ಹೆದರಿಸಲು ಮಾತ್ರ ಹೊರಟ್ಟಿ ಹೇಳಿಕೆ: ಶಿವಾನಂದ ಪಾಟೀಲ
Team Udayavani, May 20, 2019, 3:05 AM IST
ಬಾಗಲಕೋಟೆ: ಸಮ್ಮಿಶ್ರ ಸರ್ಕಾರ ವಿಸರ್ಜಿಸಿ ಮಧ್ಯಂತರ ಚುನಾವಣೆ ನಡೆಸುವುದು ಸೂಕ್ತ ಎಂಬ ಎಂಎಲ್ಸಿ ಬಸವರಾಜ ಹೊರಟ್ಟಿ ಅವರ ಹೇಳಿಕೆ ಬೆದರಿಸಲು ಹೇಳಿದ್ದೇ ಹೊರತು ಸರ್ಕಾರ ಬೀಳಿಸಲು ಅಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಪಾಟೀಲ ಹೇಳಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊರಟ್ಟಿ ಆ ರೀತಿ ಏಕೆ ಹೇಳಿದ್ದಾರೆ ಎಂಬುದನ್ನು ಅವರೇ ಸ್ಪಷ್ಟಪಡಿಸಿದ್ದಾರೆ. ಸರ್ಕಾರ ವಿಸರ್ಜನೆಯಾಗಬೇಕು ಎಂಬ ಉದ್ದೇಶ ಅವರಿಗೂ ಇಲ್ಲ. ಯಾರಿಗೆ, ಯಾಕೆ ಬೆದರಿಸುವ ಉದ್ದೇಶದಿಂದ ಹೇಳಿದ್ದಾಗಿ ಹೊರಟ್ಟಿ ಹೇಳಿದ್ದಾರೆ.
ಹೀಗಾಗಿ, ಆ ಕುರಿತು ನಾನು ಹೆಚ್ಚು ಮಾತನಾಡುವ ಅವಶ್ಯಕತೆ ಇಲ್ಲ. ಅಲ್ಲದೇ ಬಿಜೆಪಿಯವರು ಸರ್ಕಾರ ಬೀಳುತ್ತದೆ, ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಹೇಳುತ್ತಲೇ ಇದ್ದಾರೆ. ಅವರು ಸರ್ಕಾರ ಬೀಳಿಸಿದ ಮೇಲೆ ಹೇಳಿಕೊಳ್ಳಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್