ಜಿಪಂ ಅಧ್ಯಕ್ಷೆ ಐಹೊಳೆ ಪತಿ ಬಂಧನ
Team Udayavani, May 18, 2019, 11:46 AM IST
ಬೆಳಗಾವಿ: ನಿವೇಶನ ಕೊಡುವುದಾಗಿ ಹೇಳಿ 2 ಲಕ್ಷ ರೂ. ಸಂಗ್ರಹ ಮಾಡಿ ವಂಚಿಸಿದ ಆರೋಪದ ಮೇರೆಗೆ ಜಿಲ್ಲಾ ಪಂಚಾಯತ ಅಧ್ಯಕ್ಷೆಯ ಪತಿ ಪ್ರಶಾಂತ ಐಹೊಳೆ ಅವರನ್ನು ಅಥಣಿ ಪೊಲೀಸರು ಶುಕ್ರವಾರ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಅಥಣಿ ಪಟ್ಟಣದ ಸಂಜಯ ಸಂಕಪಾಲಕರ ನೀಡಿದ ದೂರಿನ ಮೇರೆಗೆ ಪ್ರಶಾಂತ ಐಹೊಳೆ ವಿರುದ್ಧ ಐಪಿಸಿ ಸೆಕ್ಷನ್ 406, 420 ಹಾಗೂ 506 ಕಲಂ ಅಡಿ ಪ್ರಕರಣ ದಾಖಲಾಗಿತ್ತು.
ಆರೋಪಿ ಪ್ರಶಾಂತ ಐಹೊಳೆ ಮಹಾಲಕ್ಷ್ಮೀ ಎಸ್ಟೇಟ್ ಹೆಸರಿನಲ್ಲಿ ನಿವೇಶನ ಕೊಡುವುದಾಗಿ ಹೇಳಿ 2 ಲಕ್ಷ ರೂ. ಪಡೆದುಕೊಂಡಿದ್ದ. ಆದರೆ ನಿವೇಶನ ಕೊಡದೇ ತಮಗೆ ವಂಚಿಸಿದ್ದಾರೆ ಎಂದು ದೂರುದಾರ ಸಂಜಯ ಸಂಕಪಾಲಕರ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಅಥಣಿ ಪೊಲೀಸರು ದಾಖಲೆಗಳ ಆಧಾರದ ಮೇಲೆ ಪ್ರಶಾಂತ ಐಹೊಳೆ ಬಂಧಿಸಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ ಎಂದು ಎಸ್ಪಿ ಸುಧೀರಕುಮಾರ ರೆಡ್ಡಿ ತಿಳಿಸಿದ್ದಾರೆ. ಅಥಣಿಯಲ್ಲಿ ಶ್ರೀ ಮಹಾಲಕ್ಷ್ಮೀ ಟ್ರೇಡ್ ಡಿಸ್ಟ್ರಿಬ್ಯುಷನ್ ಪ್ರೈ.ಲಿ. ಎಂಬ ಕಂಪನಿ ಹೆಸರಿನಲ್ಲಿ ಠೇವಣಿ ಇಟ್ಟುಕೊಂಡು ವಾಪಸ್ಸು ನೀಡದೇ ವಂಚನೆ ಮಾಡಿರುವ ಬಗ್ಗೆಯೂ ಮೇ 6ರಂದು ಪ್ರಶಾಂತ ಐಹೊಳೆ ಹಾಗೂ ಪತ್ನಿ ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ ವಿರುದ್ಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 2011ರಲ್ಲಿ 50 ಸಾವಿರ ರೂ. ಠೇವಣಿ ಇಟ್ಟುಕೊಂಡು ನಂತರ ಆ ಮೊತ್ತವನ್ನು ವಾಪಸು ನೀಡದೇ ಠೇವಣಿದಾರರಾದ ಕಾಗವಾಡ ತಾಲೂಕಿನ ಉಗಾರ ಬಿ.ಕೆ. ಗ್ರಾಮದ ಧರೆಪ್ಪ ಸತ್ಯಪ್ಪ ಕುಸನಾಳೆ ಹಾಗೂ ದಾದಾ ಧರೆಪ್ಪ ಕುಸನಾಳೆ ಅವರಿಗೆ ವಂಚಿಸಿರುವ ಬಗ್ಗೆ ದೂರು ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್