ಕ್ರಿಮಿನಲ್ ಆರೋಪಿಯನ್ನು ಇರಿದು ಕೊಂದ ನಾಲ್ವರು ಅಪರಿಚಿತ ದುಷ್ಕರ್ಮಿಗಳು
Team Udayavani, May 20, 2019, 3:49 PM IST
ಮುಂಬಯಿ : ಮುಂಬಯಿ ಹೊರವಲಯದ ಘಾಟ್ ಕೋಪರ್ನಲ್ಲಿ ಮೂವರು ಅಪರಿಚಿತ ವ್ಯಕ್ತಿಗಳು 40ರ ಹರೆಯದ ವ್ಯಕ್ತಿಯೋರ್ವರನ್ನು ಇರಿದು ಕೊಂದರೆಂದು ಪೊಲೀಸರು ತಿಳಿಸಿದ್ದಾರೆ.
ಘಾಟ್ ಕೋಪರ್ ನಲ್ಲಿನ ಜಾಗೃತಿ ನಗರ ಮೆಟ್ರೋ ರೈಲು ನಿಲ್ದಾಣಕ್ಕೆ ಸಮೀಪ ಬೆಳಗ್ಗೆ 11.30ರ ಹೊತ್ತಿಗೆ ಈ ಘಟನೆ ನಡೆದಿದೆ.
ಬಬ್ಲೂ ದುಬೆ ಅಲಿಯಾಸ್ ಛೋಟಿ ಯನ್ನು ಅಪರಿಚಿತ ದುಷ್ಕರ್ಮಿಗಳು ಚೂರಿಯಿಂದ ಇರಿದರು. ತೀವ್ರವಾಗಿ ಗಾಯಗೊಂಡ ಬಬ್ಲೂ ವನ್ನು ಒಡನೆಯೇ ಸಮೀಪದ ಸರಕಾರಿ ಆಸ್ಪತ್ರೆಗೆ ಒಯ್ಯಲಾಯಿತು. ಆದರೆ ಅಲ್ಲಿನ ವೈದ್ಯರು, ಬಬ್ಲೂ ಅದಾಗಲೇ ಮೃತಪಟ್ಟಿರುವುದಾಗಿ ಹೇಳಿದರು.
ಬಬ್ಲೂ ವಿರುದ್ಧ ಕೊಲೆ ಯತ್ನ ಸಹಿತ ಕನಿಷ್ಠ ನಾಲ್ಕು ಕ್ರಿಮಿನಲ್ ಕೇಸುಗಳಿವೆ.
ಬಬ್ಲೂ ಕೊಲೆ ಸಂಬಂಧ ಘಾಟ್ ಕೋಪರ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು ವೈಯಕ್ತಿಕ ದ್ವೇಷದ ಕಾರಣಕ್ಕೆ ಈತನ ಕೊಲೆ ನಡೆದಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್