4 ವರ್ಷಗಳಿಂದ ಉಡುಪಿ ಜಿಲ್ಲೆಗೆ ಕೇಳಿಸದ ಆಕಾಶವಾಣಿ


Team Udayavani, May 19, 2019, 6:10 AM IST

akasahvani

ಉಡುಪಿ: ಮಧುರವಾದ ಗಾಯನ, ಕೃಷಿಕರು- ಯುವಕರು- ಮಹಿಳೆಯರು- ಮಕ್ಕಳು ಹೀಗೆ ವಿವಿಧ ವರ್ಗಗಳ ಜನರಿಗೆ ಮುದ ನೀಡುತ್ತಿದ್ದ ಮಂಗಳೂರು ಆಕಾಶವಾಣಿ ಉಡುಪಿ ಜಿಲ್ಲೆಯ ಮಟ್ಟಿಗೆ ಮರೀಚಿಕೆಯಾಗಿ ನಾಲ್ಕು ವರ್ಷಗಳು ಕಳೆದಿವೆ.

ಪ್ರಧಾನಿ ನರೇಂದ್ರ ಮೋದಿಯವರ “ಮನ್‌ ಕೀ ಬಾತ್‌’ ಆರಂಭವಾದ ಬಳಿಕ ಆಕಾಶವಾಣಿಗೆ ಮತ್ತೆ ಬೇಡಿಕೆ ಶುರುವಾಗಿತ್ತು. ಎಫ್ಎಂ. ಯುಗ ಆರಂಭವಾದ ಮೇಲೆ ಕಾರುಗಳಲ್ಲೂ ರೇಡಿಯೋ ಕೇಳುವವರ ಸಂಖ್ಯೆ ಹೆಚ್ಚಿದೆ.

ಬೆಂಗಳೂರಿನಂತಹ ನಗರಗಳಲ್ಲಿ ಎಫ್.ಎಂ. ರೇಡಿಯೋ ಸಾಕಷ್ಟು ಜನಪ್ರಿಯವೂ ಆಗಿದೆ. ಈಗ ಲೋಕಸಭಾ ಚುನಾವಣೆ ಫ‌ಲಿತಾಂಶ ಹೊರ ಬೀಳಲು ದಿನಗಣನೆ ಆರಂಭವಾಗಿದೆ. ಆದರೆ ಚುನಾವಣೆ ಫ‌ಲಿತಾಂಶದಂತಹ ಕುತೂಹಲಗಳನ್ನು ಮಂಗಳೂರು ಆಕಾಶವಾಣಿ ಮೂಲಕ ಆಲಿಸಲು ಜಿಲ್ಲೆಯ ಜನರಿಗೆ ಸಾಧ್ಯವಾಗುತ್ತಿಲ್ಲ.

ಪರ್ಯಾಯ ವ್ಯವಸ್ಥೆ ಇಲ್ಲ
ಇದಕ್ಕೆ ಕಾರಣ ಬ್ರಹ್ಮಾವರದ ಉಪ ಕೇಂದ್ರದಲ್ಲಿದ್ದ 100 ಮೀ. ಎತ್ತರದ ಟವರ್‌ 2015ರ ಎಪ್ರಿಲ್‌ 21ರಂದು ಕುಸಿದು ಬಿದ್ದದ್ದು. ಅನಂತರ ಮತ್ತೆ ಎದ್ದು ನಿಲ್ಲಿಸಲಿಲ್ಲ. ಕರಾವಳಿಯ ಮೂಲ್ಕಿಯಿಂದ ಬೈಂದೂರು ಶಿರೂರು ವರೆಗೆ ಅಂದರೆ ಸುಮಾರು 50 ಕಿ.ಮೀ. ಸುತ್ತಳತೆಯಲ್ಲಿ ಮಂಗಳೂರು ಆಕಾಶವಾಣಿಯ ಕೇಳುಗರಿಗೆ ಬಹುತೇಕ ಲಭ್ಯವಿಲ್ಲ. ಕುಸಿದು ಬಿದ್ದ ಟವರ್‌ನ್ನು ಮತ್ತೆ ಎತ್ತಬೇಕಾದರೆ ದುಬಾರಿ. ಇದು ಮೀಡಿಯಂ ವೇವ್‌ ತಂತ್ರಜ್ಞಾನ ಆಧಾರಿತವಾದುದು. ಈಗ ಇಂತಹ ರೇಡಿಯೋಗಳೂ ಮಾರುಕಟ್ಟೆಯಲ್ಲಿ ಲಭ್ಯವಿಲ್ಲ. ಇದರ ಬದಲು ಈಗ ಚಾಲ್ತಿಯಲ್ಲಿರುವ ಎಫ್ಎಂ ರೇಡಿಯೋ ತಂತ್ರಜ್ಞಾನದ ಟ್ರಾನ್ಸ್‌ ಮಿಟರ್‌ ಅಳವಡಿಸಿದರೆ ಉಡುಪಿ ಜಿಲ್ಲೆಗೆ ಮಂಗಳೂರು ಆಕಾಶವಾಣಿಯ ಗತಕಾಲದ ವೈಭವ ಮರುಕಳಿಸೀತು.

