ನೀರು ಸರಬರಾಜಿಗೆ ಅಧಿಕಾರಿಗಳು ವಿಫಲ

ಪೆದ್ದನಹಳ್ಳಿ ಗ್ರಾಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲೂ ಹೆಚ್ಚಾಗಿದೆ ನೀರಿನ ಸಮಸ್ಯೆ

Team Udayavani, May 19, 2019, 4:17 PM IST

tumkur-tdy-2..

ಗುಬ್ಬಿ ತಾಲೂಕಿನ ಪೆದ್ದನಹಳ್ಳಿ ಗ್ರಾಪಂ ಮುಂಭಾಗ ಸಾರ್ವಜನಿಕರು ಖಾಲಿ ಕೊಡದೊಂಡಿಗೆ ಪ್ರತಿಭಟನೆ ಮಾಡಿದರು.

ಗುಬ್ಬಿ: ತಾಲೂಕಿನ ಪೆದ್ದನಹಳ್ಳಿ ಗ್ರಾಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲೂ ನೀರಿನ ಸಮಸ್ಯೆ ಹೆಚ್ಚಾಗಿದೆ. ಇದಕ್ಕೆ ಆಭಿವೃದ್ಧಿ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವಾಗಿದೆ. ಬೇಸಿಗೆ ಯಲ್ಲಿ ನೀರಿನ ಸಮಸ್ಯೆ ಬರುವ ಬಗ್ಗೆ ತಿಳಿದಿದ್ದರೂ ಚುನಾವಣೆಯನ್ನೇ ಮುಂದಿಟ್ಟು ಮೂಲ ಸೌಲಭ್ಯ ಕಲ್ಪಿಸಲು ವಿಫಲರಾಗಿದ್ದಾರೆ ಎಂದು ಮುಖಂಡ ಹರಪ್ರಸಾದ್‌ ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕಿನ ಪೆದ್ದನಹಳ್ಳಿ ಗ್ರಾಪಂ ಮುಂಭಾಗ ನೂರಾರು ಗ್ರಾಮಸ್ಥರು ಖಾಲಿ ಕೊಡಗಳನ್ನು ಪ್ರದರ್ಶನ ನಡೆಸಿ, ಪ್ರತಿಭಟನೆ ಮಾಡಿದರು. ಈ ವೇಳೆಯಲ್ಲಿ ಮಾತನಾಡಿದ ಅವರು, ಹಲವು ವರ್ಷಗಳಿಂದ ನೀರಿನ ಸಮಸ್ಯೆ ಎದುರಿಸುತ್ತಿರುವ ಮೊದಲ ಗ್ರಾಪಂ ಇದಾಗಿದೆ. ಈ ಬಗ್ಗೆ ತಿಳಿದೂ ಕೂಡ ಪಿಡಿಒ ಮತ್ತು ಚುನಾಯಿತ ಜನಪ್ರತಿ ನಿಧಿಗಳು ನಿರ್ಲಕ್ಷ್ಯವಹಿಸಿದ್ದರ ಪರಿಣಾಮ ಇಂದು ಮನೆ ಬಳಕೆಗೆ ನೀರು ಇಲ್ಲವಾಗಿದೆ ಎಂದು ಆರೋಪಿಸಿದರು.

ಗ್ರಾಪಂ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಿ: ಸರ್ಕಾರ ಟ್ಯಾಂಕರ್‌ ಮೂಲಕ ನೀರು ಕಲ್ಪಿಸಲು ತಿಳಿಸಿದ್ದರೂ ನೀತಿ ಸಂಹಿತೆ ಹೆಸರಿನಲ್ಲಿ ಜನ ಜಾನುವಾರುಗಳನ್ನು ನಿರ್ಲಕ್ಷ್ಯ ಮಾಡಲಾಗಿದೆ. ನೀರು ಒದಗಿಸದ ಗ್ರಾಪಂ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು. ಮೇಳೆಕಲ್ಲಹಳ್ಳಿ, ಮಂಚಿ ಹಳ್ಳಿ, ಕುಣಾಘಟ್ಟ, ದೇವರಹಟ್ಟಿ, ಕೆ.ಮತ್ತಿಘಟ್ಟ ಕಾಲೋನಿ ಸೇರಿದಂತೆ ಹಲವು ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದೆ. ಮನೆಗೆಲಸ ಮತ್ತು ನಿತ್ಯ ಕರ್ಮಗಳಿಗೂ ನೀರಿನ ಅಭಾವ ಉಂಟಾ ಗಿದ್ದು, ನೀರಿಗೆ ಗ್ರಾಮದ ಹೊರವಲಯದ ತೋಟಗಳನ್ನು ಅವಲಂಭಿಸಲಾಗಿದೆ. ಈ ಜತೆಗೆ ದನಕರುಗಳು ನೀರು ಕುಡಿಯಲು ನಿರ್ಮಿಸ ಲಾದ ತೊಟ್ಟಿಗಳಲ್ಲಿ ನೀರು ಶೇಖರಣೆಯಾಗದೇ ಜಾನುವಾರುಗಳು ಪರದಾಡುತ್ತಿವೆ. ದನಕರು ಗಳಿಗೆ ನೀರು ಒದಗಿಸಲು ಸಾಧ್ಯವಾಗದೇ ಜಾನುವಾರುಗಳನ್ನು ಮಾರಾಟ ಮಾಡುವ ನಿರ್ಧಾರಕ್ಕೆ ರೈತರು ಬಂದಿದ್ದಾರೆ ಎಂದು ದೂರಿದರು.

