ಗುಡ್ಡಾಪುರ ದಾನಮ್ಮದೇವಿಗೂ ನೀರಿನ ಅಭಾವ


Team Udayavani, May 19, 2019, 3:08 AM IST

guddapura

ವಿಜಯಪುರ: ದಕ್ಷಿಣ ಭಾರತದ ಜನತೆಯ ಆರಾಧ್ಯ ದೈವ ಶಿವಶರಣೆ ಗುಡ್ಡಾಪುರ ದಾನಮ್ಮ ದೇವಿ ಕ್ಷೇತ್ರದಲ್ಲೂ ನೀರಿನ ಅಭಾವ ತಲೆದೋರಿದೆ. ಹೀಗಾಗಿ, ಭಕ್ತರು ದೇವಿಯ ದರ್ಶನಕ್ಕಾಗಿ ಕ್ಷೇತ್ರಕ್ಕೆ ಬರುವುದನ್ನು ಮುಂದೂಡಿದರೆ ಒಳಿತು ಎಂದು ಮನವಿ ಮಾಡಲು ದೇವಸ್ಥಾನದ ಆಡಳಿತ ಮಂಡಳಿ ಮುಂದಾಗಿದೆ. ಇದಕ್ಕಾಗಿ ಮೇ 25ರಂದು ದೇವಸ್ಥಾನ ಆಡಳಿತ ಮಂಡಳಿ ಸಭೆ ಕರೆದಿದೆ.

ಗುಡ್ಡಾಪುರ ಕ್ಷೇತ್ರ ವಿಜಯಪುರ ಜಿಲ್ಲೆಗೆ ಹೊಂದಿಕೊಂಡಿರುವ ಮಹಾರಾಷ್ಟ್ರ ರಾಜ್ಯದಲ್ಲಿದ್ದರೂ ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳ ಭಕ್ತರಿಗೆ ಆರಾಧ್ಯ ದೇವಿ. ದೇವಿ ದರ್ಶನ, ವಿವಿಧ ಹರಕೆ ತೀರಿಸಲು ನಿತ್ಯವೂ ಕನಿಷ್ಠ 3 ಸಾವಿರ ಭಕ್ತರು ಇಲ್ಲಿಗೆ ಬರುತ್ತಾರೆ. 2018ರ ಕಾರ್ತಿಕ ಮಾಸದ ಸಂದರ್ಭದಲ್ಲೇ ಸ್ಥಳೀಯ ಜಲಮೂಲಗಳು ಸಂಪೂರ್ಣ ಬತ್ತಿ, ಜಾತ್ರೆ ಹಂತದಲ್ಲೇ ನೀರಿನ ಅಭಾವ ಎದುರಾಗಿತ್ತು.

ಈಗ ಬರದಿಂದ ಕ್ಷೇತ್ರಕ್ಕೆ ಬರುವ ಭಕ್ತರಿಗೆ ನೀರು ಹೊಂದಿಸಲು ದೇವಸ್ಥಾನದ ಆಡಳಿತ ಮಂಡಳಿ ಹೈರಾಣಾಗುವಂತೆ ಮಾಡಿದೆ. ಹೀಗಾಗಿ, ಭಕ್ತರಿಗೆ ಸಮಸ್ಯೆ ಆಗದಿರಲಿ ಎಂದು ಕಳೆದ ವರ್ಷದ ನವೆಂಬರ್‌ನಿಂದಲೇ ದೇವಸ್ಥಾನದ ಟ್ರಸ್ಟ್‌ ಸಮಿತಿ, ಮಾಸಿಕ 1.50 ಲಕ್ಷ ರೂ.ವೆಚ್ಚ ಮಾಡಿ ಟ್ಯಾಂಕರ್‌ ನೀರು ಕೊಡುತ್ತಿದೆ. ಸ್ವಂತ ಟ್ರಾಕ್ಟರ್‌ ಹಾಗೂ 6000 ಲೀ.ಸಾಮರ್ಥ್ಯದ ಟ್ಯಾಂಕರ್‌ ಖರೀದಿಸಿ, ವಿದ್ಯುತ್‌ ಸಮಸ್ಯೆ ನೀಗಲು ಜನರೇಟರ್‌ ಇರಿಸಿದೆ.

ನೆರೆಯ ಅಂಕಲಗಿ, ಸೊರಡಿ ಹಾಗೂ ಮುಚ್ಚಂಡಿ ಗ್ರಾಮಗಳಿಂದ ನೀರನ್ನು ಟ್ಯಾಂಕರ್‌ ಮೂಲಕ ತರಲಾಗುತ್ತಿತ್ತು. ಈಗ ಅಲ್ಲಿಯೂ ಜಲಮೂಲ ಬತ್ತಿರುವುದರಿಂದ ನೀರಿನ ಸಮಸ್ಯೆ ಗಂಭೀರ ಸ್ಥಿತಿಗೆ ತಲುಪಿದೆ. ತಿಂಗಳಿಂದ ಕ್ಷೇತ್ರದಲ್ಲಿ ಮದುವೆ ಮಾಡಲು ಪರವಾನಗಿ ನೀಡಿಕೆ ಸ್ಥಗಿತ ಮಾಡಿದ್ದು, ದೇವಸ್ಥಾನದ ಶುದ್ಧ ನೀರಿನ ಘಟಕ ಮುಚ್ಚಿದೆ. ನಿತ್ಯ ದಾಸೋಹ, ಊಟದ ಮುನ್ನ-ನಂತರ ಕೈ ತೊಳೆಯಲು, ಕುಡಿಯಲು ಸೇರಿದಂತೆ ಕನಿಷ್ಠ 7 ಟ್ಯಾಂಕರ್‌ ನೀರು ಹೊಂದಿಸಲು ಹೆಣಗಾಟ ನಡೆದಿದೆ.

ಈಗ ಹಣ ಕೊಟ್ಟರೂ ನೀರಿಲ್ಲದಂತಾಗಿದೆ. ಮೇ 25ರ ಸಭೆಯಲ್ಲಿ ಇನ್ನೂ ಕೆಲವು ನಿರ್ಣಯಗಳನ್ನು ಮಾಡಲಿದ್ದೇವೆ. ಅದರೂ ಭಕ್ತರಿಗೆ ದಾನಮ್ಮದೇವಿ ದರ್ಶನಕ್ಕೆ ಬರಬೇಡಿ ಎನ್ನಲಾಗದು, ಬರುವುದನ್ನು ಮುಂದೂಡಿದರೆ ಒಳಿತು.
-ಪ್ರಕಾಶ ಗಣಿ, ಅಧ್ಯಕ್ಷರು, ಶ್ರೀದಾನಮ್ಮದೇವಿ ದೇವಸ್ಥಾನ ಟ್ರಸ್ಟ್‌, ಗುಡ್ಡಾಪುರ, ತಾ| ಜತ್ತ, ಮಹಾರಾಷ್ಟ್ರ.

* ಜಿ.ಎಸ್‌. ಕಮತರ

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.