ಫಲವತ್ತಾದ ಭೂಮಿ ರಕ್ಷಿಸಲು ಮೊರೆ

To protect the fertile land

Team Udayavani, May 19, 2019, 11:38 AM IST

belegavi-tdy-3..

ಬೆಳಗಾವಿ: ಅಲಾರವಾಡದಿಂದ ಮಚ್ಛೆವರೆಗಿನ ಬೈಪಾಸ್‌ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತಡೆದು ಫಲವತ್ತಾದ ಭೂಮಿ ರಕ್ಷಿಸಬೇಕು ಎಂದು ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದರು.

ಬೆಳಗಾವಿ: ತಾಲೂಕಿನ ಅಲಾರವಾಡದಿಂದ ಮಚ್ಛೆವರೆಗಿನ ಬೈಪಾಸ್‌ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತಡೆದು ಫಲವತ್ತಾದ ಭೂಮಿ ರಕ್ಷಿಸಬೇಕು ಎಂದು ಆಗ್ರಹಿಸಿ ಈ ಭಾಗದ ರೈತರು ಹಾಗೂ ಸಂಘಟನೆಗಳ ಮುಖಂಡರು ಶನಿವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಚಕ್ಕಡಿ ಮೂಲಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಆಗಮಿಸಿದ ರೈತರು, ರೈತ ಮಹಿಳೆಯರು ಹಾಗೂ ಮಕ್ಕಳು, ರಸ್ತೆ ನಿರ್ಮಾಣಕ್ಕೆ ಫಲವತ್ತಾದ ಭೂಮಿ ಕಸಿದುಕೊಳ್ಳುತ್ತಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕ್ರಮ ಸರಿಯಲ್ಲ ಎಂದು ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ ಹಾಗೂ ಅರಣ್ಯ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು.

ರೈತರು ಯಾವುದೇ ಅಭಿವೃದ್ಧಿ ಕಾಮಗಾರಿಗಳ ವಿರೋಧಿಗಳಲ್ಲ. ಆದರೆ ನಮ್ಮ ಜೀವನೋಪಾಯಕ್ಕಾಗಿ ಇರುವ ಫಲವತ್ತಾದ ಭೂಮಿ ಕಸಿದುಕೊಂಡು ಅಭಿವೃದ್ಧಿ ಮಾಡುವುದು ಸರಿಯಲ್ಲ. ನಮ್ಮ ಜೀವನಾಡಿ ಭೂಮಿ ಉಳಿಸಬೇಕು. ಕಾಯ್ದೆ ಕಾನೂನುಗಳ ಅರಿವಿಲ್ಲದ ರೈತರ ಭೂಮಿಯನ್ನು ದುರುಪಯೋಗ ಪಡಿಸಿಕೊಂಡು ಅಮಾನವೀಯ ದೌರ್ಜನ್ಯ ನಡೆಸುತ್ತಿರುವುದು ಖಂಡನೀಯ ಎಂದು ಆರೋಪಿಸಿದರು.

ಪೊಲೀಸ್‌ ಇಲಾಖೆಯ ಸರ್ಪಗಾವಲು ಹಾಗೂ ಕೃಷಿ ಮಹಿಳೆಯರ ಮೇಲೆ ಗೂಂಡಾವರ್ತನೆ ತೋರುತ್ತಿರುವ ಅಧಿಕಾರಿಗಳು, ಬಲವಂತವಾಗಿ ಕೃಷಿ ಜಮೀನು ಹಾಳು ಮಾಡಿ ನಮ್ಮ ಹೊಟ್ಟೆಯ ಮೇಲೆ ಹೊಡೆದು ಅಭಿವೃದ್ಧಿ ಮಾಡುವುದರಿಂದ ಸರ್ಕಾರ ಏನು ಸಾಧಿಸಲು ಸಾಧ್ಯ. ಫಲವತ್ತಾದ ಭೂಮಿಯನ್ನು ಅಭಿವೃದ್ಧಿ ಯೋಜನೆಗಳಿಗೆ ಬಳಸುವಂತಿಲ್ಲ. ರೈತರ ಮನವೊಲಿಸದೇ ಪೂರ್ಣ ಹಾಗೂ ಯೋಗ್ಯ ಪರಿಹಾರ ಲೆಕ್ಕಿಸದೇ ರೈತರ ಕೃಷಿ ಜಮೀನು ಕಸಿದುಕೊಂಡರೆ ಬದುಕುವುದು ಹೇಗೆ ಎಂದು ಪ್ರಶ್ನಿಸಿದರು.

