ಟೆಂಪೋ ಮೇಲೆ ಉರುಳಿ ಬಿದ್ದ ಟ್ರಕ್: 5 ಮಹಿಳೆಯರು, ಇಬ್ಬರು ಮಕ್ಕಳು ಸೇರಿ 13 ಸಾವು
Team Udayavani, May 20, 2019, 7:23 PM IST
ಮುಂಬಯಿ : ಮಹಾರಾಷ್ಟ್ರದ ಬುಲ್ದಾನಾ ಜಿಲ್ಲೆಯಲ್ಲಿ ಮುಂಬಯಿ – ನಾಗಪುರ ಹೆದ್ದಾರಿಯಲ್ಲಿ ಟ್ರಕ್ ಒಂದು ಟೆಂಪೋ ಮೇಲೆ ಉರುಳಿ ಬಿದ್ದ ಭೀಕರ ಅಪಘಾತದಲ್ಲಿ ಐವರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿ ಒಟ್ಟು 13 ಮಂದಿ ಮೃತಪಟ್ಟ ಘಟನೆ ವರದಿಯಾಗಿದೆ.
ಇಂದು ಸೋಮವಾರ ಮಧ್ಯಾಹ್ನ 2.15ರ ಸುಮಾರಿಗೆ ಈ ಅವಘಡ ಮಲ್ಕಾಪುರದಲ್ಲಿ ನಡೆದಿದೆ. ಮೃತರು ಗೂಡಿಟ್ಟಿಗೆ ಕಾರ್ಖಾನೆಯ ಕಾರ್ಮಿಕರಾಗಿದ್ದು ದಿನಸಿ ಸಾಮಗ್ರಿಗಳನ್ನು ಖರೀದಿಸಿ ಅನೂರಾಬಾದ್ ಗ್ರಾಮಕ್ಕೆ ಮರಳುತ್ತಿದ್ದರು.
ಟ್ರಕ್ ಟೈರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ್ದೇ ಈ ಭೀಕರ ಅಪಘಾತಕ್ಕೆ ಕಾರಣವಾಯಿತು. ಟ್ರಕ್ ಟೆಂಪೋ ಮೇಲೆ ಉರುಳಿ ಬಿದ್ದ ಕಾರಣ ಅದರೊಳಗಿದ್ದವರ ಪೈಕಿ ಹದಿಮೂರು ಮಂದಿ ಸ್ಥಳದಲ್ಲೇ ಮೃತಪಟ್ಟರು.
ಇತರ ಮೂವರಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸ್ ಸುಪರಿಂಟೆಂಡೆಂಟ್ ದಿಲೀಪ್ ಪಾಟೀಲ್ ಭುಜಬಲ್ ತಿಳಿಸಿದ್ದಾರೆ.
ಮೇ 18ರಂದು ಗುಜರಾತ್ ನ ಕಚ್ ನಿಂದ ಹೊರಟಿದ್ದ ಟ್ರಕ್, 400 ಚೀಲ ಉಪ್ಪನ್ನು ನಾಗಪುರಕ್ಕೆ ಸಾಗಿಸುತ್ತಿತ್ತು. ಮೃತರಲ್ಲಿ ಐವರು ಅನೂರಾಬಾದ್ ನವರು; ಆರು ಮಂದಿ ನಗ್ರಾಜಿ ಯವರು ಮತ್ತು ಇಬ್ಬರು ಭೂಸವಾಲ್ ನವರು ಎಂದು ಭುಜಬಲ್ ತಿಳಿಸಿದರು.
ಅವಘಡದ ಬಳಿಕ ಟ್ರಕ್ ಡ್ರೈವರ್ ನಾಪತ್ತೆಯಾಗಿದ್ದು ಪೊಲೀಸರು ಆತನಿಗಾಗಿ ಹುಡುಕಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ
Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್ ಆದೇಶದಲ್ಲೇನಿದೆ?
MUST WATCH
ಹೊಸ ಸೇರ್ಪಡೆ
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ
UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ
B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು
ಬಿಜೆಪಿ ಶಾಸಕ ಯತ್ನಾಳ ಶುಗರ್ ಫ್ಯಾಕ್ಟ್ರಿ ಹೆಂಗ್ ಕಟ್ಟಿದ್ರು: ಶಿವಾನಂದ ಪಾಟೀಲ