ಬಾಗಿಲು ಮುಚ್ಚಿದ ಕುಡಿವ ನೀರಿನ ಘಟಕಗಳು

•ನಿರ್ವಹಣೆ ನಿರ್ಲಕ್ಷ್ಯ •ಸ್ಥಗಿತಗೊಂಡಿವೆ ಐದು ಘಟಕಗಳು •ಸಾರ್ವಜನಿಕರಿಗೆ ಈಗ ಶುದ್ಧ ನೀರು ಮರೀಚಿಕೆ

Team Udayavani, May 18, 2019, 11:04 AM IST

bagalkote-tdy-4..

ಅಮೀನಗಡ: ಎರಡು ವರ್ಷದಿಂದ ಸ್ಥಗಿತಗೊಂಡ ಪಟ್ಟಣದ 16ನೇ ವಾರ್ಡ್‌ನ ಶುದ್ಧ ಕುಡಿಯುವ ನೀರಿನ ಘಟಕ.

ಅಮೀನಗಡ: ಪಪಂ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಸದಸ್ಯರ ತಾತ್ಸಾರದಿಂದ ಪಟ್ಟಣದ ಐದು ಶುದ್ಧ ಕುಡಿಯುವ ನೀರಿನ ಘಟಕಗಳು ನಿರ್ವಹಣೆಯಿಲ್ಲದೆ ಬಾಗಿಲು ಮುಚ್ಚಿವೆ.

ಪಟ್ಟಣದ 16ನೇ ವಾರ್ಡ್‌ನ ಚಿತ್ತರಗಿ ಕ್ರಾಸ್‌ ಹತ್ತಿರವಿರುವ ಪಪಂ ಅನುದಾನದಡಿಯಲ್ಲಿ ಲಕ್ಷಾಂತರ ರೂ ಖರ್ಚು ಮಾಡಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಎರಡೂವರೆ ವರ್ಷಗಳ ಹಿಂದೆ ಸ್ಥಾಪಿಸಲಾಗಿತ್ತು. ಆರಂಭದಲ್ಲಿ ಈ ಘಟಕ ಉತ್ತಮವಾಗಿಯೇ ನಡೆಯುತ್ತಿತ್ತು. ಆದರೆ ಪಪಂ ಅಧಿಕಾರಗಳ ನಿರ್ಲಕ್ಷ್ಯ ಹಾಗೂ ಸದಸ್ಯರುಗಳ ತಾತ್ಸಾರದಿಂದ ಸ್ಥಗಿತಗೊಂಡಿದ್ದು, ವಾರ್ಡ್‌ಗಳ ಜನತೆ ಕುಡಿಯುವ ನೀರಿಗಾಗಿ ಬೇರೆ ವಾರ್ಡ್‌ಗಳಿಗೆ ಅಲೆಯುವ ಪರಿಸ್ಥಿತಿ ಎದುರಾಗಿದೆ.

ಪಟ್ಟಣದ 8 ಮತ್ತು 16ನೇ ವಾರ್ಡ್‌ಗಳ ಸೆಂಟರ್‌ ಪಾಯಿಂಟ್ ಗುರುತಿಸಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿತ್ತು. ಎರಡು ವಾರ್ಡ್‌ಗಳ ಜನರಿಗೆ ಈ ಘಟಕ ಬಹಳ ಅನುಕೂಲವಾಗಿತ್ತು. ಈ ಘಟಕ ಕೆಟ್ಟಿರುವುದರಿಂದ ಎರಡೂ ವಾರ್ಡ್‌ನ ನೂರಾರು ಜನರಿಗೆ ತೀವ್ರ ತೊಂದರೆಯಾಗಿದೆ.

ಘಟಕ ಬಂದಾಗಲು ಕಾರಣವೇನು? ಘಟಕ ಸ್ಥಾಪನೆ ಮಾಡುವಾಗಲೇ ಗುಣಮಟ್ಟದ ಸಾಮಾನುಗಳನ್ನು ಬಳಸಿಲ್ಲ. ವಾರ್ಡ್‌ನ ಜನತೆಗೆ ಉಪಯುಕ್ತವಾಗಲಿ ಎಂಬ ಉದ್ದೇಶದಿಂದ ಆರಂಭಗೊಂಡಿದ್ದ ಶುದ್ಧ ಕುಡಿಯುವ ನೀರಿನ ಘಟಕ ಆರಂಭದಿಂದಲೇ ಸರಿಯಾಗಿ ನಿರ್ವಹಣೆಯಾಗಲಿಲ್ಲ. ಈ ಘಟಕದ ಬಗ್ಗೆ ಪಪಂ ಎಂಜಿನಿಯರ್‌ ಮತ್ತು ಅಧಿಕಾರಿಗಳು ಮತ್ತು ಸದಸ್ಯರು ಸರಿಯಾಗಿ ಗಮನ ನೀಡದೇ ನಿರ್ಲಕ್ಷ್ಯ ಮಾಡಿದ್ದರಿಂದ ಶುದ್ಧ ಕುಡಿಯುವ ನೀರಿನ ಘಟಕ ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿದೆ.

