ಪ್ರವಾಸಗಳು ಪ್ರಾಯೋಗಿಕ ಕಲಿಕೆಗೆ ಪೂರಕ
ಸ್ಕೌಟ್ಸ್, ಗೈಡ್ಸ್ನಿಂದ ಗೆಂಡೆಕಟ್ಟೆ ಅರಣ್ಯಧಾಮಕ್ಕೆ ಚಿಣ್ಣರ ಪ್ರವಾಸ
Team Udayavani, May 20, 2019, 10:15 AM IST
ಹಾಸನದ ಸ್ಕೌಟ್ಸ್ ಮತ್ತು ಗೈಡ್ಸ್ ಇಎನ್ಸಿಎಸ್ ಓಪನ್ ಗ್ರೂಪ್ ಜಿಲ್ಲಾ ಸಂಸ್ಥೆಯ ಸಹಕಾರದಲ್ಲಿ ಹಮ್ಮಿಕೊಂಡಿರುವ ಉಚಿತ ಬೇಸಿಗೆ ಶಿಬಿರದ ಅಂಗ ವಾಗಿ ಮಕ್ಕಳಿಗೆ ಗೆಂಡೆಕಟ್ಟೆ ಅರಣ್ಯಧಾಮಕ್ಕೆ ಪ್ರವಾಸ ಏರ್ಪಡಿಸಲಾಗಿತ್ತು.
ಹಾಸನ: ಪ್ರವಾಸಗಳು ಮಕ್ಕಳಲ್ಲಿ ಪ್ರಾಯೋಗಿಕ ಕಲಿಕೆಯನ್ನುಂಟು ಮಾಡುತ್ತವೆ. ಪ್ರವಾಸಗಳಿಂದ ಮಕ್ಕಳು ಸ್ಥಳ ಪರಿಚಯ ವಾಗುತ್ತದೆ ಎಂದು ಇಎನ್ಸಿಎಸ್(ಏಕಲವ್ಯಸೌಟ್ಸ್ ಆ್ಯಂಡ್ ಗೈಡ್ಸ್ ) ಓಪನ್ ಗ್ರೂಪಿನ ಅಧ್ಯಕ್ಷ ಕೊಟ್ರೇಶ್ ಎಸ್.ಉಪ್ಪಾರ್ ಅಭಿಪ್ರಾಯಪಟ್ಟರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಇಎನ್ಸಿಎಸ್ ಓಪನ್ ಗ್ರೂಪ್ ಜಿಲ್ಲಾ ಸಂಸ್ಥೆಯ ಸಹಕಾರದಲ್ಲಿ ಹಮ್ಮಿಕೊಂಡಿರುವ ಉಚಿತ ಬೇಸಿಗೆ ಶಿಬಿರದಲ್ಲಿ ಟೈಮ್ಸ್ ಇಂಟರ್ನ್ಯಾಷನಲ್ ಶಿಕ್ಷಣ ಸಂಸ್ಥೆಯ ಪ್ರಾಯೋಜ ಕತ್ವದಲ್ಲಿ ಗೆಂಡೆಕಟ್ಟೆ ಅರಣ್ಯಧಾಮ ಹಾಗೂ ಕೋರವಂಗಲದ ದೇವಾಲಯಕ್ಕೆ ಏರ್ಪಡಿಸಿದ್ದ ಕಿರುಪ್ರವಾಸದಲ್ಲಿ ಪಾಲ್ಗೊಂಡು ಮಾತನಾಡಿದರು.
ಪ್ರವಾಸದ ಅನುಭವಗಳು ಮಕ್ಕಳ ಮನಸ್ಸಿನ ಮೇಲೆ ತುಂಬಾ ದಿವಸಗಳ ಕಾಲ ಗಾಢಪ್ರಭಾವ ಬೀರುತ್ತವೆ. ಪ್ರಕೃತಿಯ ಸೌಂದರ್ಯ ಸವಿಯುವುದರ ಜೊತೆಗೆ ಆ ಚೆಲುವಿನ ಉಳಿಗಾಗಿ ಹೋರಾಡುವ ಅಂಶವನ್ನು ತಿಳಿದುಕೊಳ್ಳುತ್ತಾರೆ. ಮನರಂಜನೆಗಾಗಿ ಈ ಪ್ರವಾಸವನ್ನು ಹಮ್ಮಿಕೊಂಡಿಲ್ಲ. ಇಲ್ಲಿನ ಜೀವ ವೈಧ್ಯತೆಯನ್ನು ತಿಳಿಯಲು, ಪ್ರಕೃತಿಯಲ್ಲಿ ಆಟಗಳು ಮುಂತಾದ ಅಂಶಗಳನ್ನು ಹೊತ್ತು ಬಂದಿದ್ದೇವೆ ಎಂದರು. ಗೆಂಡೆಕಟ್ಟೆ ಅರಣ್ಯಧಾಮದಲ್ಲಿ ಗಿಡಮರಗಳನ್ನು, ಪ್ರಾಣಿ ಪಕ್ಷಿಗಳನ್ನು ಪರಿಚಯಿಸುವುದರ ಜೊತೆಗೆ ಮಕ್ಕಳಿಗಾಗಿ ವಿವಿಧ ಆಟಗಳನ್ನು ಆಡಿಸಲಾಯಿತು. ಸಂಸ್ಥೆಯ ಕಾರ್ಯದರ್ಶಿ ಆರ್.ಜಿ. ಗಿರೀಶ್, ಜಂಟಿ ಕಾರ್ಯದರ್ಶಿ ಚನ್ನಬಸವೇಶ್ವರ, ರೋವರ್ ಲೀಡರ್ ಕುಮಾರಸ್ವಾಮಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ
Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?
ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ
Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ
Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!