ಕೃತಕವಾಗಿ ಮಾವು ಮಾಗಿಸುವುದು ಅಪರಾಧ

ಆರೋಗ್ಯದ ಮೇಲೆ ರಾಸಾಯನಿಕಗಳ ದುಷ್ಪರಿಣಾಮ • ಎಚ್ಚರವಹಿಸಲು ಗ್ರಾಹಕರಿಗೆ ಅಧಿಕಾರಿಗಳ ಸಲಹೆ

Team Udayavani, May 20, 2019, 12:38 PM IST

kolar-tdy4..

ಮಾರುಕಟ್ಟೆಯಲ್ಲಿ ಮಾವು ಫಸಲಿಗೆ ಮುನ್ನವೇ ಸಿಗುವ ಹಣ್ಣಾದ ಸುಂದರ ಹಾಗೂ ಬಣ್ಣದ ಮಾವು.

ಕೋಲಾರ: ಮನುಷ್ಯರು ಸೇವಿಸುವ ಸ್ವಾಭಾವಿಕ ಆಹಾರಗಳಲ್ಲಿ ಹಣ್ಣುಗಳು ಅತಿ ಮುಖ್ಯವಾಗಿದ್ದು, ಅವುಗಳನ್ನು ಆಕರ್ಷಿಸಲು ಮತ್ತು ಕೃತಕವಾಗಿ ಹಣ್ಣಾಗಿಸಲು ಕೆಲವು ಮಾರಣಾಂತಿಕ ರಾಸಾಯಿಕ ಬಳಸಲಾಗುತ್ತಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು, ಗ್ರಾಹಕರು ಎಚ್ಚರಿಕೆ ವಹಿಸುವಂತೆ ತೋಟಗಾರಿಕೆ ಇಲಾಖೆ ಮತ್ತು ಜಿಲ್ಲಾಡಳಿತ ಹೇಳಿದೆ.

ಗ್ರಾಹಕರು ಈ ಹಣ್ಣುಗಳ ಸೇವಿಸುವಾಗ ಎಚ್ಚರ ವಹಿಸಬೇಕು. ಗ್ರಾಹಕರನ್ನು ಆಕರ್ಷಿಸಲು ಕೃತಕವಾಗಿ ಹಣ್ಣು ಮಾಗಿಸುವುದು ರೂಢಿಯಲ್ಲಿದೆ. ಇದು ತುಂಬಾ ಅಪಾಯಕಾರಿ ಎಂದು ವೈಜ್ಞಾನಿಕವಾಗಿ ದೃಢಪಟ್ಟಿದೆ. ಮಾಗಿಸಲು ಬಳಸುವ ಕ್ಯಾಲ್ಸಿಯಂ ಕಾರ್ಬೈಡ್‌ ಅನ್ನು ಮಸಾಲಾ ಎಂದೂ ಕರೆಯಲಾಗುತ್ತದೆ.

