ಅರಳಿಕೆರೆ ಪುನಶ್ಚೇತನಗೊಂಡರೆ ನೀರಿಗೆ ಬರವಿಲ್ಲ…!


Team Udayavani, May 19, 2019, 6:20 AM IST

aralikere

ಹೆಮ್ಮಾಡಿ: ಇಲ್ಲಿನ ಗ್ರಾ.ಪಂ. ವ್ಯಾಪ್ತಿಯ ಕಟ್ಟುವಿನಲ್ಲಿರುವ ಅರಳಿಕೆರೆಯ ಹೂಳೆತ್ತದೇ ಹಲವು ವರ್ಷಗಳೇ ಆಗಿರುವುದರಿಂದ ಈಗ ಈ ಕೆರೆ ನೀರಿಲ್ಲದೆ ಬತ್ತಿ ಹೋಗಿದೆ. ಪಂಚಾಯತ್‌ ಈ ಬಾರಿಯಾದರೂ ಪುನಶ್ಚೇತನಗೊಳಿಸಿದಲ್ಲಿ, ಮುಂದಿನ ವರ್ಷಕ್ಕಾದರೂ ಇದರ ಪ್ರಯೋಜನ ಆಗಬಹುದು ಎನ್ನುವುದು ಈ ಭಾಗದ ರೈತರ ಅಭಿಪ್ರಾಯ.

ಹೆಮ್ಮಾಡಿ ಗ್ರಾಮದ ಕಟ್ಟುವಿನಲ್ಲಿರುವ ಈ ಅರಳಿಕೆರೆ ಇಲ್ಲಿನ ಸುಮಾರು 60- 70ಕ್ಕೂ ಹೆಚ್ಚಿನ ರೈತರ ಕೃಷಿ ಚಟುವಟಿಕೆಗಳಿಗೆ ನೀರುಣಿಸುತ್ತಿತ್ತು. ಆದರೆ ಈ ಬಾರಿ ಜನವರಿ- ಫೆಬ್ರವರಿಯಲ್ಲೇ ನೀರಿಲ್ಲದೆ ಬರಿದಾಗಿದೆ.

ಸುಮಾರು 15ರಿಂದ 20 ಎಕ್ರೆ ಕೃಷಿ ಪ್ರದೇಶಕ್ಕೆ ಈ ಕೆರೆಯೇ ವರದಾನ. ಆದರೆ ಕಳೆದ ಹಲವು ವರ್ಷಗಳಿಂದ ಈ ಕೆರೆಯ ಹೂಳೆತ್ತದ ಕಾರಣ, ಈಗ ಬತ್ತಿಯಾಗಿದೆ.

ಪುನಶ್ಚೇತನಕ್ಕೆ ಆಗ್ರಹ
ಕಟ್ಟುವಿನಲ್ಲಿ ತೋಟ, ಸೇವಂತಿಗೆ, ಇನ್ನಿತರ ತರಕಾರಿ ಕೃಷಿಗೆ ಇದೇ ಕೆರೆಯ ನೀರು ಆಧಾರವಾಗಿತ್ತು. ಇದನ್ನೇ ನಂಬಿಕೊಂಡು ಅನೇಕ ರೈತರು ಕೃಷಿಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಈ ಕೆರೆಯ ಹೂಳೆತ್ತಿರುವುದು ಸುಮಾರು 10 ವರ್ಷಗಳ ಹಿಂದೆಯಾಗಿದ್ದು, ಕಳೆದ ವರ್ಷ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 1 ಲಕ್ಷ ರೂ. ಅನ್ನು ಹೆಮ್ಮಾಡಿ ಪಂಚಾಯತ್‌ ವತಿಯಿಂದ ಈ ಕೆರೆಯ ಹೂಳೆತ್ತಲು ಮೀಸಲಿಡಲಾಗಿತ್ತು. ಆದರೆ ಈ ಕೆರೆಯ ಬದು (ತಡೆಗೋಡೆ) ಸರಿಯಿಲ್ಲದ ಕಾರಣ, ಅದನ್ನು ಮೊದಲು ಸರಿ ಮಾಡಿಕೊಂಡು ಅನಂತರ ಹೂಳೆತ್ತುವ ನಿರ್ಧಾರ ಮಾಡಲಾಗಿತ್ತು. ಬದು ನಿರ್ಮಿಸಲು ಸುಮಾರು 4-5 ಲಕ್ಷ ರೂ. ಅಗತ್ಯವಿದ್ದು, ಈ ಕೆರೆಯ ಪುನಶ್ಚೇತನ ಪ್ರಕ್ರಿಯೆ ನನೆಗುದಿಗೆ ಬಿದ್ದಿದೆ.

ಕೆರೆ ಹೂಳೆತ್ತಲಿ
ಈ ಕೆರೆಯಲ್ಲಿ ನೀರಿದ್ದರೆ ಇಲ್ಲಿನ ಬಾವಿಗಳಲ್ಲಿಯೂ ನೀರು ಬತ್ತಿ ಹೋಗುವುದಿಲ್ಲ. ಆದರೆ ಈಗ ಈ ಕೆರೆಯ ನೀರು ಬತ್ತಿ ಹೋಗಿದ್ದು, ಬಾವಿಯಲ್ಲೂ ನೀರಿಲ್ಲ. ಪಂಚಾಯತ್‌ಗೆ ಈ ಬಗ್ಗೆ ಮನವಿ ಮಾಡಿದ್ದರೂ ಸ್ಪಂದಿಸಿಲ್ಲ. ಒಂದು ಬಾರಿ ಹೂಳೆತ್ತಿ, ತಡೆಗೋಡೆ ನಿರ್ಮಿಸಿದರೂ, ಅದು ಸಮರ್ಪಕವಾಗಿ ಕಾಮಗಾರಿ ನಡೆಸದ ಕಾರಣ ಕುಸಿದಿದೆ. ಈ ಬಾರಿಯಾದರೂ ಪುನಶ್ಚೇತನ ಮಾಡಲು ಮುಂದಾಗಲಿ
– ಅರುಣ್‌ ಕಟ್ಟು, ಕೃಷಿಕರು

ಪ್ರಸ್ತಾವನೆಯಿದೆ
ಕೆರೆಯ ಹೂಳೆತ್ತುವ ಕುರಿತು ಈ ಬಗ್ಗೆ ಈಗಾಗಲೇ ಪಂಚಾಯತ್‌ ವತಿಯಿಂದ ಕ್ರಿಯಾ ಯೋಜನೆಯಲ್ಲಿ ಪಟ್ಟಿ ಮಾಡಿ, ಪ್ರಸ್ತಾವನೆ ಕಳುಹಿಸಲಾಗಿದೆ. ಇನ್ನು ಸರಕಾರದ ಮಟ್ಟದಲ್ಲಿ ಇದು ಮುಂದುವರಿಯಬೇಕಾಗಿದೆ. ಈಗಾಗಲೇ ಕೆಲವು ಕೆರೆಗಳಿಗೆ ಉದ್ಯೋಗ ಖಾತರಿ ಯೋಜನೆಯಡಿ ಹೂಳೆತ್ತಲು ಅನುದಾನ ಮೀಸಲಿರಿಸಲಾಗಿದೆ.
– ಮಂಜಯ್ಯ ಬಿಲ್ಲವ, ಪಿಡಿಒ ಹೆಮ್ಮಾಡಿ ಗ್ರಾ.ಪಂ.

ಟಾಪ್ ನ್ಯೂಸ್

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.