ಹನಿ ನೀರಿಗೂ ತಪ್ಪಿಲ್ಲ ಜನತೆ ಪರದಾಟ


Team Udayavani, May 20, 2019, 12:16 PM IST

20-May-14

ಕೆಂಭಾವಿ: ಯಾದಗಿರಿ- ವಿಜಯಪುರ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ತಾಂಡಾದಲ್ಲಿ ಟ್ಯಾಂಕರ್‌ ನೀರಿಗೆ ಜನತೆ ಸರದಿ ಸಾಲಿನಲ್ಲಿ ಕೊಡಗಳನ್ನು ಇಟ್ಟಿರುವುದು.

ಕೆಂಭಾವಿ: ಬೇಸಿಗೆ ಅವಧಿಯಲ್ಲಿ ಜನತೆಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು ಸರ್ಕಾರ ಹಲವು ಕ್ರಮ ಕೈಗೊಂಡಿದ್ದರೂ ಜಿಲ್ಲಾಡಳಿತ ನಿರ್ಲಕ್ಷ್ಯದಿಂದ ಕೆಂಭಾವಿ ವಲಯದ ಹಲವು ಗ್ರಾಮೀಣ ಪ್ರದೇಶಗಳಲ್ಲಿ ಜನತೆ ಹನಿ ನೀರಿಗೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ನಗನೂರ ಗ್ರಾಪಂ ವ್ಯಾಪ್ತಿಯ ನಗನೂರ, ಖಾನಾಪೂರ, ಚಾಮನಾಳ ಗ್ರಾಪಂನ ವಿವಿಧ ತಾಂಡಾಗಳು ಹಾಗೂ ಏವೂರ ಗ್ರಾಪಂ ವ್ಯಾಪ್ತಿಯ ಹಲವು ಗ್ರಾಮಗಳು ಹಾಗೂ ತಾಂಡಾಗಳಲ್ಲಿ ನೀರಿಗೆ ಜನ ಪರಿತಪಿಸುತ್ತಿದ್ದಾರೆ. ಒಂದು ಕಡೆ ಬಿರು ಬೇಸಿಗೆಯಿಂದ ಜನತೆ ನೀರಿಗೆ ತತ್ತರಿಸುತ್ತಿದ್ದರೆ ಇತ್ತ ಮತ್ತೂಂದು ಕಡೆ ರಾಜಕೀಯ ನಾಯಕರು ಮದುವೆ ಹಾಗೂ ಸ್ಥಳೀಯ ಚುನಾವಣೆಯಲ್ಲಿ ಸಿಲುಕ್ಕಿದ್ದು, ಜನತೆಯ ಗೋಳು ಯಾರು ಕೇಳುವರು ಎಂಬ ಪ್ರಶ್ನೆ ಕಾಡುತ್ತಿದೆ.

ಸಕಾಲಕ್ಕೆ ಮಳೆಯಾಗದೆ ಈ ಬಾರಿ ಬೇಸಿಗೆ ಬಿಸಿಲಿನ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿ ಜಲಮೂಲ ಸಂಪೂರ್ಣ ಬತ್ತಿ ಹೋಗಿ ಕೊಳವೆ ಬಾವಿ ಹಾಗೂ ತೆರೆದ ಬಾವಿಗಳು ಒಣಗಿದ್ದು, ಇದರಿಂದ ನೀರಿನ ತೊಂದರೆ ಹೆಚ್ಚಾಗಲಿಕ್ಕೂ ಕಾರಣ ಎಂದು ಹೇಳಲಾಗುತ್ತಿದೆ.