ಸರ್ಕಾರ ಸ್ವ ಇಚ್ಛೆಯಿಂದ ಮಚ್ಛೆಯಿಂದ ಸಾಂಬ್ರಾವರೆಗಿನ ವಿಶೇಷ ಕೃಷಿ ಕಾಯ್ದಿಟ್ಟ ಭೂಮಿಯನ್ನಾಗಿ ಕಾಯ್ದಿರಿಸಬೇಕಾಗಿತ್ತು. ಭತ್ತದ ಬೆಳೆ ಬೆಳಗಾವಿಯ ತಳಿ ಅಪರೂಪದ್ದಾಗಿದೆ. ಇದನ್ನು ರಕ್ಷಿಸುವ ಬದಲು ಕೃಷಿ ವಿರೋಧಿ ನೀತಿ ಅನುಸರಿಸಲಾಗುತ್ತಿದೆ. ಕಾಮಗಾರಿ ನಿಲ್ಲಿಸುವಂತೆ ಮೇ 10ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೂ ಮನವಿ ನೀಡಲಾಗಿದೆ ಎಂದು ತಿಳಿಸಿದರು.

ಬೆಳಗಾವಿ ಬಾಸುಮತಿ ತಳಿಯನ್ನು ರಕ್ಷಿಸಬೇಕು. 30 ಅಡಿಗಿಂತ ಹೆಚ್ಚು ಆಳವಿರುವ ಕಪ್ಪು ಮಣ್ಣಿನ ಭೂಮಿಯನ್ನು ಯಾವುದೇ ಕಟ್ಟಡ ಅಥವಾ ರಸ್ತೆಗೆ ಬಳಸಬಾರದು. ಈ ಫಲವತ್ತಾದ ಭೂಮಿ ಕೃಷಿಯಿಂದ ವಿಮುಖವಾದರೆ ಮುಂದಿನ ದಿನಗಳಲ್ಲಿ ಹಾನಿಯೇ ಜಾಸ್ತಿ. ಈ ಭೂಮಿಯಲ್ಲಿ ಯಾವುದೇ ಕೃತಕ ನೀರಾವರಿ ಯೋಜನೆಯ ಅನುಕೂಲವಿಲ್ಲದಿದ್ದರೂ ವರ್ಷದಲ್ಲಿ ಮೂರು ವಿಧದ ಬೆಳೆ ಬೆಳೆಯುವ ಅವಕಾಶವಿದೆ ಎಂದು ಮನವಿಯಲ್ಲಿ ಉಲ್ಲೇಖೀಸಿದ್ದಾರೆ.

ಇಲ್ಲಿ ರಸ್ತೆ ನಿರ್ಮಾಣ ಮಾಡದರೆ ಸಾವಿರಾರು ಮರಗಳ ಮಾರಣಹೋಮ ಆಗುತ್ತದೆ. ಕಾನೂನುಬಾಹಿರವಾಗಿ ರೈತರ ಮೆಲೆ ಒತ್ತಡ ಹಾಕಿ ಭೂಮಿ ಮುಟ್ಟುಗೋಲು ಹಾಕಲಾಗುತ್ತಿದೆ. ರಾಜಕೀಯ ಮುಖಂಡರ ಹಿತಾಸಕ್ತಿಗೆ ಅನುಗುಣವಾಗಿ ರಸ್ತೆಯ ಮೋಜಣಿ ಹಾಗೂ ಅಳತೆ ಜಮೀನು ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆ ನಡೆದಿದೆ. ರೈತರು ಖಾಯಂ ನಿರಾಶ್ರಿತರಾಗುವುದನ್ನು ತಡೆಯುವಂತೆ ಆಗ್ರಹಿಸಿದರು.

ಇದೇ ಜೋಡು ರಸ್ತೆಯನ್ನು ಹಲಗಾ, ಬಸ್ತವಾಡ, ಕೊಂಡಸಕೊಪ್ಪ, ಧಾಮಣೆ, ಹಟ್ಟಿ, ಯರಮಾಳ, ಯಳ್ಳುರ, ಸುಳಗಾ, ಜಾಡಶಹಾಪುರ ಅಥವಾ ದೇಸೂರ ಮಾರ್ಗವಾಗಿ ಮಾಡಿದರೆ ಬರಡು ಭೂಮಿ ಉಪಯೋಗದ ಜತೆಗೆ ಈ ಹಳ್ಳಿಗಳು ಸುಧಾರಣೆ ಕಾಣುತ್ತವೆ ಎಂದು ರೈತರು ಪರ್ಯಾಯ ಮಾರ್ಗದ ಸಲಹೆ ನೀಡಿದ್ದಾರೆ.

ರೈತರಾದ ರಾಜು ಮರವೆ, ಉಮೇಶ ಬಿರ್ಜೆ, ನೀಲಮ್‌ ಬಿರ್ಜೆ, ಬೆಳಗುಂದಕರ, ತಾನಾಜಿ ಹಲೊಗೇಕರ, ಪಿಂಟು ಕಂಗ್ರಾಳಕರನ ಇದ್ದರು

ಟಾಪ್ ನ್ಯೂಸ್

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.