ಕೊನೇ ಹಂತ ಶೇ.61 ಮತದಾನ
ಪಶ್ಚಿಮ ಬಂಗಾಳ, ಪಂಜಾಬ್ನಲ್ಲಿ ಹಿಂಸಾಚಾರ
Team Udayavani, May 20, 2019, 6:00 AM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸಿರುವ ವಾರಾಣಸಿ ಕ್ಷೇತ್ರ ಸೇರಿದಂತೆ 8 ರಾಜ್ಯಗಳ 59 ಕ್ಷೇತ್ರಗಳಲ್ಲಿ ಭಾನುವಾರ ಮತದಾನ ಪೂರ್ಣಗೊಂಡಿದ್ದು, 38 ದಿನಗಳ ಕಾಲ ನಡೆದ ಲೋಕಸಭಾ ಮತ ಸಮರಕ್ಕೆ ಪೂರ್ಣವಿರಾಮ ಬಿದ್ದಿದೆ. 7ನೇ ಹಾಗೂ ಕೊನೇ ಹಂತದಲ್ಲಿ ಶೇ.61 ಮತದಾನ ದಾಖಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ದೇಶಾದ್ಯಂತದ 542 ಲೋಕಸಭಾ ಕ್ಷೇತ್ರಗಳಿಗೆ ಒಟ್ಟು 7 ಹಂತಗಳಲ್ಲಿ ಮತದಾನ ನಡೆದಿದ್ದು, ಸುಮಾರು 8 ಸಾವಿರ ಅಭ್ಯರ್ಥಿಗಳ ಭವಿಷ್ಯವು ವಿದ್ಯುನ್ಮಾನ ಮತಯಂತ್ರಗಳಲ್ಲಿ ಭದ್ರವಾಗಿವೆ. ಮೇ 23ರಂದು ಇವರೆಲ್ಲರ ಭವಿಷ್ಯವೂ ಬಹಿರಂಗವಾಗಲಿದೆ.
ಪ್ರತಿಯೊಂದು ಹಂತದಲ್ಲೂ ಹಿಂಸಾಚಾರವನ್ನು ಕಂಡ ಪಶ್ಚಿಮ ಬಂಗಾಳದಲ್ಲಿ ಭಾನುವಾರವೂ ಭಾರಿ ಹಿಂಸಾಚಾರ ನಡೆದಿದೆ. ಟಿಎಂಸಿ ಹಾಗೂ ಬಿಜೆಪಿ ಅಭ್ಯರ್ಥಿಗಳ ಕಾರುಗಳ ಮೇಲೆ ಬಾಂಬ್ ದಾಳಿ, ಕಲ್ಲು-ಇಟ್ಟಿಗೆ ತೂರಾಟದಂಥ ಘಟನೆಗಳು ನಡೆದಿವೆ. ಇನ್ನು ಪಂಜಾಬ್ನಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಗುಂಡು ಹಾರಿಸಿರುವ ಸಂಗತಿಯೂ ಬೆಳಕಿಗೆ ಬಂದಿದೆ.
ಪ್ರಸಕ್ತ ಲೋಕಸಭಾ ಚುನಾವಣೆ ವೇಳೆ ಒಟ್ಟಾರೆ 3,449.12 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿರುವುದಾಗಿ ಚುನಾವಣಾ ಆಯೋಗ ಹೇಳಿದೆ. 2014ಕ್ಕೆ ಹೋಲಿ ಸಿದರೆ ಈ ಪ್ರಮಾಣ 3 ಪಟ್ಟು ಅಧಿಕ. ಹಿಂದಿನ ಚುನಾವಣೆಯಲ್ಲಿ 1,206 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿತ್ತು ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