ಪಟ್ಟಣದಲ್ಲಿರುವ ಒಟ್ಟು ಆರು ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಕೇವಲ ಒಂದು ಮಾತ್ರ ಕಾರ್ಯ ನಿರ್ವಹಣೆ ಮಾಡುತ್ತಿದೆ. ಐದು ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತಗೊಂಡಿದೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಪಟ್ಟಣದ ಪತ್ರಿಕಟ್ಟಿ ಹತ್ತಿರದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಕಾರ್ಯ ನಿರ್ವಹಣೆ ಮಾಡುತ್ತಿದೆ. ಉಳಿದ 5ನೇ ವಾರ್ಡ್‌ನಲ್ಲಿರುವ ಘಟಕ ಇನ್ನೂ ಆರಂಭವಾಗಿಲ್ಲ. 16ನೇ ವಾರ್ಡ್‌ನ ಸಂಗಮ ಕ್ರಾಸ್‌ದಲ್ಲಿರುವ ಘಟಕಗಳು ಎರಡು ವರ್ಷದಿಂದ ಸ್ಥಗಿತಗೊಂಡಿದೆ. ಚಾಲುಕ್ಯ ಡಾಬಾ ಹತ್ತಿರವಿರುವ ಘಟಕ ಮತ್ತು ಮೂರನೇ ವಾರ್ಡ್‌ನ ನೀರಿನ ಘಟಕದಲ್ಲಿ ಮೆಮರಿಯನ್‌ ಕೆಟ್ಟು ನಿಂತಿದೆ. ಇದರಿಂದ ಶುದ್ಧ ಕುಡಿಯುವ ನೀರಿನ ಘಟಕವನ್ನೇ ನಂಬಿರುವ ಸಾವಿರಾರು ಕುಟುಂಬಗಳಿಗೆ ತೊಂದರೆಯಾಗಿದೆ.

ಶುದ್ಧ ಕುಡಿಯುವ ನೀರಿನ ಘಟಕದ ನಿರ್ವಹಣೆ ಮಾಡುವ ಟೆಂಡರ್‌ ಮುಗಿದಿದ್ದು, ಈ ಹಿಂದೆ ಟೆಂಡರ್‌ ನಿರ್ವಹಣೆ ಮಾಡುತ್ತಿದ್ದ ಗುತ್ತಿಗೆದಾರನಿಗೆ ತಾತ್ಕಾಲಿಕವಾಗಿ ನಿರ್ವಹಣೆ ಮಾಡಲು ನೀಡಿದ್ದಾರೆ. ಆದರೆ, ಗುತ್ತಿಗೆದಾರನಿಗೆ ಪಟ್ಟಣ ಪಂಚಾಯಿತಿ ಅಗತ್ಯ ಸಾಮಗ್ರಿ ಪೂರೈಸದ ಕಾರಣ ಅವೆಲ್ಲ ಸರಿಯಾಗಿ ನಿರ್ವಹಣೆಯಾಗಿಲ್ಲ ಎಂಬ ಮಾತು ಕೇಳಿ ಬಂದಿದೆ.

ಪಟ್ಟಣದಲ್ಲಿರುವ ಆರು ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಕೇವಲ ಒಂದು ಮಾತ್ರ ಚಾಲ್ತಿಯಲ್ಲಿದೆ. 16ನೇ ವಾರ್ಡ್‌ನ ಘಟಕ ಸುಮಾರು ಎರಡು ವರ್ಷದಿಂದ ಸ್ಥಗಿತಗೊಂಡಿದೆ. ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಸದಸ್ಯರ, ಅಧಿಕಾರಿಗಳ ಗಮನಕ್ಕೆ ತಂದರೂ ಸ್ಪಂದಿಸುತ್ತಿಲ್ಲ. ಬರದಿಂದ ವಾರಕೊಮ್ಮೆ ನೀರು ಬರುತ್ತದೆ. ಶುದ್ಧ ಕುಡಿಯುವ ನೀರಿನ ಘಟಕ ಕೂಡಾ ಸ್ಥಗಿತಗೊಂಡಿದ್ದರಿಂದ ಸಾರ್ವಜನಿಕರು ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಹಿರಿಯ ಅಧಿಕಾರಿಗಳು ಸಮಸ್ಯೆ ಬಗೆಹರಿಸಬೇಕು.-ನಿಜಾಮುದ್ದಿನ್‌ ಖಾದ್ರಿ, ಯುವ ಮುಖಂಡರು, ಅಮೀನಗಡ

•ಎಚ್.ಎಚ್.ಬೇಪಾರಿ

ಟಾಪ್ ನ್ಯೂಸ್

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

3-mahalingapur

Mahalingpur: ತೆರಬಂಡಿ ಸ್ಪರ್ಧೆಯ ಹೋರಿ ದಾಖಲೆಯ 10.10 ಲಕ್ಷಕ್ಕೆ ಖರೀದಿಸಿದ ರೈತ

1-qweqwewqe

Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.