ಯೋಗ್ಯವಿಲ್ಲದ ನೀರು ಸರಬರಾಜು: ಕಡಬ ಕೆರೆ ಮೂಲಕ ನೀರು ಕಲ್ಪಿಸುವ ಭರವಸೆ ನೀಡಿ, ಪೈಪ್‌ಲೈನ್‌ ಮೂಲಕ ನೀರು ತಂದರೂ ಈ ನೀರು ಬಳಸಲಾಗುತ್ತಿಲ್ಲ. ಕುಡಿಯಲು ಯೋಗ್ಯ ವಿಲ್ಲದೆ ಕೆರೆ ನೀರು ಸ್ನಾನ ಮಾಡಿದರೆ ಮೈಯಲ್ಲಿ ಕಡಿತ ಉಂಟಾಗುತ್ತಿದೆ. ಚರ್ಮ ರೋಗಕ್ಕೆ ಕಾರಣವಾದ ಈ ನೀರು ಸಂಪೂರ್ಣ ಕಲುಷಿತ ವಾಗಿದೆ. ಕುಡಿಯಲು ಸಹ ಬಳಸುವಂತಿಲ್ಲ. ಬೋರ್‌ವೆಲ್ ಕೊರೆಸುವ ಮಾತು ದೂರ ವಾಗಿದೆ. ತುರ್ತು ಪರಿಸ್ಥಿತಿಯಲ್ಲಿ ಟ್ಯಾಂಕರ್‌ ಮೂಲಕ ನೀರು ನೀಡಲು ಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದಾರೆ. ತಾಲೂಕು ಆಡಳಿತದ ಗಮನಕ್ಕೆ ತಂದು ನೀರು ಒದಗಿಸ ಬೇಕಾದ ಪಿಡಿಒ ತಾಲೂಕು ಕಚೇರಿಗೆ ನೀರಿನ ಮನವಿ ಮಾಡಿಲ್ಲ ಎಂದು ಕಿಡಿಕಾರಿದ ಗ್ರಾಮಸ್ಥರು, ಸ್ಥಳಕ್ಕೆ ಜಿಪಂ ಸಿಇಒ ಬರುವಂತೆ ಆಗ್ರಹಿಸಿ ಜತೆಗೆ ಮೇವು ಬ್ಯಾಂಕ್‌ ತೆರವು, ಶುದ್ಧ ಕುಡಿಯುವ ನೀರಿನ ಘಟಕ ಆರಂಭ ಮಾಡುವಂತೆ ಒತ್ತಾಯಿಸಿದರು.

ನೀರು ಕಲ್ಪಿಸುವ ಭರವಸೆ: ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಾಪಂ ಇಒ ನರಸಿಂಹಯ್ಯ ಮತ್ತು ಗ್ರಾಮೀಣಾ ನೀರು ಸರಬರಾಜು ಇಲಾಖೆ ಎಇಇ ರಮೇಶ್‌ ಪ್ರತಿಭಟನಾ ನಿರತರೊಂದಿಗೆ ಚರ್ಚಿಸಿದರು. ಕೊಳವೆ ಬಾವಿ ಕೊರೆಸಲು ಕಾಲಾವಕಾಶ ಬೇಕಿದೆ. 15 ದಿನದೊಳಗೆ ಬೋರ್‌ ಕೊರೆಸುತ್ತೇವೆ. ಅಲ್ಲಿಯವರೆಗೆ ಪ್ರತಿನಿತ್ಯ 8 ಟ್ಯಾಂಕರ್‌ ನೀರು ಒದಗಿಸುವ ಭರವಸೆಯನ್ನು ನೀಡಿದ ಬಳಿಕ ಪ್ರತಿಭಟನೆ ಸ್ಥಗಿತಗೊಂಡ ಗ್ರಾಮ ಸ್ಥರು, ಮೇ 27ರೊಳಗೆ ಕೊಳವೆಬಾವಿ ಕೊರೆಸ ಬೇಕು. ಇಲ್ಲವಾದಲ್ಲಿ ರಸ್ತೆಗಿಳಿದು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಗ್ರಾಪಂ ಮಾಜಿ ಸದಸ್ಯ ರಂಗಸ್ವಾಮಿ, ಲಕ್ಷ್ಮಮ್ಮ, ಹುಚ್ಚಪ್ಪ, ರಂಗಪ್ಪ, ನಂದೀಶ್‌, ಅನಿಲ್ಕುಮಾರ್‌, ರಾಜಣ್ಣ, ತ್ರೀನೇಶ್‌, ಜಯಣ್ಣ ಹಾಜರಿದ್ದರು.

ಟಾಪ್ ನ್ಯೂಸ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.