ಕೃಷ್ಣೆಗೆ ನೀರು ಹರಿಸದಿದ್ದರೆ ಸೋಮವಾರ ಅಥಣಿ ಬಂದ್‌


Team Udayavani, May 18, 2019, 12:15 PM IST

belegavi-tdy-5..

ಅಥಣಿ: ಪಟ್ಟಣದ ಪಿ.ಡಬ್ಲ್ಯು.ಡಿ ಕಚೇರಿಯ ಆವರಣದಲ್ಲಿ ಕೃಷ್ಣೆಗೆ ನೀರು ಹರಿಸುವಂತೆ ಒತ್ತಾಯಿಸಿ ನಡೆದ ತುರ್ತು ಸಭೆಯಲ್ಲಿ ಅಥಣಿ ಪಟ್ಟಣದ ಕರವೇ ಮತ್ತು ಪತ್ರಕರ್ತರ ಸಂಘ ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

ಅಥಣಿ: ಕೃಷ್ಣಾ ನದಿಗೆ ನೀರು ಹರಿಸುವಂತೆ ಒತ್ತಾಯಿಸಿ ಸ್ಥಳೀಯ ಪಿ.ಡಬ್ಲ್ಯು.ಡಿ ಕಾರ್ಯಾಲಯದಲ್ಲಿ ಶುಕ್ರವಾರ ಸಾಯಂಕಾಲ ಪಕ್ಷಾತೀತವಾಗಿ ನಡೆದ ಹೋರಾಟದ ರೂಪು ರೇಷೆ ನಿರ್ಧರಿಸುವ ತುರ್ತು ಸಭೆಯಲ್ಲಿ ಪಟ್ಟಣದ ಗಣ್ಯರು ಪಾಲ್ಗೊಂಡು ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಪಾಲ್ಗೊಂಡ ಗಣ್ಯರು ಒಗ್ಗಟ್ಟಾಗಿ ಸೋಮವಾರ ಅಥಣಿ ಬಂದ್‌ಗೆ ಕರೆ ನೀಡುವುದಾಗಿ ಒಕ್ಕೊರಲಿನಿಂದ ಠರಾವು ಪಾಸು ಮಾಡಿದರು. ಸರ್ಕಾರಕ್ಕೆ ಬಿಸಿ ಮುಟ್ಟಿಸುವ ನಿಟ್ಟಿನಲ್ಲಿ ಸ್ಥಳೀಯ ಎಲ್ಲ ಪ್ರತಿನಿಧಿಗಳು ಕೂಡ ತಮ್ಮ ರಾಜೀನಾಮೆ ನೀಡುವಂತೆ ಕೋರಲಾಯಿತಲ್ಲದೇ, ತಾತ್ಕಾಲಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರದತ್ತ ಗಮನ ಹರಿಸುವಂತೆ ಸೂಚಿಸಲಾಯಿತು.

ಈ ವೇಳೆ ಸ್ಥಳೀಯ ಕರವೇ ಅಧ್ಯಕ್ಷ ಬಸನಗೌಡ ಪಾಟೀಲ ಮಾತನಾಡಿ, ಕಳೆದ ಒಂದು ದಶಕದಲ್ಲಿ ಕೃಷ್ಣೆಯ ಒಡಲು ಎಂದಿಗೂ ಬರಿದಾಗಿರಲಿಲ್ಲ, ಈ ಸರ್ಕಾರದ ಕಾಲಾವಧಿಯಲ್ಲಿ ಮಾತ್ರ ಇಂತಹ ಪರಿಸ್ಥಿತಿ ಉದ್ಭವವಾಗಿದ್ದು, ಕೂಡಲೇ ಕ್ರಮ ಜರುಗಿಸದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದ ಅವರು, ನಮ್ಮ ಹೋರಾಟದಲ್ಲಿ ಕೃಷ್ಣಾ ನದಿ ತೀರದ ಸಂಸದರು, ಶಾಸಕರು ಮತ್ತು ನದಿ ತೀರದ ಸುಮಾರು 800 ಗ್ರಾಮಗಳ ಸಾರ್ವಜನಿಕರು ಪಾಲ್ಗೊಳ್ಳುವಂತೆ ವಿನಂತಿಸಿದರು.

ಈ ವೇಳೆ ವಕೀಲರ ಸಂಘದ ಪದಾಧಿಕಾರಿ ಸುನೀಲ ಸಂಕ ಮಾತನಾಡಿ, ರಾಜಕೀಯ ಮುಖಂಡರು ಕೇವಲ ಕಾಲಹರಣ ಮಾಡುತ್ತಿದ್ದಾರೆ. ಯಾವುದೇ ಪಕ್ಷದ ಮುಖಂಡರುಗಳು ಶಾಶ್ವತ ಪರಿಹಾರಕ್ಕಾಗಿ ಯೋಚಿಸುತ್ತಿಲ್ಲ. ನದಿ ತೀರ ಸೇರಿದಂತೆ ತಾಲೂಕಿನ ಸಾರ್ವಜನಿಕರು ನೀರಿಗಾಗಿ ಸಂಕಷ್ಟ ಎದುರಿಸುತ್ತಿರುವುದು ದುರದೃಷ್ಟವೇ ಸರಿ ಎಂದು ಖೇದ ವ್ಯಕ್ತ ಪಡಿಸಿದರು.

ಪತ್ರಕರ್ತರ ಸಂಘದ ಅಧ್ಯಕ್ಷ ವಿಜಯಕುಮಾರ ಅಡಹಳ್ಳಿ ಮಾತನಾಡಿ, ಸಾರ್ವಜನಿಕರು ಜಾತ್ಯತೀತ ಮತ್ತು ಪಕ್ಷಾತೀತವಾಗಿ ನಡೆಯುತ್ತಿರುವ ಈ ಹೋರಾಟಕ್ಕೆ ತಮ್ಮ ಬೆಂಬಲ ವ್ಯಕ್ತ ಪಡಿಸಿ ಕೃಷ್ಣೆಗೆ ನೀರು ಹರಿಸಲು ಅನುವು ಮಾಡಿಕೊಡುವಂತೆ ವಿನಂತಿಸಿದರು.

ಈ ವೇಳೆ ಮಲ್ಲಿಕಾರ್ಜುನ ಕನಶೆಟ್ಟಿ, ರಮೇಶ ಸಿಂದಗಿ, ಸಿದ್ಧಾರ್ಥ ಶಿಂಗೆ, ರಾಜೇಂದ್ರ ಐಹೊಳೆ, ಪ್ರಶಾಂತ ತೋಡಕರ, ಮಹಾದೇವ ಮಡಿವಾಳ, ರಾಜು ಗಾಲಿ, ವೆಂಕಟೇಶ ದೇಶಪಾಂಡೆ, ಸುಭಾಷ ಕಾಂಬಳೆ, ದೀಪಕ ಶಿಂಧೆ, ರಮೇಶ ಬಾದವಾಡಗಿ, ರಾಕೇಶ ಮೈಗೂರ, ಪ್ರಶಾಂತ ನಂದೇಶ್ವರ, ವಿನಯ ಪಾಟೀಲ, ಸುನೀಲ ನಾಯಿಕ, ಅನಿಲ ಸೌದಾಗರ, ಚಿದಾನಂದ ಶೇಗುಣಸಿ, ಸಂಜೀವ ಕಾಂಬಳೆ ಇದ್ದರು.

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.