ಪೈಕಿ ಓರ್ವ ಸಾವಿಗೀಡಾಗಿದ್ದು, ಮತ್ತಿಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಬೆಂಗಳೂರಿನ ಸಿಂಗಲ್ ಚಿಪ್ ಸಾಫ್ಟ್ವೇರ್ ಖಾಸಗಿ ಕಂಪೆನಿಯ ಸಾಫ್ಟ್ವೇರ್ ಎಂಜಿನಿಯರ್ ಸುಜಿತ್ (26) ಮೃತಪಟ್ಟವರು. ಇವರು ಜಯನಗರದ ನಾಗರಾಜ್ ಅವರು ಏಕೈಕ ಪುತ್ರರಾಗಿದ್ದರು. ಅವರ ಗೆಳೆಯರಾದ ಸುಕೃತ್ (25) ಮತ್ತು ಅಕ್ಷಯ್ (25)ನನ್ನು ರಕ್ಷಿಸಲಾಗಿದೆ. ಶುಕ್ರವಾರ ಸಂಜೆ 4.30ರ ಸುಮಾರಿಗೆ ಘಟನೆ ಸಂಭವಿಸಿದೆ.
ಘಟನೆ ವಿವರ
ಸುಮಾರು 15 ಮಂದಿಯ ತಂಡ ಮಂಜೇಶ್ವರದಲ್ಲಿ ಸ್ನೇಹಿತನ ಮದುವೆ ಸಮಾರಂಭ ಮುಗಿಸಿ, ತೆಕ್ಕಟ್ಟೆ ಕೊಮೆ ಕಡಲ ತೀರದಲ್ಲಿರುವ ಬೀಚ್ ವೇವ್ಸ್ ರೆಸಾರ್ಟ್ನಲ್ಲಿ ತಂಗಲು ಬಂದಿತ್ತು. ಅಲ್ಲಿ ನೀರಿನಲ್ಲಿ ಚೆಂಡಾಟವಾಡುತ್ತಿದ್ದರು. ಆಗ ಸಮೀಪದಲ್ಲಿದ್ದ ಮೀನು ಗಾರ ರವಿ ಬಂಗೇರ ಅವರು ನೀರಿನ ಅಬ್ಬರ ಹೆಚ್ಚಾಗಿದೆ ಜಾಗೃತರಾಗಿ ಎಂದು ಎಚ್ಚರಿಸಿದ್ದರು. ಆದರೆ ಅದನ್ನು ಕಡೆಗಣಿಸಿ ಆಟ ಮುಂದುವರಿಸಿದ್ದು ದುರಂತಕ್ಕೆ ಕಾರಣವೆನ್ನಲಾಗಿದೆ.
ಸ್ಥಳೀಯರಿಂದ ತುರ್ತು ಸಹಾಯ
ಘಟನೆ ಸಂಭವಿಸುತ್ತಿದ್ದಂತೆ ಸ್ಥಳೀಯರು ರಕ್ಷಣೆಗೆ ಮುಂದಾ ದರು. ಸುಜಿತ್ ಅಲೆಗಳ ಮಧ್ಯದಲ್ಲಿ ತೇಲುತ್ತಿರುವುದನ್ನು ಕಂಡ ಮಹಾಬಲ ಬಂಗೇರ, ಗಣೇಶ್ ಪೂಜಾರಿ, ಸಂತೋಷ್, ನಾಗರಾಜ್ ಸಂದೀಪ್, ವಿಜಯ, ಸಂಪತ್ , ರಾಘವೇಂದ್ರ ಹರಪನಕೆರೆ ಹಾಗೂ ಉಮೇಶ್ ಮೆಂಡನ್ಅವರು ಥರ್ಮೋಕಾಲ್ ಹಾಗೂ ಹಗ್ಗಗಳ ಸಹಾಯದಿಂದ ತೀರಕ್ಕೆ ತಂದು ಪ್ರಥಮ ಚಿಕಿತ್ಸೆ ನೀಡಿದರು. ಆದರೆ ಸ್ಥಿತಿ ಗಂಭೀರವಾಗಿದ್ದರಿಂದ ಜೀವ ಉಳಿಸಲಾಗಲಿಲ್ಲ. ಸುದ್ದಿ ಕೇಳಿ ಅಪಾರ ಸಂಖ್ಯೆಯ ಜನರು ಸ್ಥಳದಲ್ಲಿ ನೆರೆದಿದ್ದರು. ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮನ ಕಲುಕಿದ ದೃಶ್ಯ
ಸುಜಿತ್ನನ್ನು ಸ್ಥಳೀಯರು ತೀರಕ್ಕೆ ತರುತ್ತಿದ್ದಂತೆ ಜತೆಯಲ್ಲಿದ್ದ ಸ್ನೇಹಿತರು ಆತನ ಜೀವ ರಕ್ಷಣೆಗೆ ಹೆಣಗಾಡುತ್ತಿದ್ದ ಹಾಗೂ ಆಸ್ಪತ್ರೆಗೆ ಸಾಗಿಸಲು ಸುಮಾರು ಅರ್ಧ ಕಿಲೋ ಮೀಟರ್ ವರೆಗೆ ಕಡಲ ತೀರದಲ್ಲೇ ಹೊತ್ತೂಯ್ಯುತ್ತಿದ್ದ ದೃಶ್ಯ ಮನಕಲಕುತ್ತಿತ್ತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ
Kundapura ಕಾರು ಡಿವೈಡರ್ ಏರಿ ಪಲ್ಟಿ; ಮೂವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