ಸದ್ಯ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕೆಲಸ ಬಂದ್
Team Udayavani, May 20, 2019, 5:01 PM IST
ಕುಮಟಾ: ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ಕಾಮಗಾರಿಯಿಂದ ಸಮಸ್ಯೆ ಎದುರಿಸುತ್ತಿರುವ ತಾಲೂಕಿನ ತಂಡ್ರಕುಳಿ ಗ್ರಾಮಕ್ಕೆ ಶಾಸಕ ದಿನಕರ ಶೆಟ್ಟಿ ಭಾನುವಾರ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.
ಸ್ಥಳೀಯರೊಂದಿಗೆ ಘಟನೆಯ ಸಂಪೂರ್ಣ ಮಾಹಿತಿ ಪಡೆದು ಬಳಿಕ ಮಾತನಾಡಿದ ಅವರು, ಘಟನೆ ನಡೆದ ದಿನ ನಾನು ಬೆಂಗಳೂರಿನಲ್ಲಿದ್ದೆ. ಇಲ್ಲಿನ ಸ್ಥಿತಿ ನೋಡಿದಾಗ ತೀರಾ ಬೇಸರವಾಗಿದೆ. ಜನ ಸಂಪೂರ್ಣ ಸಹಕಾರ ನೀಡಿದ್ದಾರೆ. ಆದರೆ ಸಂಪೂರ್ಣ ಅವೈಜ್ಞಾನಿಕವಾಗಿ ರಸ್ತೆಯ ಮೇಲ್ಭಾಗದಲ್ಲಿ ಧರೆ ಸಂರಕ್ಷಣೆ ಕಾಮಗಾರಿ ಮಾಡಿ ಅಲ್ಲಿಯೇ ಕೆಳಭಾಗದಲ್ಲಿ ಬಂಡೆ ಸ್ಫೋಟಿಸುವ ಕೆಲಸ ಸರಿಯಾದದ್ದಲ್ಲ. ಸ್ಫೊಧೀಟದ ಸಂದರ್ಭದಲ್ಲಿ ನೂರಾರು ಮೀಟರ್ ದೂರದವರೆಗೆ ಭೂಮಿ ಕಂಪಿಸುತ್ತದೆ. ಹೀಗಿರುವಾಗ ಮಣ್ಣಿನ ಗುಡ್ಡಕ್ಕೆ ಸಿಮೆಂಟ್ ಲೇಪನ ಖಂಡಿತವಾಗಿಯೂ ಸುರಕ್ಷಿತವಾಗಿ ಉಳಿಯುವುದಿಲ್ಲ. ಮತ್ತೆ ಕುಸಿತವಾಗುವುದು ಖಚಿತ. ಆದ್ದರಿಂದ ತಾಲೂಕು ಆಡಳಿತ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಗುತ್ತಿಗೆದಾರರು, ಅಧಿಕಾರಿಗಳು ಬಂದು ಸಮಸ್ಯೆ ಬಗೆಹರಿಸಬೇಕು. ಅದರ ನಂತರವೇ ಇಲ್ಲಿ ಕೆಲಸ ಮಾಡಲು ಅವಕಾಶ ಕೊಡುತ್ತೇವೆ. ತಂಡ್ರಕುಳಿ ಗ್ರಾಮಸ್ಥರಿಗೆ ಹಿಂದೆ ಆದ ಹಾನಿಗೆ ಪರಿಹಾರವೂ ಕೊಟ್ಟಿಲ್ಲ. ಉಪವಿಭಾಗಾಧಿಕಾರಿಗಳು ಐಆರ್ಬಿಗೆ ನೋಟಿಸ್ ಕೊಟ್ಟರೆ ಪ್ರಯೋಜನವಿಲ್ಲ. ಈಗ ಆಗಿರುವ ಹಾನಿಗೆ ಪರಿಹಾರ ಕೊಡುವವರು ಯಾರು? ಆದ್ದರಿಂದ ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಬೇಕು ಎಂದು ತಿಳಿಸಿದರು.
ಗಣೇಶ ಅಂಬಿಗ ಮಾತನಾಡಿ, ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಅಧಿಕಾರಿಗಳೊಟ್ಟಿಗೆ ತಂಡ್ರಕುಳಿ ಸಮಸ್ಯೆ ಬಗ್ಗೆ ಸಭೆ ನಡೆಸುವವರೆಗೆ ಇಲ್ಲಿ ಚತುಷ್ಪಥ ಕಾಮಗಾರಿ ಬಂದ್ ಮಾಡಲಾಗುವುದಾಗಿ ತಹಶೀಲ್ದಾರ್ ಅವರು ಭರವಸೆ ಕೊಟ್ಟಿದ್ದರು. ಆದರೆ ಐಆರ್ಬಿಯವರು ಬಂದು ಮತ್ತೆ ಕೆಲಸ ಆರಂಭಿಸಿದ್ದರು. ನಾವು ಪ್ರತಿಭಟಿಸಿ ಹಿಂದೆ ಕಳಿಸಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಜಿಪಂ ಸದಸ್ಯ ಗಜು ಪೈ, ಗಣಪಯ್ಯ ಅಂಬಿಗ, ಜಗ್ಗು ಭಟ್, ಹೇಮಂತಕುಮಾರ ಗಾಂವಕರ ಸೇರಿದಂತೆ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
MUST WATCH
ಹೊಸ ಸೇರ್ಪಡೆ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