ಡೈಗ್ನಾಸ್ಟಿಕ್‌ ಕೇಂದ್ರ ಉದ್ಘಾಟನೆ


Team Udayavani, May 19, 2019, 9:58 AM IST

hubali-tdy-5..

ಹುಬ್ಬಳ್ಳಿ: ಇಲ್ಲಿನ ದೇಸಾಯಿ ಕ್ರಾಸ್‌ ವಿವೇಕಾನಂದ ಕಾರ್ನರ್‌ನಲ್ಲಿ ಆಚಾರ್ಯ ತುಲಸಿ ಡೈಗ್ನಾಸ್ಟಿಕ್‌ ಸೆಂಟರ್‌ ಉದ್ಘಾಟಿಸಲಾಯಿತು.

ಹುಬ್ಬಳ್ಳಿ: ಅಖೀಲ ಭಾರತ ತೇರಾಪಂಥ ಯುವಕ ಪರಿಷದ್‌ ವತಿಯಿಂದ ನಗರದ ದೇಸಾಯಿ ಕ್ರಾಸ್‌ ವಿವೇಕಾನಂದ ಕಾರ್ನರ್‌ನಲ್ಲಿ ಆಚಾರ್ಯ ತುಲಸಿ ಡಯಾಗ್ನಾಸ್ಟಿಕ್‌ ಸೆಂಟರ್‌ ಉದ್ಘಾಟನೆ ಶನಿವಾರ ನಡೆಯಿತು. ಶಾರದಾದೇವಿ ಹೀರಾಲಾಲ್ಜಿ ಮಾಲು ಸೆಂಟರ್‌ ಉದ್ಘಾಟನೆ ನೆರವೇರಿಸಿದರು.

ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತೇರಾಪಂಥ ಯುವಕ ಪರಿಷದ್‌ ಹುಬ್ಬಳ್ಳಿ ಅಧ್ಯಕ್ಷ ವಿಮಲ್ ಕಟಾರಿಯಾ, ಜನರು ಚಿಕಿತ್ಸೆಗಿಂತ ಮುಂಚೆ ಆರೋಗ್ಯ ಸಮಸ್ಯೆ ಪತ್ತೆ ಮಾಡುವುದಕ್ಕೆ ದೊಡ್ಡ ಮೊತ್ತ ಖರ್ಚು ಮಾಡಬೇಕಿದೆ. ಜನರಿಗೆ ಅನೂಕಲ ಕಲ್ಪಿಸುವ ಉದ್ದೇಶದಿಂದ ಡೈಗ್ನಾಸ್ಟಿಕ್‌ ಸೆಂಟರ್‌ ಆರಂಭಿಸಲಾಗಿದೆ ಎಂದರು.

ಮಾರುಕಟ್ಟೆಗಿಂತ ಕಡಿಮೆ ಹಣದಲ್ಲಿ ಇಲ್ಲಿ ಪರೀಕ್ಷೆ ಮಾಡಲಾಗುತ್ತದೆ. ಎಂಆರ್‌ಐ ಹಾಗೂ ಸಿಟಿ ಸ್ಕ್ಯಾನ್ ಹೊರತುಪಡಿಸಿ ರಕ್ತ ಪರೀಕ್ಷೆ, ಮಧುಮೇಹ, ಥೈರಾಯ್ಡ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಇಲ್ಲಿ ಮಾಡಲಾಗುತ್ತದೆ. ಉತ್ತಮ ಗುಣಮಟ್ಟದ ಪರೀಕ್ಷಾ ಯಂತ್ರಗಳನ್ನು ಅಳವಡಿಸಲಾಗಿದೆ. ಇತರ ಡೈಗ್ನಾಸ್ಟಿಕ್‌ ಸೆಂಟರ್‌ಗಳ ದರಕ್ಕಿಂತ ಶೇ.50ರಿಂದ ಶೇ.80 ಕಡಿಮೆ ಹಣದಲ್ಲಿ ಪರೀಕ್ಷೆ ಮಾಡಿ ವರದಿ ನೀಡಲಾಗುವುದು. ಸಮಾಜದ ದಾನಿಗಳ ಸಹಕಾರದಿಂದ ಇದನ್ನು ನಡೆಸಲಾಗುತ್ತದೆ. ಲಾಭ ಹಾಗೂ ನಷ್ಟವಿಲ್ಲದೇ ಸೆಂಟರ್‌ ನಡೆಸುವುದು ನಮ್ಮ ಉದ್ದೇಶ. ಜನರ ಪ್ರತಿಕ್ರಿಯೆ ಪರಿಗಣಿಸಿ ಡೈಗ್ನಾಸ್ಟಿಕ್‌ ಸೆಂಟರ್‌ ವಿಸ್ತರಿಸಲಾಗುವುದು ಎಂದರು.

ದೇಶದಲ್ಲಿ ಈಗಾಗಲೇ 40 ಡೈಗ್ನಾಸ್ಟಿಕ್‌ ಸೆಂಟರ್‌ಗಳು ಕಾರ್ಯ ನಿರ್ವಹಿಸುತ್ತಿದ್ದು, ಇದು 41ನೇ ಸೆಂಟರ್‌ ಆಗಿದೆ. ರಾಜ್ಯದಲ್ಲಿ ಬೆಂಗಳೂರಿನಲ್ಲಿ 4, ಮೈಸೂರು 1, ಸಿಂಧನೂರು 1 ಸೆಂಟರ್‌ ಇದ್ದು, ಇದು ರಾಜ್ಯದ 7ನೇ ಸೆಂಟರ್‌ ಆಗಿದೆ ಎಂದು ತಿಳಿಸಿದರು.

ಆಚಾರ್ಯ ತುಲಸಿ ಅವರು ಮಾನವತೆಗೆ ಹೆಸರುವಾಸಿಯಾಗಿದ್ದರು. ಅವರ ಜನ್ಮಶತಮಾನೋತ್ಸವ ಸಂದರ್ಭ ದಲ್ಲಿ ಸೆಂಟರ್‌ ಆರಂಭಿಸಲಾಗುತ್ತಿದೆ. ತೇರಾಪಂಥ ಯುವಕ ಪರಿಷದ್‌ ಸೇವಾ, ಸಂಸ್ಕಾರ ಹಾಗೂ ಸಂಘಟನೆಯಲ್ಲಿ ತೊಡಗಿಕೊಂಡಿದೆ. ಪರಿಷದ್‌ 28 ಕಾರ್ಯಕ್ರಮಗಳನ್ನು ನಡೆಸುತ್ತಿದೆ ಎಂದರು.

ಮುಕೇಶ ಗುಗಲಿಯಾ, ಪಂಕಜ್‌ ಡಾಗಾ, ಸಂದೀಪ ಕೊಠಾರಿ, ರಮೇಶ ಡಾಗಾ, ಅಭಿನಂದನ್‌ ನಾಹಟಾ, ಪವನ್‌ ಮಾಂಡೋತ್‌ ಇದ್ದರು.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.