ಸ್ಥಳೀಯರ ಬೇಡಿಕೆಯಂತೆ ಸ್ಥಳೀಯ ಸಂಸದೆ ಶೋಭಾ ಕರಂದ್ಲಾಜೆಯವರು ಎಫ್ಎಂ ಆ್ಯಂಟೆನಾ ಸ್ಥಾಪಿಸಲು ವಾರ್ತಾ ಮತ್ತು ಪ್ರಸಾರ ಸಚಿವಾಲಯಕ್ಕೆ ಪತ್ರ ಬರೆದು ಒತ್ತಾಯಿಸಿದ್ದರು. ಅಲ್ಲಿಂದ ಪ್ರಸಾರ ಭಾರತಿ ಕಾರ್ಯಾಲಯಕ್ಕೆ ಕಡತ ಚಲಿಸಿತು. ಅಲ್ಲಿಂದ ಮುಂದೆ ಚಲಿಸಲೇ ಇಲ್ಲ. ಈಗ ಸ್ಥಳೀಯರು ಎಫ್ಎಂ ಟವರ್‌ ಸ್ಥಾಪಿಸಲು ಹಕ್ಕೊತ್ತಾಯ ಮಂಡಿಸುತ್ತಿದ್ದು ಪ್ರಧಾನಿಯವರಿಗೂ ಪತ್ರ ಬರೆದಿದ್ದಾರೆ.

ಟ್ರಾನ್ಸ್‌ಮಿಟರ್‌ ಸ್ಥಾಪನೆಗೆ ಪ್ರಸ್ತಾವ
ಮೀಡಿಯಂ ವೇವ್‌ ತಂತ್ರಜ್ಞಾನದ ಟವರ್‌ ಸ್ಥಾಪನೆಗಿಂತ ಎಫ್ಎಂ ಟ್ರಾನ್ಸ್‌ಮಿಟರ್‌ ಸ್ಥಾಪನೆ ಸೂಕ್ತ. ನಮ್ಮ ಕಡೆಯಿಂದ ಎಫ್ಎಂ ಟ್ರಾನ್ಸ್‌ಮಿಟರ್‌ ಸ್ಥಾಪನೆಗೆ ಪ್ರಸ್ತಾವನೆ ಹೋಗಿದ್ದು ಸರಕಾರ ನಿರ್ಧಾರ ತಳೆಯಬೇಕಾಗಿದೆ.
– ಉಷಾಲತಾ, ನಿಲಯ ಮುಖ್ಯಸ್ಥರು, ಮಂಗಳೂರು ಆಕಾಶವಾಣಿ

ಹೊಸ ಸರಕಾರ ಬಂದ ಬಳಿಕ ಮತ್ತೆ ಫಾಲೋ ಅಪ್‌
ಬ್ರಹ್ಮಾವರ ಆಕಾಶವಾಣಿಯ ಟವರ್‌ ಸ್ಥಾಪಿಸಲು ಹಿಂದೆ ವೆಂಕಯ್ಯ ನಾಯ್ಡು ಸಚಿವರಾಗಿದ್ದಾಗ, ಅನಂತರ ರವಿಶಂಕರ ಪ್ರಸಾದ್‌, ರಾಜ್ಯವರ್ಧನ ಸಿಂಗ್‌ ರಾಥೋಡ್‌ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದೆ. ಅವರು ಹಣಕಾಸು ಮತ್ತು ಜನರ ಬೇಡಿಕೆ ಕೊರತೆಯನ್ನು ಮುಂದಿಟ್ಟಿದ್ದರು. ಈಗ ಹೊಸ ಸರಕಾರ ಬಂದ ಬಳಿಕ ಮತ್ತೆ ಫಾಲೋ ಅಪ್‌ ಮಾಡುತ್ತೇನೆ.
– ಶೋಭಾ ಕರಂದ್ಲಾಜೆ, ಸಂಸದೆ, ಉಡುಪಿ -ಚಿಕ್ಕಮಗಳೂರು ಕ್ಷೇತ್ರ

ಶ್ರೋತೃವರ್ಗಕ್ಕೆ ನ್ಯಾಯ ಸಿಗಲಿ
ನಾವು ರೇಡಿಯೋ ಕೇಳುಗರ ಸಂಘವನ್ನು ರಚಿಸಲು ನಿರ್ಧರಿಸಿದ್ದೇವೆ. ಹೊಸ ಟವರ್‌ ಸ್ಥಾಪನೆ ಮಾಡಿ ಬ್ರಹ್ಮಾವರ ಕೇಂದ್ರವನ್ನು ಮತ್ತೆ ಚಾಲ್ತಿಗೆ ತರಬೇಕು. ಈಗಾಗಲೇ ನಾಲ್ಕು ವರ್ಷ ವಿಳಂಬಿಸಿದ್ದು ಸರಿಯಲ್ಲ. ನಾವೀಗ ಪ್ರಧಾನ ಮಂತ್ರಿಯವರಿಗೂ ಪತ್ರ ಬರೆದು ಉಡುಪಿ ಜಿಲ್ಲೆಯ ಆಕಾಶವಾಣಿ ಶ್ರೋತೃವರ್ಗಕ್ಕೆ ನ್ಯಾಯ ಕೊಡಿಸಲು ಒತ್ತಾಯಿಸಿದ್ದೇವೆ.
– ಚಂದ್ರಗುಪ್ತ ಖಾರ್ವಿ, ಅಧ್ಯಕ್ಷರು, ಪ್ರಕಾಶ್‌ ಪಡಿಯಾರ್‌, ಸದಸ್ಯ, ಸಮಾಜ ಸೇವಾ ವೇದಿಕೆ, ಮರವಂತೆ

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.