ಯಾದಗಿರಿ-ವಿಜಯಪುರ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಹಲವು ತಾಂಡಾಗಳಲ್ಲಿ ಬೆಳಗ್ಗೆಯಿಂದ ಜನತೆ ತಮ್ಮ ಕೆಲಸ ಕಾರ್ಯಗಳನ್ನು ಬದಿಗೊತ್ತಿ ಟ್ಯಾಂಕರ್‌ ನೀರಿಗೆ ಸರದಿ ಸಾಲಿನಲ್ಲಿ ನಿಂತು ಕಾಯುತ್ತಿರುವ ದೃಶ್ಯ ಸರ್ವೇ ಸಾಮಾನ್ಯವಾಗಿದೆ. ಗ್ರಾಮಕ್ಕೆ ದಿನಕ್ಕೆ ಕೇವಲ ಎರಡು ಟ್ಯಾಂಕರ್‌ ನೀರಿನಂತೆ ತಾಲೂಕು ಆಡಳಿತ ಹಾಗೂ ಸ್ಥಳೀಯ ಗ್ರಾಪಂ ವತಿಯಿಂದ ಜನತೆಗೆ ನೀರು ಸರಬರಾಜು ಮಾಡುತ್ತಿದ್ದು, ಇದು ಯಾವುದಕ್ಕೂ ಸಾಕಾಗುವುದಿಲ್ಲ ಎಂಬುದು ಹಲವರ ವಾದವಾಗಿದೆ. ವಿಪರ್ಯಾಸವೆಂದರೆ ಹೋದ ವರ್ಷ ಟ್ಯಾಂಕರ್‌ ನೀರು ಪೂರೈಕೆ ಮಾಡಿದ ಟ್ಯಾಂಕರ್‌ ಮಾಲೀಕರಿಗೆ ತಾಲೂಕು ಆಡಳಿತ ಇನ್ನೂ ಬಿಲ್ ಪಾವತಿ ಮಾಡದ ಹಿನ್ನೆಲೆಯಲ್ಲಿ ಈ ಬಾರಿ ಗ್ರಾಮಗಳಿಗೆ ನೀರು ಸರಬರಾಜು ಮಾಡಲು ಹಲವು ಟ್ಯಾಂಕರ್‌ ಮಾಲೀಕರು ಹಿಂದೇಟು ಹಾಕುತ್ತಿದ್ದಾರೆ.

ತಾಲೂಕಿನ ಗಡಿ ಗ್ರಾಮಗಳಾದ ಯಕ್ತಾಪೂರ ಗ್ರಾಪಂ ವ್ಯಾಪ್ತಿಯ ಯಕ್ತಾಪೂರ, ಬೊಮ್ಮನಹಳ್ಳಿ, ವಂದಗನೂರ, ಚಿಂಚೋಳಿ, ಮಲಕಾಪೂರ, ಕಾಚಾಪೂರ, ಹೂವಿನಹಳ್ಳಿ, ತಳ್ಳಳ್ಳಿ, ಐನಾಪೂರ, ಬೇವಿನಾಳ, ಆಲಾØಳ, ದೋರನಹಳ್ಳಿ ಗ್ರಾಮಗಳಲ್ಲಿ ಇದ್ದ ಎಲ್ಲ ಕೊಳವೆ ಬಾವಿಗಳು ಸಂಪೂರ್ಣ ಬತ್ತಿ ಹೋಗಿದ್ದು, ಇದರಿಂದ ಜನತೆ ನೀರಿನ ತೊಂದರೆ ಅನುಭವಿಸುತ್ತಿದ್ದಾರೆ. ವಿಚಿತ್ರವೆಂದರೆ ಗ್ರಾಪಂ ಕೇಂದ್ರ ಸ್ಥಾನವಾದ ಯಕ್ತಾಪೂರ ಗ್ರಾಮದಲ್ಲಿಯೇ ಕಳೆದ ಹಲವು ತಿಂಗಳಿನಿಂದ ಇಡೀ ಗ್ರಾಮಕ್ಕೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಕುಡಿಯುವ ನೀರಿಗೆ ಸರ್ಕಾರ ಪ್ರತಿವರ್ಷ ಸಾಕಷ್ಟು ಅನುದಾನ ನೀಡುತ್ತಿದ್ದರೂ ಗ್ರಾಮಾಂತರ ಪ್ರದೇಶಗಳಲ್ಲಿ ಜಲಮೂಲ ಬತ್ತಿ ಹೋಗಿರುವುದರಿಂದ ಜನತೆಗೆ ಯಾವ ರೀತಿ ನೀರು ಕೊಡಬೇಕು ಎಂಬುದೆ ಅಧಿಕಾರಿಗಳಿಗೆ ತಲೆನೋವಾಗಿ ಪರಣಮಿಸಿದೆ. ಇನ್ನು ಹಲವು ಗ್ರಾಮಗಳಲ್ಲಿ ಜಲಮೂಲ ಸಾಕಷ್ಟಿದ್ದರೂ ಅನುದಾನ ಬಳಕೆ ಮಾಡುವಲ್ಲಿ ಅಧಿಕಾರಿಗಳು ನಿರ್ಲಕ್ಷ ವಹಿಸುತ್ತಿದ್ದು, ಇದೂ ಕೂಡ ನೀರಿನ ತತ್ವಾರಕ್ಕೆ ಕಾರಣ ಎಂಬ ಮಾತು ಹಲವರಿಂದ ಕೇಳಿ ಬರುತ್ತಿದೆ. ಏನೆ ಇದ್ದರೂ ಬೇಸಿಗೆ ಮುಗಿಯುವ ಮುನ್ನವೆ ಸರ್ಕಾರದ ಅನುದಾನ ಸದ್ಬಳಕೆ ಮಾಡಿಕೊಂಡು ನೀರಿನ ಕೊರತೆ ನೀಗಿಸುವಲ್ಲಿ ಜಿಲ್ಲಾಡಳಿತ ಶ್ರಮ ವಹಿಸುವುದೆ ಕಾಯ್ದು ನೋಡಬೇಕು.