ಕ್ಯಾಲ್ಸಿಯಂ ಕಾರ್ಬೈಡ್‌ ಒಂದು ರಾಸಾಯನಿಕ ವಸ್ತುವಾಗಿದ್ದು, ಇದು ಪರಿಶುದ್ಧವಾಗಿರುವಾಗ ಯಾವುದೇ ಬಣ್ಣವಿರುವುದಿಲ್ಲ, ಕಲುಷಿತಗೊಂಡಾಗ ಬೂದು ಬಣ್ಣದಿಂದ ಕಪ್ಪು ಬಣ್ಣಕ್ಕೆ ತಿರುಗುತ್ತದೆ. ವಾಸನೆಯಲ್ಲಿ ಬೆಳ್ಳುಳ್ಳಿಗೆ ಹೋಲುತ್ತದೆ. ಕ್ಯಾಲ್ಸಿಯಂ ಕಾರ್ಬೈಡ್‌ನ‌ಲ್ಲಿ ಆರ್ಸೆನಿಕ್‌ ಮತ್ತು ಫಾಸ್ಪರಸ್‌ ಬೈಡ್ರೈಡ್‌ ಎಂಬ ಅನಿಲ ಇರುತ್ತವೆ. ಕ್ಯಾಲ್ಸಿಯಂ ಕಾರ್ಬೈಡ್‌ನಿಂದ ಮಾಗಿಸಲ್ಪಡುವ ಹಣ್ಣುಗಳು ಅತಿ ಮೃದುವಾಗಿರುವುದಲ್ಲದೆ ರುಚಿ ಹಾಗೂ ಪರಿಮಳ ಕುಂಠಿತವಾಗಿರುತ್ತದೆ. ಕ್ಯಾಲ್ಸಿಯಂ ಕಾರ್ಬೈಡ್‌ನಿಂದ ಮಾಗಿಸುವ ಹಣ್ಣುಗಳು ಏಕರೂಪದಲ್ಲಿ ಹಣ್ಣಾದರೂ ಒಳಗಿನ ತಿರುಳು ಉತ್ತಮ ಗುಣಮಟ್ಟದ್ದಲ್ಲ. ಇವುಗಳನ್ನು ಸೇವಿಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಕ್ಯಾಲ್ಸಿಯಂ ಕಾರ್ಬೈಡ್‌ ವಿನಾಶಕಾರಿಯಾಗಿದೆ. ಇದರಿಂದ ಮಾಗಿಸಿದ ಹಣ್ಣುಗಳನ್ನು ಸೇವಿಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಈ ರಾಸಾಯನಿಕವು ಆರ್ಸೆನಿಕ್‌ ಹಾಗೂ ಫಾಸ್ಪರಸ್‌ ಹೈಡ್ರೈಡ್‌ ಅಂಶ ಹೊಂದಿರುವುದರಿಂದ ಕ್ಯಾನ್ಸರ್‌ಗೆ ಕಾರಣವಾಗುತ್ತದೆ.

ಈ ರಾಸಾಯನಿಕ ಸೇವನೆಯಿಂದ (ಹಣ್ಣುಗಳ ರೂಪದಲ್ಲಿ) ಪ್ರಥಮವಾಗಿ ವಾಂತಿ, ಅತಿಸಾರ, ಎದೆಯುರಿ ಹಾಗೂ ಕಿಬ್ಬೊಟ್ಟೆಯಲ್ಲಿ ಉರಿ, ಸುಸ್ತು, ದುರ್ಬಲತೆ, ನುಂಗಲು ಕಷ್ಟವಾಗುವುದು, ಗಂಟಲ ಕೆರೆತ, ಕೆಮ್ಮು ಮತ್ತು ಉಸಿರಾಟದಲ್ಲಿ ತೊಂದರೆ, ಅತಿಯಾದ ಸೇವನೆಯಿಂದ ಶ್ವಾಸಕೋಶಗಳಲ್ಲಿ ಹಾನಿಕಾರಕ ದ್ರವ ತುಂಬಿಕೊಂಡು ಸಾವಿಗೆ ಕಾರಣವಾಗುತ್ತದೆ.

ಕೃತಕ ಹಣ್ಣು ಮಾಗಿಸುವಿಕೆ: ಹಣ್ಣುಗಳಲ್ಲಿರುವ ಅಸಿಟಲಿನ್‌, ಎಥಿಲಿನ್‌ ಹಾಗೂ ಇತರೆ ಅನಿಲಗಳು ಹಣ್ಣುಗಳ ಬಣ್ಣ ಬದಲಾಗಿಸುವಿಕೆಯಿಂದ ಹಿಡಿದು ಹಣ್ಣನ್ನು ಮಾಗಿಸುವುದರಲ್ಲಿ ಪರಿಪೂರ್ಣ ಕಾರ್ಯ ನಿರ್ವಹಿಸುತ್ತದೆ. ಈ ರೀತಿ ಕೃತಕವಾಗಿ ಹಣ್ಣು ಮಾಗಿಸುವುದರಿಂದ ಗುಣಮಟ್ಟದಲ್ಲಿ ಬಹಳ ಏರುಪೇರಾಗುತ್ತವೆ. ಜೊತೆಗೆ ಕೃತಕ ಹಣ್ಣು ಮಾಗಿಸುವಿಕೆಗೆ ರಾಸಾಯನಿಕಗಳ ಪ್ರಮಾಣವು ಸಹ ಹೆಚ್ಚಾಗುತ್ತಿದೆ.

ಕಾರ್ಬೈಡ್‌ ಅನಿಲ: ಆಹಾರ ಭದ್ರತೆ ಮತ್ತು ಗುಣಮಟ್ಟ ಕಾಯ್ದೆ 2006, 2011ರ ಕಾನೂನಿನಡಿ ಹಲವು ನಿಬಂಧನೆಗಳಿದೆ.

ಆಹಾರ ಭದ್ರತೆ ಮತ್ತು ಗುಣಮಟ್ಟ ನಿಯಂತ್ರಣ ಕಾಯ್ದೆ, 2011, 2.3.5ರ ಪ್ರಕಾರ ಕ್ಯಾಲ್ಸಿಯಂ ಕಾರ್ಬೈಡ್‌ ಅನಿಲವನ್ನು ಹಣ್ಣು ಮಾಗಿಸುವುದಕ್ಕಾಗಿ ಉಪಯೋಗಿಸುವುದು ನಿಷೇಧ. ಯಾವುದೇ ವ್ಯಕ್ತಿಯು ಕಾರ್ಬೈಡ್‌ ಅನಿಲ ಮಾರುವುದಾಗಲಿ, ಪ್ರಸ್ತಾಪಿಸುವುದಾಗಲಿ ಹಾಗೂ ಅಸಿಟಲಿನ್‌ ಅನಿಲದಿಂದ ಹಣ್ಣಾಗಿಸುವುದನ್ನು ಸಹ ಕಾರ್ಬೈಡ್‌ ಅನಿಲವೆಂದು ಪರಿಗಣಿಸಿ ನಿಷೇಧಿಸಲ್ಪಟ್ಟಿದೆ.

ಆಹಾರ ಭದ್ರತೆ ಮತ್ತು ಗುಣಮಟ್ಟ ಕಾಯ್ದೆ 2006, ಸೆಕ್ಷನ್‌ 50ರ ಅನ್ವಯ ನೈಸರ್ಗಿಕವಲ್ಲದ ಆಹಾರವನ್ನು ಮಾರುವುದಕ್ಕೆ ದಂಡ ತೆರಬೇಕಾಗುತ್ತದೆ.

ಆಹಾರ ಭದ್ರತೆ ಮತ್ತು ಗುಣಮಟ್ಟ ಕಾಯ್ದೆ, ಸೆಕ್ಷೆನ್‌ 2006ರ ಅನ್ವಯ ಯಾವುದೇ ವ್ಯಕ್ತಿಯು ಅಥವಾ ವ್ಯಕ್ತಿಯ ಪರವಾಗಿ, ಅಸುರಕ್ಷಿತ ಆಹಾರವನ್ನು ಮಾರುವುದಾಗಲಿ, ಆಮದು ಮಾಡಿಕೊಳ್ಳುವುದಾಗಲಿ, ಶೇಖರಣೆ ಮಾಡುವುದಾಗಲಿ, ವಿತರಣೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ.

ಮಾವು, ಸೇಬನ್ನು ತೊಳೆದು ಅಥವಾ ಸಿಪ್ಪೆ ತೆಗೆದು ತಿನ್ನಿ

ಗ್ರಾಹಕರು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳೆಂದರೆ, ಹಣ್ಣುಗಳನ್ನು ಸೇವನೆ ಮಾಡುವುದಕ್ಕಿಂತ ಮೊದಲು ಕುಡಿಯುವ ನೀರಿನಲ್ಲಿ ಹಣ್ಣುಗಳನ್ನು ಕೆಲವು ನಿಮಿಷಗಳವರೆಗೆ ಚೆನ್ನಾಗಿ ತೊಳೆಯುವುದರಿಂದ ರಾಸಾಯನಿಕಗಳು ಸ್ವಚ್ಛವಾಗುತ್ತವೆ. ಮಾವು ಮತ್ತು ಸೇಬನ್ನು ಸೇವಿಸುವಾಗ ಹೋಳುಗಳಾಗಿ ಕತ್ತರಿಸಿ ಸೇವಿಸುವುದು. ಸಾಧ್ಯವಾದರೆ ಸಿಪ್ಪೆಯನ್ನು ಸುಲಿದು ಹಣ್ಣನ್ನು ಸೇವಿಸುವುದು ಉತ್ತಮ ಎಂದು ತಜ್ಞರು ಸಲಹೆ ನೀಡಿದ್ದಾರೆ.
● ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.