ತಾಲೂಕಿನ ಹಲವು ಗ್ರಾಮಗಳಲ್ಲಿ ಜಲಕ್ಷಾಮ ಉಂಟಾಗಿದ್ದು, ಭೂಮಿಯಲ್ಲಿ ನೀರಿನ ಪ್ರಮಾಣ ಸಂಪೂರ್ಣ ಕುಸಿದಿದೆ. ಕೆಲವು ಗ್ರಾಮಗಳಲ್ಲಿ ಖಾಸಗಿ ಕೊಳವೆ ಬಾವಿಯಿಂದ ಜನತೆಗೆ ನೀರು ಪೂರೈಕೆ ಮಾಡುತ್ತಿದ್ದು, ನಗನೂರ, ತಳ್ಳಳ್ಳಿ ಗ್ರಾಮಗಳಲ್ಲಿ ಟ್ಯಾಂಕರ್‌ ಮೂಲಕ ಜನತೆಗೆ ನೀರು ಸರಬರಾಜು ಮಾಡಲಾಗುತ್ತಿದೆ. ಬೇಸಿಗೆ ಮುಗಿಯುವವರೆಗೆ ಜನತೆಗೆ ಯಾವುದೇ ನೀರಿನ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು.
ಜಗದೇವಪ್ಪ. ಇಒ ಸುರಪುರ

ನಮ್ಮ ಗ್ರಾಮಕ್ಕೆ ದಿನಕ್ಕೆ ಎರಡು ಬಾರಿ ಟ್ಯಾಂಕರ್‌ ನೀರು ಸರಬರಾಜು ಮಾಡುತ್ತಿದ್ದು, ಇದು ಜನತೆಗೆ ಸಾಲುತ್ತಿಲ್ಲ. ಪ್ರತಿ ವಾರ್ಡ್‌ಗೆ ಒಂದರಂತೆ ಸಮಯದ ಅನುಗುಣವಾಗಿ ನೀರು ಸರಬರಾಜು ಮಾಡಬೇಕು ಎಂದು ಹಲವು ಬಾರಿ ಅಧಿಕಾರಿಗಳಲ್ಲಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ನೀರಿನ ಸಮಸ್ಯೆ ಹೆಚ್ಚಾಗಿದ್ದರಿಂದ ಹಲವು ಜನತೆ ಗ್ರಾಮವನ್ನೆ ತೊರೆದು ಬೇರೆ ಊರಿಗೆ ಹೋಗಿದ್ದಾರೆ. ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
•ಶರಣಪ್ಪ ಗಾಯಕವಾಡ, ನಗನೂರ ನಿವಾಸಿ

ಗುಂಡಭಟ್ಟ ಜೋಶಿ

ಟಾಪ್ ನ್ಯೂಸ್

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.